AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

₹20 ಲಕ್ಷ ಬಹುಮಾನದ ಆಸೆಗೆ ನಕಲಿ ಎನ್​ಕೌಂಟರ್: ಸೇನಾ ಕ್ಯಾಪ್ಟನ್ ವಿರುದ್ಧ ಆರೋಪ ಪಟ್ಟಿ

ಕಳೆದ ವರ್ಷ ಜುಲೈ 18ರಂದು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಮಶಿಪುರದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ರಜೌರಿ ಜಿಲ್ಲೆಯ ಇಮ್ತಿಯಾಜ್ ಅಹಮದ್, ಅಬ್ರಾರ್ ಅಹಮದ್ ಮತ್ತು ಮೊಹಮ್ಮದ್ ಇಬ್ರಾರ್ ಎಂಬ ಮೂವರು ಯುವಕರನ್ನು ಹತ್ಯೆ ಮಾಡಿ ಅವರಿಗೆ ಉಗ್ರರೆಂದು ಹಣೆಪಟ್ಟಿ ಕಟ್ಟಲಾಗಿತ್ತು.

₹20 ಲಕ್ಷ ಬಹುಮಾನದ ಆಸೆಗೆ ನಕಲಿ ಎನ್​ಕೌಂಟರ್: ಸೇನಾ ಕ್ಯಾಪ್ಟನ್ ವಿರುದ್ಧ ಆರೋಪ ಪಟ್ಟಿ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
| Edited By: |

Updated on:Jan 11, 2021 | 4:09 PM

Share

ಶ್ರೀನಗರ: ₹ 20 ಲಕ್ಷದ ಬಹುಮಾನ ಹಣ ಪಡೆಯುವ ಆಸೆಯಿಂದ ನಕಲಿ ಎನ್​ಕೌಂಟರ್ ನಡೆಸಿದ ಸೇನಾ ಕ್ಯಾಪ್ಟನ್ ಭೂಪಿಂದರ್ ಸಿಂಗ್ ವಿರುದ್ಧ ಪೊಲೀಸರು ಆರೋಪ ಪಟ್ಟಿ ದಾಖಲಿಸಿದ್ದಾರೆ. ಕಳೆದ ವರ್ಷ ಜುಲೈ 18ರಂದು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಮಶಿಪುರದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ರಜೌರಿ ಜಿಲ್ಲೆಯ ಇಮ್ತಿಯಾಜ್ ಅಹಮದ್, ಅಬ್ರಾರ್ ಅಹಮದ್ ಮತ್ತು ಮೊಹಮ್ಮದ್ ಇಬ್ರಾರ್ ಎಂಬ ಮೂವರು ಯುವಕರನ್ನು ಹತ್ಯೆ ಮಾಡಿ ಅವರಿಗೆ ಉಗ್ರರೆಂದು ಹಣೆಪಟ್ಟಿ ಕಟ್ಟಲಾಗಿತ್ತು.

ಸೇನಾ ಕ್ಯಾಪ್ಟನ್ ಭೂಪಿಂದರ್ ಸಿಂಗ್ ಸದ್ಯ ಸೇನಾ ಕಸ್ಟಡಿಯಲ್ಲಿದ್ದು ಅವರನ್ನು ಕೋರ್ಟ್ ಮಾರ್ಷಲ್​ಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ತನಿಖಾ ತಂಡ ರಜೌರಿ ಜಿಲ್ಲೆಯ ಚೀಫ್ ಜ್ಯುಡಿಷಿಯಲ್ ಮೆಜಿಸ್ಟ್ರೇಟ್​ಗೆ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ 75 ಸಾಕ್ಷಿಗಳ ಹೆಸರು ನಮೂದಿಸಿದೆ. ಅಷ್ಟೇ ಅಲ್ಲದೆ ಈ ಪ್ರಕರಣದಲ್ಲಿನ ಆರೋಪಿಗಳ ಫೋನ್ ಕರೆಗಳ ಮಾಹಿತಿಯನ್ನೂ ನೀಡಿದೆ. ಭೂಪಿಂದರ್ ಸಿಂಗ್ ಜತೆ ತಬೀಶ್ ನಾಜಿರ್ ಮತ್ತು ಬಿಲಾಲ್ ಅಹ್ಮದ್ ಲೋನ್ ಅವರು ಪ್ರಕರಣದ ಆರೋಪಿಗಳಾಗಿದ್ದಾರೆ ಎಂದು ಚಾರ್ಜ್ ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಬಿಲಾಲ್ ಅಹ್ಮದ್ ಲೋನ್ ಈಗಾಗಲೇ ಮೆಜಿಸ್ಟ್ರೇಟ್ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ಎನ್​ಕೌಂಟರ್​ನಲ್ಲಿ ಹತ್ಯೆಯಾದ ಯುವಕರು ಉಗ್ರರಲ್ಲ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾದ ಹಿನ್ನೆಲೆಯಲ್ಲಿ ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಸೆಪ್ಟೆಂಬರ್ ತಿಂಗಳಲ್ಲಿ ಸೇನಾಪಡೆ ಆದೇಶಿಸಿತ್ತು. ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯ (ಎಎಫ್‌ಎಸ್‌ಪಿಎ) ಅಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಸೇನಾಪಡೆ ಮೀರಿದೆ ಎಂಬುದನ್ನು ಮನಗಂಡು ಸೇನಾಪಡೆ ಶಿಸ್ತು ಕ್ರಮಗಳನ್ನು ಕೈಗೊಂಡಿತ್ತು.

ಜಮ್ಮು-ಕಾಶ್ಮೀರ ವಿವಾದಿತ ಎನ್​ಕೌಂಟರ್​: ಮಗನ ಶವ ಹೂಳಲು ಗುಂಡಿ ತೋಡಿದ ತಂದೆ

Published On - 4:09 pm, Mon, 11 January 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?