AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

₹20 ಲಕ್ಷ ಬಹುಮಾನದ ಆಸೆಗೆ ನಕಲಿ ಎನ್​ಕೌಂಟರ್: ಸೇನಾ ಕ್ಯಾಪ್ಟನ್ ವಿರುದ್ಧ ಆರೋಪ ಪಟ್ಟಿ

ಕಳೆದ ವರ್ಷ ಜುಲೈ 18ರಂದು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಮಶಿಪುರದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ರಜೌರಿ ಜಿಲ್ಲೆಯ ಇಮ್ತಿಯಾಜ್ ಅಹಮದ್, ಅಬ್ರಾರ್ ಅಹಮದ್ ಮತ್ತು ಮೊಹಮ್ಮದ್ ಇಬ್ರಾರ್ ಎಂಬ ಮೂವರು ಯುವಕರನ್ನು ಹತ್ಯೆ ಮಾಡಿ ಅವರಿಗೆ ಉಗ್ರರೆಂದು ಹಣೆಪಟ್ಟಿ ಕಟ್ಟಲಾಗಿತ್ತು.

₹20 ಲಕ್ಷ ಬಹುಮಾನದ ಆಸೆಗೆ ನಕಲಿ ಎನ್​ಕೌಂಟರ್: ಸೇನಾ ಕ್ಯಾಪ್ಟನ್ ವಿರುದ್ಧ ಆರೋಪ ಪಟ್ಟಿ
ಪ್ರಾತಿನಿಧಿಕ ಚಿತ್ರ
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jan 11, 2021 | 4:09 PM

Share

ಶ್ರೀನಗರ: ₹ 20 ಲಕ್ಷದ ಬಹುಮಾನ ಹಣ ಪಡೆಯುವ ಆಸೆಯಿಂದ ನಕಲಿ ಎನ್​ಕೌಂಟರ್ ನಡೆಸಿದ ಸೇನಾ ಕ್ಯಾಪ್ಟನ್ ಭೂಪಿಂದರ್ ಸಿಂಗ್ ವಿರುದ್ಧ ಪೊಲೀಸರು ಆರೋಪ ಪಟ್ಟಿ ದಾಖಲಿಸಿದ್ದಾರೆ. ಕಳೆದ ವರ್ಷ ಜುಲೈ 18ರಂದು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಮಶಿಪುರದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ರಜೌರಿ ಜಿಲ್ಲೆಯ ಇಮ್ತಿಯಾಜ್ ಅಹಮದ್, ಅಬ್ರಾರ್ ಅಹಮದ್ ಮತ್ತು ಮೊಹಮ್ಮದ್ ಇಬ್ರಾರ್ ಎಂಬ ಮೂವರು ಯುವಕರನ್ನು ಹತ್ಯೆ ಮಾಡಿ ಅವರಿಗೆ ಉಗ್ರರೆಂದು ಹಣೆಪಟ್ಟಿ ಕಟ್ಟಲಾಗಿತ್ತು.

ಸೇನಾ ಕ್ಯಾಪ್ಟನ್ ಭೂಪಿಂದರ್ ಸಿಂಗ್ ಸದ್ಯ ಸೇನಾ ಕಸ್ಟಡಿಯಲ್ಲಿದ್ದು ಅವರನ್ನು ಕೋರ್ಟ್ ಮಾರ್ಷಲ್​ಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರ ವಿಶೇಷ ತನಿಖಾ ತಂಡ ರಜೌರಿ ಜಿಲ್ಲೆಯ ಚೀಫ್ ಜ್ಯುಡಿಷಿಯಲ್ ಮೆಜಿಸ್ಟ್ರೇಟ್​ಗೆ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ 75 ಸಾಕ್ಷಿಗಳ ಹೆಸರು ನಮೂದಿಸಿದೆ. ಅಷ್ಟೇ ಅಲ್ಲದೆ ಈ ಪ್ರಕರಣದಲ್ಲಿನ ಆರೋಪಿಗಳ ಫೋನ್ ಕರೆಗಳ ಮಾಹಿತಿಯನ್ನೂ ನೀಡಿದೆ. ಭೂಪಿಂದರ್ ಸಿಂಗ್ ಜತೆ ತಬೀಶ್ ನಾಜಿರ್ ಮತ್ತು ಬಿಲಾಲ್ ಅಹ್ಮದ್ ಲೋನ್ ಅವರು ಪ್ರಕರಣದ ಆರೋಪಿಗಳಾಗಿದ್ದಾರೆ ಎಂದು ಚಾರ್ಜ್ ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ.

ಬಿಲಾಲ್ ಅಹ್ಮದ್ ಲೋನ್ ಈಗಾಗಲೇ ಮೆಜಿಸ್ಟ್ರೇಟ್ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ಎನ್​ಕೌಂಟರ್​ನಲ್ಲಿ ಹತ್ಯೆಯಾದ ಯುವಕರು ಉಗ್ರರಲ್ಲ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾದ ಹಿನ್ನೆಲೆಯಲ್ಲಿ ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಸೆಪ್ಟೆಂಬರ್ ತಿಂಗಳಲ್ಲಿ ಸೇನಾಪಡೆ ಆದೇಶಿಸಿತ್ತು. ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯ (ಎಎಫ್‌ಎಸ್‌ಪಿಎ) ಅಡಿಯಲ್ಲಿ ನೀಡಲಾದ ಅಧಿಕಾರಗಳನ್ನು ಸೇನಾಪಡೆ ಮೀರಿದೆ ಎಂಬುದನ್ನು ಮನಗಂಡು ಸೇನಾಪಡೆ ಶಿಸ್ತು ಕ್ರಮಗಳನ್ನು ಕೈಗೊಂಡಿತ್ತು.

ಜಮ್ಮು-ಕಾಶ್ಮೀರ ವಿವಾದಿತ ಎನ್​ಕೌಂಟರ್​: ಮಗನ ಶವ ಹೂಳಲು ಗುಂಡಿ ತೋಡಿದ ತಂದೆ

Published On - 4:09 pm, Mon, 11 January 21

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?