AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಸಾಯನಿಕ ಸೋರಿಕೆಯೇ ಆಂಧ್ರ ಪ್ರದೇಶದ ಫಾರ್ಮಾ ಕಂಪನಿಯಲ್ಲಿ ಸ್ಫೋಟಕ್ಕೆ ಕಾರಣ: ಸಿಎಫ್‌ಒ

ಕಾರ್ಮಿಕರು ಸೋರಿಕೆಯನ್ನು ಗಮನಿಸಿ ಅದನ್ನು ತಡೆಯಲು ಪ್ರಯತ್ನಿಸುತ್ತಿದ್ದರು.ಇದು ಸಂಭವಿಸಿದಾಗ ಸೋರಿಕೆಯನ್ನು ಬಹುತೇಕ ಮುಚ್ಚಿದ್ದರು ಎಂದು ಅವರು ದೂರವಾಣಿ ಮೂಲಕ ಮಾತನಾಡಿದ ರಾವ್ ಹೇಳಿರುವುದಾಗಿ ರಾಯಿಟರ್ಸ್‌ ವರದಿ ಮಾಡಿದೆ. ಭಾರತದಲ್ಲಿ ಇತ್ತೀಚಿನ ವರ್ಷಗಳಲ್ಲಿ ಸಂಭವಿಸಿದ ಅತ್ಯಂತ ಭೀಕರವಾದ ಕೈಗಾರಿಕಾ ಅಪಘಾತಗಳಲ್ಲಿ ಒಂದಾಗಿದೆ ಇದು.

ರಾಸಾಯನಿಕ ಸೋರಿಕೆಯೇ ಆಂಧ್ರ ಪ್ರದೇಶದ ಫಾರ್ಮಾ ಕಂಪನಿಯಲ್ಲಿ ಸ್ಫೋಟಕ್ಕೆ ಕಾರಣ: ಸಿಎಫ್‌ಒ
ಆಂಧ್ರ ಪ್ರದೇಶದ ಫಾರ್ಮಾ ಕಂಪನಿ
ರಶ್ಮಿ ಕಲ್ಲಕಟ್ಟ
|

Updated on:Aug 22, 2024 | 5:52 PM

Share

ದೆಹಲಿ ಆಗಸ್ಟ್ 22: ಆಂಧ್ರ ಪ್ರದೇಶದ ಫಾರ್ಮಾ ಕಂಪನಿಯಲ್ಲಿ(pharmaceutical factory) ಕಾರ್ಮಿಕರು ರಾಸಾಯನಿಕ ಸೋರಿಕೆಯನ್ನು ತಡೆಯಲು ಪ್ರಯತ್ನಿಸುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಈ ಘಟನೆಯಲ್ಲಿ 17 ಜನರು ಸಾವಿಗೀಡಾಗಿದ್ದು 36 ಮಂದಿ ಗಾಯಗೊಂಡರು ಎಂದು ಸಂಸ್ಥೆಯ ಮುಖ್ಯ ಹಣಕಾಸು ಅಧಿಕಾರಿ ಗುರುವಾರ ತಿಳಿಸಿದ್ದಾರೆ. ಆಂಧ್ರಪ್ರದೇಶದ ಖಾಸಗಿ ಸ್ವಾಮ್ಯದ ಎಸ್ಸೆಂಟಿಯಾ ಅಡ್ವಾನ್ಸ್ಡ್ ಸೈನ್ಸಸ್‌ನಲ್ಲಿ ಬುಧವಾರ ಮಧ್ಯಾಹ್ನದ ಸುಮಾರಿಗೆ ಸ್ಫೋಟ ಸಂಭವಿಸಿದೆ. ಅಲ್ಲಿ ಸುಮಾರು 400 ಉದ್ಯೋಗಿಗಳು ಯುನೈಟೆಡ್ ಸ್ಟೇಟ್ಸ್ ಮತ್ತು ಇತರ ಪಾಶ್ಚಿಮಾತ್ಯ ದೇಶಗಳಿಗೆ ರಫ್ತು ಮಾಡಲು ಮಧ್ಯಂತರ ರಾಸಾಯನಿಕಗಳು ಮತ್ತು ಸಕ್ರಿಯ ಪದಾರ್ಥಗಳನ್ನು ತಯಾರಿಸುತ್ತಾರೆ.

ಇದು ದ್ರಾವಕ ಸೋರಿಕೆಯಿಂದ ಸಂಭವಿಸಿದೆ ಎಂದು ತೋರುತ್ತಿದೆ ಎಂದು ಎಸ್ಸಿಯೆಂಟಿಯಾ ಗ್ರೂಪ್‌ನ ಮುಖ್ಯ ಹಣಕಾಸು ಅಧಿಕಾರಿ ಶ್ರೀನಿವಾಸ ರಾವ್ ಕೊರಡಾ ಹೇಳಿದ್ದಾರೆ. ಅಂದಹಾಗೆ ಸೋರಿಕೆಗೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ.

“ಕಾರ್ಮಿಕರು ಸೋರಿಕೆಯನ್ನು ಗಮನಿಸಿ ಅದನ್ನು ತಡೆಯಲು ಪ್ರಯತ್ನಿಸುತ್ತಿದ್ದರು.ಇದು ಸಂಭವಿಸಿದಾಗ ಸೋರಿಕೆಯನ್ನು ಬಹುತೇಕ ಮುಚ್ಚಿದ್ದರು ಎಂದು ಅವರು ದೂರವಾಣಿ ಮೂಲಕ ಮಾತನಾಡಿದ ರಾವ್ ಹೇಳಿರುವುದಾಗಿ ರಾಯಿಟರ್ಸ್‌ ವರದಿ ಮಾಡಿದೆ. ಭಾರತದಲ್ಲಿ ಇತ್ತೀಚಿನ ವರ್ಷಗಳಲ್ಲಿ ಸಂಭವಿಸಿದ ಅತ್ಯಂತ ಭೀಕರವಾದ ಕೈಗಾರಿಕಾ ಅಪಘಾತಗಳಲ್ಲಿ ಒಂದಾಗಿದೆ ಇದು. ರಾಜ್ಯ ಅನಕಾಪಲ್ಲಿ ಜಿಲ್ಲೆಯ ಫಾರ್ಮಾ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಒಂದು ವರ್ಷದ ನಂತರ ಈ ಘಟನೆ ಸಂಭವಿಸಿದೆ. ಪ್ರಸ್ತುತ ಘಟನೆಯಲ್ಲಿ ಇಬ್ಬರು ಸಾವಿಗೀಡಾಗಿದ್ದು, ಐವರು ಗಾಯಗೊಂಡಿದ್ದರು.

ಕಂಪನಿಯು ಸೋರಿಕೆಗೆ ಕಾರಣವನ್ನು ತನಿಖೆ ಮಾಡಲು ಅಧಿಕಾರಿಗಳೊಂದಿಗೆ ಸಹಕರಿಸುತ್ತಿದೆ, ಹೊಗೆ ಮತ್ತು ಬೆಂಕಿ ಇದ್ದ ಕಾರಣ ತಕ್ಷಣವೇ ತನಿಖೆ ಮಾಡಲಾಗುತ್ತಿಲ್ಲ ಎಂದು ರಾವ್ ಹೇಳಿದರು. ಕ್ಲೋಸ್ಡ್-ಸರ್ಕ್ಯೂಟ್ ಟೆಲಿವಿಷನ್ ಫೂಟೇಜ್ ಅನ್ನು ಸ್ಕ್ಯಾನ್ ಮಾಡುತ್ತಿದ್ದೇವೆ. ಇದು ಮನುಷ್ಯ ನಿರ್ಮಿತ ಲೋಪವೇ ಎಂದು ನಿರ್ಧರಿಸಲು ಗಾಯಗೊಂಡವರನ್ನು ಪ್ರಶ್ನಿಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಪ್ರಾಥಮಿಕ ತನಿಖೆಯಲ್ಲಿ ರಾಸಾಯನಿಕ ಕ್ರಿಯೆಗಳಿಗೆ ಕಾರಣವಾದ ಕೆಲವು ಆವಿ ಸೋರಿಕೆಯಾಗಿದೆ, ಇದು ಸ್ಫೋಟಕ್ಕೆ ಕಾರಣವಾಯಿತು” ಎಂದು ರಾಜ್ಯ ಕೈಗಾರಿಕಾ ಕಾರ್ಯದರ್ಶಿ ಎನ್.ಯುವರಾಜ್ ಹೇಳಿದ್ದಾರೆ. ಈ ದ್ರಾವಕ ಮೀಥೈಲ್ ಟೆರ್ಟ್-ಬ್ಯುಟೈಲ್ ಈಥರ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಸುಪ್ರೀಂಕೋರ್ಟ್‌ ಮನವಿಯ ನಂತರ 11 ದಿನಗಳ ಮುಷ್ಕರ ಮುಕ್ತಾಯಗೊಳಿಸಿದ ಏಮ್ಸ್ ವೈದ್ಯರು

ಮೀಥೈಲ್ ಟೆರ್ಟ್-ಬ್ಯುಟೈಲ್ ಈಥರ್, ಅಥವಾ MTBE, ಸುಡುವ ದ್ರವವಾಗಿದ್ದು, ಇದು ಹೆಚ್ಚು ಪರಿಣಾಮಕಾರಿಯಾದ ಸುಡುವಿಕೆಯನ್ನು ಸಾಧಿಸಲು ಸೀಸದ ಗ್ಯಾಸೋಲಿನ್‌ಗಳಲ್ಲಿ ಸಂಯೋಜಕವಾಗಿ ಬಳಕೆಯನ್ನು ಕಂಡುಕೊಳ್ಳುತ್ತದೆ ಎಂದು U.S. ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (CDC) ತನ್ನ ವೆಬ್‌ಸೈಟ್‌ನಲ್ಲಿ ಹೇಳುತ್ತದೆ.

ಅಪಘಾತದ ಬಗ್ಗೆ ತನಿಖೆ ನಡೆಸಲಾಗುವುದು ಎಂದ ರಾಜ್ಯದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು , ಇದು ಅಂತಹ ಕೊನೆಯ ಘಟನೆಯಾಗಲಿದೆ ಎಂದು ನಾವು ಭಾವಿಸುತ್ತೇವೆ ಎಂದಿದ್ದಾರೆ. ಕಾರ್ಖಾನೆಯು 2019 ರಲ್ಲಿ 2 ಶತಕೋಟಿ ರೂಪಾಯಿಗಳ ($ 24 ಮಿಲಿಯನ್) ಹೂಡಿಕೆಯೊಂದಿಗೆ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಎಂದು ಜಿಲ್ಲಾಧಿಕಾರಿ ವಿಜಯ ಕೃಷ್ಣನ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:51 pm, Thu, 22 August 24

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?