AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆಂಗಲ್ಪಟ್ಟು: ಮದುವೆಯಾದ ಎರಡನೇ ದಿನವೇ ಪತ್ನಿಯ ಮದುವೆ ಸೀರೆಯೊಂದಿಗೆ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ

ತಮಿಳುನಾಡಿನಲ್ಲಿ ಮದುವೆಯಾದ ಎರಡನೇ ದಿನವೇ ಪತ್ನಿಯ ಮದುವೆ ಸೀರೆಯೊಂದಿಗೆ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೆಂಗಲ್ಪಟ್ಟು ಪೊಲೀಸರು ಅನುಮಾನಾಸ್ಪದ ಸಾವಿನ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ನವ ವಧು ಮತ್ತು ಆಕೆಯ ಪೋಷಕರ ವಿಚಾರಣೆ ನಡೆಸುತ್ತಿದ್ದಾರೆ.

ಚೆಂಗಲ್ಪಟ್ಟು: ಮದುವೆಯಾದ ಎರಡನೇ ದಿನವೇ ಪತ್ನಿಯ ಮದುವೆ ಸೀರೆಯೊಂದಿಗೆ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ
ಮದುವೆಯಾದ ಎರಡನೇ ದಿನವೇ ಪತ್ನಿಯ ಮದುವೆ ಸೀರೆಯೊಂದಿಗೆ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ
Follow us
ಸಾಧು ಶ್ರೀನಾಥ್​
|

Updated on: Sep 21, 2023 | 4:19 PM

ಚೆಂಗಲ್ಪಟ್ಟು: ತಮಿಳುನಾಡಿನ ಚೆಂಗಲ್‌ಪಟ್ಟು ಜಿಲ್ಲೆಯಲ್ಲಿ 27 ವರ್ಷದ ನವವಿವಾಹಿತರೊಬ್ಬರು ಮದುವೆಯಾದ (wedding) ಕೇವಲ ಎರಡು ದಿನಗಳಲ್ಲಿ ತನ್ನ ಪತ್ನಿಯ ಮದುವೆಯ ಸೀರೆಯನ್ನು ಬಳಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ. ಮೃತರನ್ನು ರಾಣಿಪೇಟೆ ಮೂಲದ ಸರವಣನ್ ಎಂದು ಗುರುತಿಸಲಾಗಿದ್ದು, ಸುಂಗುವಚತಿರಂನಲ್ಲಿರುವ (Sunguvachatiram) ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಭಾನುವಾರ ಚೆಂಗಲ್ಪಟ್ಟು ( Chengalpattu) ಸಮೀಪದ ದಿಮ್ಮಾವರಂನ ಶ್ವೇತಾ ಅಲಿಯಾಸ್ ರಾಜೇಶ್ವರಿ (21) ಅವರನ್ನು ವಿವಾಹವಾಗಿದ್ದರು.

ಪೊಲೀಸರ ಪ್ರಕಾರ ನವ ದಂಪತಿ ಸಂಬಂಧಿಕರಾಗಿದ್ದು, ಬಾಲ್ಯದಿಂದಲೂ ಸ್ನೇಹಿತರಾಗಿದ್ದವರು. ಕೆಲವು ವರ್ಷಗಳಿಂದ ಅವರು ಸಂಬಂಧ ಹೊಂದಿದ್ದರು. ಇಬ್ಬರೂ ಪೋಷಕರ ಒಪ್ಪಿಗೆ ಮೇರೆಗೆ ಮದುವೆಯೂ ನಡೆದಿದೆ. ನವ ವಧುವಿನ ಪೋಷಕರು ಮಂಗಳವಾರ ಮೊದಲ ರಾತ್ರಿ ಕಾರ್ಯಕ್ರಮವನ್ನು ಏರ್ಪಡಿಸಿ ಚೆಂಗಲ್ಪಟ್ಟು ಬಳಿಯ ದಿಮ್ಮಾವರಂಗೆ (Dimmavaram) ಕರೆದಿಕೊಂಡು ಹೋಗಿದ್ದರು. ಮದುವೆಯ ನಂತರ ನವ ವರ (bridegroom) ಮೊದಲ ಬಾರಿಗೆ ಮಾವನ ಮನೆಗೆ ಬಂದಿದ್ದರು. ಮಂಗಳವಾರ ರಾತ್ರಿ 9 ಗಂಟೆಗೆ ದಂಪತಿ ತಮ್ಮ ಕೋಣೆಗೆ ಹೋಗಿದ್ದು, ಮರುದಿನ ಬೆಳಗ್ಗೆ 5 ಗಂಟೆ ಸುಮಾರಿಗೆ ಶ್ವೇತಾ ಕೊಠಡಿಯಿಂದ ಹೊರಗೆ ಓಡಿ ಬಂದಿದ್ದಾಳೆ. ಬಂದವಳೆ ಗಂಡ ಆಕೆಯ ಗಂಡ ಮೃತಪಟ್ಟಿದ್ದಾನೆ ಎಂದು ಹೇಳುತ್ತಾ, ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ ಎಂದು ಆಕೆಯ ಕುಟುಂಬ ಸದಸ್ಯರು ಪೊಲೀಸ್ ತನಿಖೆ ವೇಳೆ ತಿಳಿಸಿದ್ದಾರೆ.

ಆಕೆಯ ಪೋಷಕರು ಕೊಠಡಿಯೊಳಗೆ ಹೋಗಿ ನೋಡಿದಾಗ ಶ್ವೇತಾಳ ಮುಹೂರ್ತದ ಸೀರೆಯಲ್ಲಿ ಸರವಣನ್ ನೇಣು ಬಿಗಿದಿರುವುದು ಕಂಡು ಬೆಚ್ಚಿಬಿದ್ದಿದ್ದಾರೆ. ಮಾಹಿತಿ ಮೇರೆಗೆ ಕೆಂಗಲಪಟ್ಟು ತಾಲೂಕು ಪೊಲೀಸರು ಮೃತದೇಹವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಚೆಂಗಲ್ಪಟ್ಟು ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಮಂಗಳವಾರ ರಾತ್ರಿ ಮೃತ ಹೊಸ ಗಂಡ ತನ್ನ ಪೋಷಕರೊಂದಿಗೆ ದೂರವಾಣಿ ಮೂಲಕ ಮಾತನಾಡಿ ತಾವು ಹನಿಮೂನ್‌ಗೆ ಭೇಟಿ ನೀಡಲು ಯೋಜಿಸಿರುವ ಸ್ಥಳಗಳ ಬಗ್ಗೆ ತಿಳಿಸಿದ್ದರು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಅವರು ಬುಧವಾರ ತಮ್ಮ ಪ್ರವಾಸವನ್ನು ಪ್ರಾರಂಭಿಸುವುದಾಗಿ ಹೇಳಿಕೊಂಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ