AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆಗಾಸಸ್​ ಸ್ಪೈವೇರ್​ನ್ನು ಮೋದಿ ಸರ್ಕಾರವೇ ಖರೀದಿಸಿತ್ತು ಎಂದು ವರದಿ ಮಾಡಿದ್ದ ನ್ಯೂಯಾರ್ಕ್​ ಟೈಮ್ಸ್​ಗೆ ಲೀಗಲ್​ ನೋಟಿಸ್​ ಕಳಿಸಿದ ಚೆನ್ನೈ ವಕೀಲ

ನ್ಯೂಯಾರ್ಕ್ ಟೈಮ್ಸ್​​ನಲ್ಲಿ ಪ್ರಕಟವಾದ ಲೇಖನ ದೇಶದ ಗೌರವವನ್ನು ಹಾಳುಮಾಡುವಂತಿದೆ. ಭಾರತ ಸ್ಪೈವೇರ್​ ಖರೀದಿಸಿರುವ ಬಗ್ಗೆ ಇಸ್ರೇಲ್​​ನ ಎನ್ಎಸ್​ಒ (ಸ್ಪೈವೇರ್​ ಉತ್ಪಾದನಾ ಸಂಸ್ಥೆ) ದೃಢೀಕರಿಸಿಲ್ಲ ಎಂದು ವಕೀಲರಾದ ಶ್ರೀನಿವಾಸನ್​ ತಿಳಿಸಿದ್ದಾರೆ.

ಪೆಗಾಸಸ್​ ಸ್ಪೈವೇರ್​ನ್ನು ಮೋದಿ ಸರ್ಕಾರವೇ ಖರೀದಿಸಿತ್ತು ಎಂದು ವರದಿ ಮಾಡಿದ್ದ ನ್ಯೂಯಾರ್ಕ್​ ಟೈಮ್ಸ್​ಗೆ ಲೀಗಲ್​ ನೋಟಿಸ್​ ಕಳಿಸಿದ ಚೆನ್ನೈ ವಕೀಲ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Feb 03, 2022 | 4:10 PM

Share

2022ರ ಜನವರಿ 8ರಂದು ಪೆಗಾಸಸ್ ಸ್ಪೈವೇರ್​ (Pegasus Spyware)​ ಬಗ್ಗೆ ಪ್ರಕಟಿಸಿರುವ ವರದಿಗೆ ಸಂಬಂಧಪಟ್ಟಂತೆ ಚೆನ್ನೈ ಮೂಲದ ಹಿರಿಯ ವಕೀಲ ಎಂ.ಶ್ರೀನಿವಾಸನ್​ ಅವರು ನ್ಯೂಯಾರ್ಕ್​ ಟೈಮ್ಸ್​ಗೆ ಲೀಗಲ್​ ನೋಟಿಸ್​ ಕೊಟ್ಟಿದ್ದಾರೆ. 2021ರಲ್ಲಿ ವಿವಾದ ಸೃಷ್ಟಿಸಿದ್ದ ಈ ಪೆಗಾಸಸ್​ ಸ್ಪೈವೇರ್​ ಕುರಿತಂತೆ ನ್ಯೂಯಾರ್ಕ್​ ಟೈಮ್ಸ್​ ವರದಿ ಪ್ರಕಟಿಸಿ, ಭಾರತದ ಕೇಂದ್ರ ಸರ್ಕಾರ 2017ರಲ್ಲಿ ಇಸ್ರೇಲ್​​ನೊಂದಿಗೆ ಮಾಡಿಕೊಂಡ 2 ಬಿಲಿಯನ್​ ಡಾಲರ್​ಗಳಷ್ಟು ಮೊತ್ತದ ರಕ್ಷಣಾ ಒಪ್ಪಂದದ ಭಾಗವಾಗಿ ಈ ಸ್ಪೈವೇರ್​ನ್ನು ಕೂಡ ಖರಿದಿ ಮಾಡಿತ್ತು ಎಂದು ಹೇಳಿದೆ. ಈ ವರದಿಯನ್ನು ಯಾವ ಆಧಾರದ ಮೇಲೆ ಪ್ರಕಟಿಸಲಾಗಿದೆ ಎಂಬುದನ್ನು ನ್ಯೂಯಾರ್ಕ್​ ಟೈಮ್ಸ್ ತಿಳಿಸಬೇಕು. ಒಂದು ವಾರದಲ್ಲಿ ಕ್ಷಮೆ ಕೇಳಬೇಕು. ಇಲ್ಲದೆ ಇದ್ದರೆ 1 ಸಾವಿರ ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಸೇರಿ, ಇನ್ನಿತರ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಲೀಗಲ್​ ನೋಟಿಸ್​ನಲ್ಲಿ ತಿಳಿಸಲಾಗಿದೆ. ಎಂ.ಶ್ರೀನಿವಾಸನ್​ ಅವರು ಮದ್ರಾಸ್ ಹೈಕೋರ್ಟ್​​ನಲ್ಲಿ ಪ್ರ್ಯಾಕ್ಟೀಸ್ ಮಾಡುತ್ತಿದ್ದು, ಜ.31ರಂದು ಇಮೇಲ್ ಮೂಲಕ ನ್ಯೂಯಾರ್ಕ್ ಟೈಮ್ಸ್​ಗೆ ನೋಟಿಸ್​ ನೀಡಿದ್ದಾರೆ. 

ನ್ಯೂಯಾರ್ಕ್ ಟೈಮ್ಸ್​​ನಲ್ಲಿ ಪ್ರಕಟವಾದ ಲೇಖನ ದೇಶದ ಗೌರವವನ್ನು ಹಾಳುಮಾಡುವಂತಿದೆ. ಭಾರತ ಸ್ಪೈವೇರ್​ ಖರೀದಿಸಿರುವ ಬಗ್ಗೆ ಇಸ್ರೇಲ್​​ನ ಎನ್ಎಸ್​ಒ (ಸ್ಪೈವೇರ್​ ಉತ್ಪಾದನಾ ಸಂಸ್ಥೆ) ದೃಢೀಕರಿಸಿಲ್ಲ. ಹಾಗಾಗಿ ಈ ವರದಿ ದುರುದ್ದೇಶಪೂರಿತವಾಗಿದೆ ಎಂದೂ ಶ್ರೀನಿವಾಸನ್​ ಹೇಳಿದ್ದಾರೆ. ಅಷ್ಟೇ ಅಲ್ಲ, ವಿಶ್ವಸಂಸ್ಥೆಯಲ್ಲಿ ಭಾರತ ಇಸ್ರೇಲ್​ ಪರವಾಗಿ ಮತಹಾಕಿದ್ದನ್ನೂ ಕೂಡ ಪೆಗಾಸಸ್​ ಸ್ಪೈವೇರ್​ ಖರೀದಿಗೆ ಲಿಂಕ್​ ಮಾಡಿ ಬರೆಯಲಾಗಿದೆ. ಇದೆಲ್ಲವೂ ಸಂಪೂರ್ಣ ತಪ್ಪಾದ ವರದಿ ಎಂದಿದ್ದಾರೆ.

ಆ ದಿನಗಳಲ್ಲಿ ಯುಎಸ್​​ನಲ್ಲಿದ್ದ ಭಾರತದ ಶಾಶ್ವತ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್​ ಕೂಡ ಆರೋಪವನ್ನು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. ಭಾರತದ ಗೌರವಕ್ಕೆ ಚ್ಯುತಿ ತರುವ ಸಲುವಾಗಿಯೇ ಇಂಥದ್ದೊಂದು ಲೇಖನ ಪ್ರಕಟಿಸಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ನಾನೀಗ ಕಳಿಸಿರುವ ಲೀಗಲ್ ನೋಟಿಸ್​ಗೆ ಒಂದು ವಾರದೊಳಗೆ ನ್ಯೂಯಾರ್ಕ್​ ಟೈಮ್ಸ್ ಉತ್ತರ ನೀಡಬೇಕು. ಹಾಗೊಮ್ಮೆ ಉತ್ತರ ಕೊಡದೆ ಹೋದಲ್ಲಿ, ನಾನು ಕಾನೂನು ಕ್ರಮಕ್ಕೆ ಮುಂದಾಗುತ್ತೇನೆ ಎಂದು ಶ್ರೀನಿವಾಸನ್​ ಐಎಎನ್​ಎಸ್​ಗೆ ತಿಳಿಸಿದ್ದಾರೆ.

ಪೆಗಾಸಸ್​ ಸ್ಪೈವೇರ್​​  2021ರಲ್ಲಿ ಭರ್ಜರಿ ಸುದ್ದಿ ಮಾಡಿತ್ತು. ಭಾರತದಲ್ಲಿ ಇಸ್ರೇಲಿ ಮೂಲದ ಪೆಗಾಸಸ್​ ಬಳಸಿ, ರಾಜಕಾರಣಿಗಳು, ಪತ್ರಕರ್ತರು, ಮತ್ತಿತರ ಗಣ್ಯರೆಲ್ಲ ಸೇರಿ 300ಕ್ಕೂ ಹೆಚ್ಚು ಜನರ ಫೋನ್​ ಟ್ಯಾಪ್​ ಮಾಡಲಾಗಿದೆ ಎಂದು ದಿ ವೈರ್​ ಪ್ರಕಟಿಸಿತ್ತು. ಹಾಗೇ ಬಹುಮುಖ್ಯವಾಗಿ ಯಾರೆಲ್ಲರ ಫೋನ್​ ಟ್ಯಾಪ್​ ಆಗಿದೆ ಎಂಬ ಹೆಸರುಗಳನ್ನೂ ಬಹಿರಂಗಪಡಿಸಲಾಗಿತ್ತು. ಅದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚುನಾವಣಾ ತಂತ್ರಜ್ಞ ಪ್ರಶಾಂತ್​ ಕಿಶೋರ್​ ಸೇರಿ ಅನೇಕರ ಹೆಸರುಗಳು ಇದ್ದವು.  ಈ ಪೆಗಾಸಸ್​ ಸ್ನೂಪಿಂಗ್​ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್​​ನಿಂದ ಸಮಿತಿ ರಚಿಸಲಾಗಿದ್ದು, ತನಿಖೆ ನಡೆಯುತ್ತಲೂ ಇದೆ. ನ್ಯೂಯಾರ್ಕ್ ಟೈಮ್ಸ್ ವರದಿ ಬೆನ್ನಲ್ಲೇ ಸುಪ್ರೀಂಕೋರ್ಟ್​​ನಲ್ಲಿ ಇನ್ನೊಂದು ಅರ್ಜಿ ಕೂಡ ಸಲ್ಲಿಕೆಯಾಗಿದೆ.

ಇದನ್ನೂ ಓದಿ: ಪುನೀತ್​ ಮನೆಗೆ ಭೇಟಿ, ಸಮಾಧಿಗೆ ನಮನ; ಇಲ್ಲಿವೆ ಅಲ್ಲು ಅರ್ಜುನ್ ಭೇಟಿಯ ಫೋಟೋ ಚಿತ್ರಣ

Published On - 4:10 pm, Thu, 3 February 22

Follow Us
Web contact
Web contact

TV9 Kannada

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ