AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈನ ಮುತ್ತುಕಾಡುನಲ್ಲಿ ಬರಲಿದೆ ತೇಲುವ ರೆಸ್ಟೋರೆಂಟ್, ಏನಿದರ ವಿಶೇಷತೆ?

ಚೆನ್ನೈನಿಂದ ಸುಮಾರು 36 ಕಿಮೀ ದೂರದಲ್ಲಿರುವ ಮುತ್ತುಕಾಡು ಬೋಟ್ ಹೌಸ್ ಈಗಾಗಲೇ ಪ್ರಮುಖ ಆಕರ್ಷಕ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ.

ಚೆನ್ನೈನ ಮುತ್ತುಕಾಡುನಲ್ಲಿ ಬರಲಿದೆ ತೇಲುವ ರೆಸ್ಟೋರೆಂಟ್, ಏನಿದರ ವಿಶೇಷತೆ?
ಮುತ್ತುಕಾಡುನಲ್ಲಿ ಬರಲಿದೆ ತೇಲುವ ರೆಸ್ಟೋರೆಂಟ್
ರಶ್ಮಿ ಕಲ್ಲಕಟ್ಟ
|

Updated on: Mar 25, 2023 | 8:21 PM

Share

ಚೆನ್ನೈ ನಗರದ ನಿವಾಸಿಗಳು ತೇಲುವ ರೆಸ್ಟೋರೆಂಟ್‌ನಲ್ಲಿ(floating restaurant) ಊಟದ ಅನುಭವವನ್ನು ಶೀಘ್ರದಲ್ಲೇ ಅನುಭವಿಸಬಹುದು. ಚೆನ್ನೈ ಪೂರ್ವ ಕರಾವಳಿ ರಸ್ತೆಯಲ್ಲಿರುವ ಮುತ್ತುಕಾಡು (Muttukadu)ಬೋಟ್ ಹೌಸ್‌ನಲ್ಲಿ ಹಿನ್ನೀರಿನ ನೌಕಾಯಾನ ನಡೆಸುವಾಗ  ಈ ರೆಸ್ಟೋರೆಂಟ್​ನ ಅನುಭವವನ್ನು ಸವಿಯಲಿದ್ದಾರೆ. ರಾಜ್ಯ ಪ್ರವಾಸೋದ್ಯಮ ಸಚಿವ ಕೆ.ರಾಮಚಂದ್ರನ್ ಶುಕ್ರವಾರ ದೋಣಿ ನಿರ್ಮಿಸಲು ಅಡಿಮರ ಹಾಕಿ ಚಾಲನೆ ನೀಡಿದ್ದಾರೆ. 125 ಅಡಿ ಉದ್ದ ಮತ್ತು 25 ಅಡಿ ಅಗಲದ ಬೋಟ್‌ನಲ್ಲಿ ಡಬಲ್ ಡೆಕ್ ರೆಸ್ಟೋರೆಂಟ್ ನಿರ್ಮಿಸುವ ಕೆಲಸ ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಸಚಿವರು ಹೇಳಿದರು, ಇದು ರಾಜ್ಯದ ಮೊದಲ ತೇಲುವ ರೆಸ್ಟೋರೆಂಟ್ ಆಗಲಿದೆ. ದೋಣಿಯ ಮೊದಲ ಮಹಡಿಯು ತೆರೆದ ಸ್ಥಳವನ್ನು ಹೊಂದಿರುತ್ತದೆ . ಹೊರಗಿನ ದೃಶ್ಯ ಆನಂದಿಸಲು ಮತ್ತು ಊಟ ಮಾಡಲು 100 ಜನರಿಗೆ ಆಸನವನ್ನು ವ್ಯವಸ್ಥೆ ಇದೆ. ದೋಣಿಯ ಕೆಳಗಿನ ಡೆಕ್ ನಲ್ಲಿ ಕೊಠಡಿಗಳು, ಅಡುಗೆಮನೆ ಮತ್ತು ಊಟದ ಪ್ರದೇಶವಿದ್ದು ಇದು ಹವಾನಿಯಂತ್ರಿತವಾಗಿರುತ್ತದೆ.

ತಮಿಳುನಾಡು ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಮತ್ತು ಕೊಚ್ಚಿನ್‌ನ ಗ್ರ್ಯಾಂಡ್ನೂರ್ ಮೆರೈನ್ ಇಂಟರ್‌ನ್ಯಾಷನಲ್‌ನಿಂದ ಖಾಸಗಿ ಮತ್ತು ಸಾರ್ವಜನಿಕ ಕೊಡುಗೆ ಯೋಜನೆಯಡಿ ಈ ಯೋಜನೆಯನ್ನು 5 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುತ್ತದೆ. ಇದು ನೆರೆಯ ಕೇರಳದ ಹಿನ್ನೀರಿನಲ್ಲಿ ಸಾಕಷ್ಟು ಪ್ರಸಿದ್ಧವಾಗಿರುವ ತೇಲುವ ರೆಸ್ಟೋರೆಂಟ್‌ಗಳಂತೆಯೇ ಇರುತ್ತದೆ. ಇದು ಮುತ್ತುಕಾಡುಗೆ ಭೇಟಿ ನೀಡಲು ಮತ್ತು ಹಿನ್ನೀರಿನಲ್ಲಿ ಸವಾರಿ ಮಾಡಲು ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುತ್ತದೆ ಎಂದು ಸಚಿವರು ಭರವಸೆ ವ್ಯಕ್ತಪಡಿಸಿದರು.

ಇದನ್ನೂ ಓದಿ: ನನ್ನ ಹೆಸರು ಸಾವರ್ಕರ್ ಅಲ್ಲ; ನಾನು ಗಾಂಧಿ, ಕ್ಷಮೆ ಕೇಳಲ್ಲ: ರಾಹುಲ್ ಗಾಂಧಿ

ಚೆನ್ನೈನಿಂದ ಸುಮಾರು 36 ಕಿಮೀ ದೂರದಲ್ಲಿರುವ ಮುತ್ತುಕಾಡು ಬೋಟ್ ಹೌಸ್ ಈಗಾಗಲೇ ಪ್ರಮುಖ ಆಕರ್ಷಕ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ರೋಯಿಂಗ್, ವಿಂಡ್‌ಸರ್ಫಿಂಗ್, ವಾಟರ್ ಸ್ಕೀಯಿಂಗ್ ಮತ್ತು ಸ್ಪೀಡ್‌ಬೋಟ್ ರೈಡಿಂಗ್ ಅನ್ನು ನೀಡುವ ಜಲಕ್ರೀಡೆ ಸೌಲಭ್ಯವನ್ನು ಹೊಂದಿದೆ. ಇದು ತಮಿಳುನಾಡು ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಒಡೆತನದಲ್ಲಿದ್ದು, ನಿಗಮವೇ ನಿರ್ವಹಿಸುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!