AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chennai Rains: ತಮಿಳುನಾಡಿನಲ್ಲಿ ನ.21ರವರೆಗೂ ಭಯಂಕರ ಮಳೆ ಸಾಧ್ಯತೆ; ಪರಿಸ್ಥಿತಿ ನಿಭಾಯಿಸಲು ವಾರ್​ ರೂಂ ನಿರ್ಮಾಣ

ಒಂದೇ ಸಮನೆ ವಿಪರೀತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಚೆನ್ನೈ, ಥೇನಿ, ಟುಟಿಕೊರಿನ್​ ಮತ್ತು ಡಿಂಡಿಗಲ್​ ಜಿಲ್ಲೆಗಳಲ್ಲಿ ಇಂದು ಎಲ್ಲ ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.

Chennai Rains: ತಮಿಳುನಾಡಿನಲ್ಲಿ ನ.21ರವರೆಗೂ ಭಯಂಕರ ಮಳೆ ಸಾಧ್ಯತೆ; ಪರಿಸ್ಥಿತಿ ನಿಭಾಯಿಸಲು ವಾರ್​ ರೂಂ ನಿರ್ಮಾಣ
ಮಳೆ
TV9 Web
| Edited By: |

Updated on:Nov 18, 2021 | 11:57 AM

Share

ತಮಿಳುನಾಡಿನಲ್ಲಿ ಮಳೆ (Tamil Nadu Rain) ಕಡಿಮೆಯಾಗುವ ಯಾವುದೇ ಲಕ್ಷಣಗಳೂ ಕಾಣುತ್ತಿಲ್ಲ. ಭಾರತೀಯ ಹವಾಮಾನ ಇಲಾಖೆ ತಮಿಳುನಾಡಿನ ಚೆನ್ನೈ, ಕಾಂಚಿಪುರಂ, ತಿರುವಳ್ಳೂರು ಮತ್ತು ಚೆಂಗಲ್ಪಟ್ಟುಗಳಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್​ ಅಲರ್ಟ್​ ಘೋಷಿಸಿದೆ. ಅದರಲ್ಲಿ ಚೆನ್ನೈನಲ್ಲಂತೂ ನವೆಂಬರ್​ 21ರವರೆಗೂ ಭಾರಿ ಮಳೆ ಮುಂದುವರಿಯುವ ಎಲ್ಲ ಸಾಧ್ಯತೆಗಳೂ ಇದೆ ಎಂದು ಐಎಂಡಿ ತಿಳಿಸಿದೆ.  ಇದರ ಹೊರತಾಗಿ ವಿಲ್ಲುಪುರಂ, ಕಡಲೂರ್​​ಗಳಲ್ಲೂ ಮಳೆ ಹೆಚ್ಚಾಗಿ ಬೀಳಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. 

ಬಂಗಾಳಕೊಲ್ಲಿಯ ಆಗ್ನೇಯ ಮತ್ತು ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಚಂಡಮಾರುತದಂಥ ಸನ್ನಿವೇಶ ಉಂಟಾಗಿದ್ದು ಗಾಳಿ ಪಶ್ಚಿಮಾಭಿಮುಖವಾಗಿ ಚಲಿಸಲಿದೆ. ಹೀಗಾಗಿ ಇಂದಿನಿಂದ ಆಂಧ್ರಪ್ರದೇಶದ ದಕ್ಷಿಣ ಮತ್ತು ತಮಿಳುನಾಡಿನ ಉತ್ತರ ಕರಾವಳಿಯಲ್ಲಿ ಇಂದಿನಿಂದ ವಿಪರೀತ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.  ಪುದುಚೇರಿ, ಕರೈಕಲ್​​ ಪ್ರದೇಶದ ಜನರೂ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದೆ.

ಒಂದೇ ಸಮನೆ ವಿಪರೀತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಚೆನ್ನೈ, ಥೇನಿ, ಟುಟಿಕೊರಿನ್​ ಮತ್ತು ಡಿಂಡಿಗಲ್​ ಜಿಲ್ಲೆಗಳಲ್ಲಿ ಇಂದು ಎಲ್ಲ ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಚೆನ್ನೈನ ನಗರಾಡಳಿತವಂತೂ ವಾರ್​ ರೂಂ ನಿರ್ಮಿಸಿದ್ದು, ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸಲಾಗುತ್ತಿದೆ.  ಪ್ರವಾಹದ ಅಪಾಯ ಜಾಸ್ತಿ ಇರುವ ಪ್ರದೇಶಗಳಲ್ಲಿ ಕಾರ್ಪೋರೇಶನ್​ ಎಂಜಿನಿಯರ್​​ಗಳನ್ನು ನೇಮಕ ಮಾಡಲಾಗಿದೆ. ಪ್ರತಿ ವಲಯಗಳಲ್ಲೂ ಇವರು ಇರಲಿದ್ದು, ಅಲ್ಲಿನ ಪ್ರವಾಹ ತಗ್ಗಿಸುವ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಲಿದ್ದಾರೆ. ಇನ್ನು ನಗರಾದ್ಯಂತ ಒಟ್ಟು 668 ಮೋಟರ್​ ಪಂಪ್​​ಗಳನ್ನು ಅಳವಡಿಸಲಾಗಿದೆ. ಅದರಲ್ಲಿ 448 ಪಾಲಿಕೆಗೆ ಸೇರಿದ್ದಾದರೆ, 199ನ್ನು ಬಾಡಿಗೆಗೆ ಪಡೆಯಲಾಗಿದೆ. ಇವು ನಗರಾದ್ಯಂತ ನಿಂತಿರುವ ನೀರುಗಳನ್ನು ತೆಗೆಯಲು ಸಹಾಯ ಮಾಡುತ್ತವೆ. ಹಾಗೇ 50 ಬೋಟ್​ಗಳನ್ನೂ ಸಿದ್ಧಪಡಿಸಲಾಗಿದೆ. ರಕ್ಷಣಾ ಪಡೆಗಳು ಕಳೆದ ವಾರದಿಂದಲೂ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: ಹಸುವಿನ ಸಗಣಿ, ಮೂತ್ರ ಸೇವಿಸಿದರೆ ಪ್ರಯೋಜನ ಹಲವು ಎಂದು ವಿವರಿಸುವ ವಿಡಿಯೊ ವೈರಲ್, ವಿಡಿಯೊದಲ್ಲಿರುವ ವ್ಯಕ್ತಿ ಎಂಬಿಬಿಎಸ್ ಡಾಕ್ಟರ್!

Published On - 11:53 am, Thu, 18 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!