AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chennai Rains: ತಮಿಳುನಾಡಿನಲ್ಲಿ ನ.21ರವರೆಗೂ ಭಯಂಕರ ಮಳೆ ಸಾಧ್ಯತೆ; ಪರಿಸ್ಥಿತಿ ನಿಭಾಯಿಸಲು ವಾರ್​ ರೂಂ ನಿರ್ಮಾಣ

ಒಂದೇ ಸಮನೆ ವಿಪರೀತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಚೆನ್ನೈ, ಥೇನಿ, ಟುಟಿಕೊರಿನ್​ ಮತ್ತು ಡಿಂಡಿಗಲ್​ ಜಿಲ್ಲೆಗಳಲ್ಲಿ ಇಂದು ಎಲ್ಲ ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.

Chennai Rains: ತಮಿಳುನಾಡಿನಲ್ಲಿ ನ.21ರವರೆಗೂ ಭಯಂಕರ ಮಳೆ ಸಾಧ್ಯತೆ; ಪರಿಸ್ಥಿತಿ ನಿಭಾಯಿಸಲು ವಾರ್​ ರೂಂ ನಿರ್ಮಾಣ
ಮಳೆ
TV9 Web
| Updated By: Lakshmi Hegde|

Updated on:Nov 18, 2021 | 11:57 AM

Share

ತಮಿಳುನಾಡಿನಲ್ಲಿ ಮಳೆ (Tamil Nadu Rain) ಕಡಿಮೆಯಾಗುವ ಯಾವುದೇ ಲಕ್ಷಣಗಳೂ ಕಾಣುತ್ತಿಲ್ಲ. ಭಾರತೀಯ ಹವಾಮಾನ ಇಲಾಖೆ ತಮಿಳುನಾಡಿನ ಚೆನ್ನೈ, ಕಾಂಚಿಪುರಂ, ತಿರುವಳ್ಳೂರು ಮತ್ತು ಚೆಂಗಲ್ಪಟ್ಟುಗಳಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್​ ಅಲರ್ಟ್​ ಘೋಷಿಸಿದೆ. ಅದರಲ್ಲಿ ಚೆನ್ನೈನಲ್ಲಂತೂ ನವೆಂಬರ್​ 21ರವರೆಗೂ ಭಾರಿ ಮಳೆ ಮುಂದುವರಿಯುವ ಎಲ್ಲ ಸಾಧ್ಯತೆಗಳೂ ಇದೆ ಎಂದು ಐಎಂಡಿ ತಿಳಿಸಿದೆ.  ಇದರ ಹೊರತಾಗಿ ವಿಲ್ಲುಪುರಂ, ಕಡಲೂರ್​​ಗಳಲ್ಲೂ ಮಳೆ ಹೆಚ್ಚಾಗಿ ಬೀಳಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. 

ಬಂಗಾಳಕೊಲ್ಲಿಯ ಆಗ್ನೇಯ ಮತ್ತು ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಚಂಡಮಾರುತದಂಥ ಸನ್ನಿವೇಶ ಉಂಟಾಗಿದ್ದು ಗಾಳಿ ಪಶ್ಚಿಮಾಭಿಮುಖವಾಗಿ ಚಲಿಸಲಿದೆ. ಹೀಗಾಗಿ ಇಂದಿನಿಂದ ಆಂಧ್ರಪ್ರದೇಶದ ದಕ್ಷಿಣ ಮತ್ತು ತಮಿಳುನಾಡಿನ ಉತ್ತರ ಕರಾವಳಿಯಲ್ಲಿ ಇಂದಿನಿಂದ ವಿಪರೀತ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.  ಪುದುಚೇರಿ, ಕರೈಕಲ್​​ ಪ್ರದೇಶದ ಜನರೂ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿದೆ.

ಒಂದೇ ಸಮನೆ ವಿಪರೀತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಚೆನ್ನೈ, ಥೇನಿ, ಟುಟಿಕೊರಿನ್​ ಮತ್ತು ಡಿಂಡಿಗಲ್​ ಜಿಲ್ಲೆಗಳಲ್ಲಿ ಇಂದು ಎಲ್ಲ ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಚೆನ್ನೈನ ನಗರಾಡಳಿತವಂತೂ ವಾರ್​ ರೂಂ ನಿರ್ಮಿಸಿದ್ದು, ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸಲಾಗುತ್ತಿದೆ.  ಪ್ರವಾಹದ ಅಪಾಯ ಜಾಸ್ತಿ ಇರುವ ಪ್ರದೇಶಗಳಲ್ಲಿ ಕಾರ್ಪೋರೇಶನ್​ ಎಂಜಿನಿಯರ್​​ಗಳನ್ನು ನೇಮಕ ಮಾಡಲಾಗಿದೆ. ಪ್ರತಿ ವಲಯಗಳಲ್ಲೂ ಇವರು ಇರಲಿದ್ದು, ಅಲ್ಲಿನ ಪ್ರವಾಹ ತಗ್ಗಿಸುವ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಲಿದ್ದಾರೆ. ಇನ್ನು ನಗರಾದ್ಯಂತ ಒಟ್ಟು 668 ಮೋಟರ್​ ಪಂಪ್​​ಗಳನ್ನು ಅಳವಡಿಸಲಾಗಿದೆ. ಅದರಲ್ಲಿ 448 ಪಾಲಿಕೆಗೆ ಸೇರಿದ್ದಾದರೆ, 199ನ್ನು ಬಾಡಿಗೆಗೆ ಪಡೆಯಲಾಗಿದೆ. ಇವು ನಗರಾದ್ಯಂತ ನಿಂತಿರುವ ನೀರುಗಳನ್ನು ತೆಗೆಯಲು ಸಹಾಯ ಮಾಡುತ್ತವೆ. ಹಾಗೇ 50 ಬೋಟ್​ಗಳನ್ನೂ ಸಿದ್ಧಪಡಿಸಲಾಗಿದೆ. ರಕ್ಷಣಾ ಪಡೆಗಳು ಕಳೆದ ವಾರದಿಂದಲೂ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: ಹಸುವಿನ ಸಗಣಿ, ಮೂತ್ರ ಸೇವಿಸಿದರೆ ಪ್ರಯೋಜನ ಹಲವು ಎಂದು ವಿವರಿಸುವ ವಿಡಿಯೊ ವೈರಲ್, ವಿಡಿಯೊದಲ್ಲಿರುವ ವ್ಯಕ್ತಿ ಎಂಬಿಬಿಎಸ್ ಡಾಕ್ಟರ್!

Published On - 11:53 am, Thu, 18 November 21

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್