AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಲಾಕ್​ಅಪ್ ಡೆತ್: ಬಂಧನ ಭೀತಿಯಲ್ಲಿ ಪೊಲೀಸರು

ತಮಿಳುನಾಡಿನ ಪೊಲೀಸ್ ಠಾಣೆಯಲ್ಲಿ ಆರೋಪಿಯೊಬ್ಬ ಮೃತಪಟ್ಟ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರೋಪಿ ಸಾವು ಸಹಜವಲ್ಲ ಕೊಲೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ತಮಿಳುನಾಡಿನಲ್ಲಿ ಲಾಕ್​ಅಪ್ ಡೆತ್: ಬಂಧನ ಭೀತಿಯಲ್ಲಿ ಪೊಲೀಸರು
ಜೈಲು
TV9 Web
| Edited By: |

Updated on: May 07, 2022 | 2:31 PM

Share

ಚೆನ್ನೈ: ತಮಿಳುನಾಡಿನ ಪೊಲೀಸ್ (Police)ಠಾಣೆಯಲ್ಲಿ ಆರೋಪಿಯೊಬ್ಬ ಮೃತಪಟ್ಟ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರೋಪಿ ಸಾವು ಸಹಜವಲ್ಲ ಕೊಲೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಕಳೆದ ತಿಂಗಳಷ್ಟೇ ಆರೋಪಿ ವಿಗ್ನೇಶ್​ನನ್ನು ಗಾಂಜಾ ಸಾಗಾಟ ಪ್ರಕರಣದಲ್ಲಿ ಬಂಧಿಸಿದ್ದರು, ಆ ಸಮಯದಲ್ಲಿ ಆರೋಪಿ ಪೊಲೀಸರ ಮೇಲೆ ಹಲ್ಲೆಗೂ ಮುಂದಾಗಿದ್ದ. ಬಳಿಕ ಆತನನ್ನು ಬಂಧಿಸಿದ್ದರು, ಇದೀಗ ಲಾಕ್​ಅಪ್​ನಲ್ಲಿ ಅನುಮಾನಾಸ್ಪದವಾಗಿ ಆತ ಮೃತಪಟ್ಟಿದ್ದ.

ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಆತನ ದೇಹದಲ್ಲಿ 13 ಕಡೆ ಗಾಯದ ಗುರುತುಗಳಿರುವುದು ಕಂಡುಬಂದಿದ್ದು, ಆತನ ಸಾವಿನ ಕುರಿತು  ಸಂಶಯ ಮೂಡಿದೆ. ಸಾವಿಗೆ ಪೊಲೀಸರೇ ಕಾರಣ ಎಂದು ಪೊಲೀಸರ ಕಡೆ ಬೆರಳುಮಾಡಿ ತೋರಿಸಲಾಗುತ್ತಿದೆ.  ಈ ಪ್ರಕರಣದಲ್ಲಿ ಸಂಬಂಧ ಹೊಂದಿದ್ದಾರೆ ಎನ್ನುವ ಆರೋಪದ ಮೇರೆಗೆ ಸಬ್​ಇನ್​ಸ್ಪೆಕ್ಟರ್, ಕಾನ್​ಸ್ಟೆಬಲ್, ಹೋಂಗಾರ್ಡ್​ ಅಮಾನತುಗೊಳಿಸಲಾಗಿದೆ. ಹಾಗೆಯೇ ಇನ್ನೂ ಹಲವು ಪೊಲೀಸ್ ಅಧಿಕಾರಿಗಳ ವಿಚಾರಣೆ ನಡೆದಿದೆ ಸಮನ್ಸ್ ಜಾರಿಮಾಡಲಾಗಿದೆ.

ತಮಿಳುನಾಡಿನ ವಿರೋಧ ಪಕ್ಷ ನಾಯಕ ಕೆ ಪಳನಿಸ್ವಾಮಿ ಈ ಕುರಿತು ಧ್ವನಿ ಎತ್ತಿದ ಬಳಿಕ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಾತನಾಡಿ, ‘ಮರಣೋತ್ತರ ಪರೀಕ್ಷೆಯಲ್ಲಿ ಆರೋಪಿ ಮೇಲೆ ನಡೆದಿದ್ದ ಹಲ್ಲೆ ಕುರಿತು ತಿಳಿದುಬಂದಿದೆ. ಸಹಜ ಸಾವು ಇದೀಗ ಕೊಲೆಯಾಗಿ ಮಾರ್ಪಾಡಾಗಿದೆ, ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗುತ್ತದೆ, ಈ ಪ್ರಕರಣವನ್ನು ಸಿಬಿ-ಸಿಐಡಿಗೆ ನೀಡಲಾಗುತ್ತದೆ’ ಎಂದಿದ್ದಾರೆ.

ವರದಿ ಪ್ರಕಾರ ವಿಗ್ನೇಶ್ ತಲೆಭಾಗ, ಕಣ್ಣಿನ ಮೇಲ್ಭಾಗ, ಕೆನ್ನೆ ಸೇರಿದಂತೆ ದೇಹದ ಹಲವು ಕಡೆ ಗಾಯಗಳಾಗಿವೆ, ಆದರೆ ಸಾವಿಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ ಪೊಲೀಸರು ನೀಡಿದ್ದ ಮಾಹಿತಿ ಪ್ರಕಾರ ವಿಗ್ನೇಶ್ ಬಳಿ ಚಾಕು ಇತ್ತು, ಆತನನ್ನು ಆಸ್ಪತ್ರೆಗೆ ಸೇರಿಸಲಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದಿದ್ದಾರೆ.

ಆದರೆ ಬೇರೆ ಆರೋಪಿಗಳನ್ನು ವಿಚಾರಿಸಿದಾಗ ವಿಗ್ನೇಶ್ ಮೇಲೆ ಹಲ್ಲೆಯಾಗಿರುವುದು ತಿಳಿದುಬಂದಿದೆ, ರಾತ್ರಿ 11ರಿಂದ ಬೆಳಗಿನ ಜಾವ 3.30ರವರೆಗೆ ಆತನಿಗೆ ಹಿಂಸೆ ನೀಡಲಾಗಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ. ಇದೀಗ ಪೊಲೀಸರಿಗೆ ಬಂಧನ ಬೀತಿ ಎದುರಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು