AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡಿನಲ್ಲಿ ಲಾಕ್​ಅಪ್ ಡೆತ್: ಬಂಧನ ಭೀತಿಯಲ್ಲಿ ಪೊಲೀಸರು

ತಮಿಳುನಾಡಿನ ಪೊಲೀಸ್ ಠಾಣೆಯಲ್ಲಿ ಆರೋಪಿಯೊಬ್ಬ ಮೃತಪಟ್ಟ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರೋಪಿ ಸಾವು ಸಹಜವಲ್ಲ ಕೊಲೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

ತಮಿಳುನಾಡಿನಲ್ಲಿ ಲಾಕ್​ಅಪ್ ಡೆತ್: ಬಂಧನ ಭೀತಿಯಲ್ಲಿ ಪೊಲೀಸರು
ಜೈಲು
TV9 Web
| Edited By: |

Updated on: May 07, 2022 | 2:31 PM

Share

ಚೆನ್ನೈ: ತಮಿಳುನಾಡಿನ ಪೊಲೀಸ್ (Police)ಠಾಣೆಯಲ್ಲಿ ಆರೋಪಿಯೊಬ್ಬ ಮೃತಪಟ್ಟ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರೋಪಿ ಸಾವು ಸಹಜವಲ್ಲ ಕೊಲೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಕಳೆದ ತಿಂಗಳಷ್ಟೇ ಆರೋಪಿ ವಿಗ್ನೇಶ್​ನನ್ನು ಗಾಂಜಾ ಸಾಗಾಟ ಪ್ರಕರಣದಲ್ಲಿ ಬಂಧಿಸಿದ್ದರು, ಆ ಸಮಯದಲ್ಲಿ ಆರೋಪಿ ಪೊಲೀಸರ ಮೇಲೆ ಹಲ್ಲೆಗೂ ಮುಂದಾಗಿದ್ದ. ಬಳಿಕ ಆತನನ್ನು ಬಂಧಿಸಿದ್ದರು, ಇದೀಗ ಲಾಕ್​ಅಪ್​ನಲ್ಲಿ ಅನುಮಾನಾಸ್ಪದವಾಗಿ ಆತ ಮೃತಪಟ್ಟಿದ್ದ.

ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಆತನ ದೇಹದಲ್ಲಿ 13 ಕಡೆ ಗಾಯದ ಗುರುತುಗಳಿರುವುದು ಕಂಡುಬಂದಿದ್ದು, ಆತನ ಸಾವಿನ ಕುರಿತು  ಸಂಶಯ ಮೂಡಿದೆ. ಸಾವಿಗೆ ಪೊಲೀಸರೇ ಕಾರಣ ಎಂದು ಪೊಲೀಸರ ಕಡೆ ಬೆರಳುಮಾಡಿ ತೋರಿಸಲಾಗುತ್ತಿದೆ.  ಈ ಪ್ರಕರಣದಲ್ಲಿ ಸಂಬಂಧ ಹೊಂದಿದ್ದಾರೆ ಎನ್ನುವ ಆರೋಪದ ಮೇರೆಗೆ ಸಬ್​ಇನ್​ಸ್ಪೆಕ್ಟರ್, ಕಾನ್​ಸ್ಟೆಬಲ್, ಹೋಂಗಾರ್ಡ್​ ಅಮಾನತುಗೊಳಿಸಲಾಗಿದೆ. ಹಾಗೆಯೇ ಇನ್ನೂ ಹಲವು ಪೊಲೀಸ್ ಅಧಿಕಾರಿಗಳ ವಿಚಾರಣೆ ನಡೆದಿದೆ ಸಮನ್ಸ್ ಜಾರಿಮಾಡಲಾಗಿದೆ.

ತಮಿಳುನಾಡಿನ ವಿರೋಧ ಪಕ್ಷ ನಾಯಕ ಕೆ ಪಳನಿಸ್ವಾಮಿ ಈ ಕುರಿತು ಧ್ವನಿ ಎತ್ತಿದ ಬಳಿಕ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮಾತನಾಡಿ, ‘ಮರಣೋತ್ತರ ಪರೀಕ್ಷೆಯಲ್ಲಿ ಆರೋಪಿ ಮೇಲೆ ನಡೆದಿದ್ದ ಹಲ್ಲೆ ಕುರಿತು ತಿಳಿದುಬಂದಿದೆ. ಸಹಜ ಸಾವು ಇದೀಗ ಕೊಲೆಯಾಗಿ ಮಾರ್ಪಾಡಾಗಿದೆ, ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗುತ್ತದೆ, ಈ ಪ್ರಕರಣವನ್ನು ಸಿಬಿ-ಸಿಐಡಿಗೆ ನೀಡಲಾಗುತ್ತದೆ’ ಎಂದಿದ್ದಾರೆ.

ವರದಿ ಪ್ರಕಾರ ವಿಗ್ನೇಶ್ ತಲೆಭಾಗ, ಕಣ್ಣಿನ ಮೇಲ್ಭಾಗ, ಕೆನ್ನೆ ಸೇರಿದಂತೆ ದೇಹದ ಹಲವು ಕಡೆ ಗಾಯಗಳಾಗಿವೆ, ಆದರೆ ಸಾವಿಗೆ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ ಪೊಲೀಸರು ನೀಡಿದ್ದ ಮಾಹಿತಿ ಪ್ರಕಾರ ವಿಗ್ನೇಶ್ ಬಳಿ ಚಾಕು ಇತ್ತು, ಆತನನ್ನು ಆಸ್ಪತ್ರೆಗೆ ಸೇರಿಸಲಾದರೂ ಯಾವುದೇ ಪ್ರಯೋಜನವಾಗಿಲ್ಲ ಎಂದಿದ್ದಾರೆ.

ಆದರೆ ಬೇರೆ ಆರೋಪಿಗಳನ್ನು ವಿಚಾರಿಸಿದಾಗ ವಿಗ್ನೇಶ್ ಮೇಲೆ ಹಲ್ಲೆಯಾಗಿರುವುದು ತಿಳಿದುಬಂದಿದೆ, ರಾತ್ರಿ 11ರಿಂದ ಬೆಳಗಿನ ಜಾವ 3.30ರವರೆಗೆ ಆತನಿಗೆ ಹಿಂಸೆ ನೀಡಲಾಗಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ. ಇದೀಗ ಪೊಲೀಸರಿಗೆ ಬಂಧನ ಬೀತಿ ಎದುರಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ