AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಗ ಮಧ್ಯದಲ್ಲಿ ಕೆಟ್ಟು ನಿಂತ ಚೆನ್ನೈ ಮೆಟ್ರೋ; ಸುರಂಗದ ಮೂಲಕ ನಡೆದುಹೋದ ಪ್ರಯಾಣಿಕರು

ಇಂದು (ಡಿಸೆಂಬರ್ 2) ಚೆನ್ನೈನ ಮೆಟ್ರೋ ನಿಲ್ದಾಣದಲ್ಲಿ ಇದ್ದಕ್ಕಿದ್ದಂತೆ ಮೆಟ್ರೋ ಸ್ಥಗಿತಗೊಂಡಿತು. ರೈಲು ಹಠಾತ್ತನೆ ಸ್ಥಗಿತಗೊಂಡ ನಂತರ ಚೆನ್ನೈ ಮೆಟ್ರೋ ರೈಲಿನಲ್ಲಿ ಚಲಿಸುತ್ತಿದ್ದ ಬೆಳಗಿನ ಪ್ರಯಾಣಿಕರು ಸೆಂಟ್ರಲ್ ಮತ್ತು ಹೈಕೋರ್ಟ್ ನಿಲ್ದಾಣಗಳ ನಡುವಿನ ಸುರಂಗದ ಮೂಲಕ ಸುಮಾರು 300 ಮೀಟರ್ ನಡೆಯಬೇಕಾಯಿತು. ಯಾವುದೇ ಬ್ಯಾಟರಿ ಬ್ಯಾಕಪ್ ಇರಲಿಲ್ಲ. ರೈಲಿನಲ್ಲಿದ್ದ ಎರಡೂ ನಿಯಂತ್ರಣ ಬ್ಯಾಟರಿ ಹಾಳಾಗಿತ್ತು. ಹೀಗಾಗಿ, ಈ ಘಟನೆ ಸಂಭವಿಸಿದೆ.

ಮಾರ್ಗ ಮಧ್ಯದಲ್ಲಿ ಕೆಟ್ಟು ನಿಂತ ಚೆನ್ನೈ ಮೆಟ್ರೋ; ಸುರಂಗದ ಮೂಲಕ ನಡೆದುಹೋದ ಪ್ರಯಾಣಿಕರು
Chennai Metro
ಸುಷ್ಮಾ ಚಕ್ರೆ
|

Updated on: Dec 02, 2025 | 8:59 PM

Share

ಚೆನ್ನೈ, ಡಿಸೆಂಬರ್ 2: ಇಂದು ಚೆನ್ನೈ ಮೆಟ್ರೋ ರೈಲು (Metro Train) ದೋಷದಿಂದಾಗಿ ಮಾರ್ಗ ಮಧ್ಯದಲ್ಲಿ ಕೆಟ್ಟು ನಿಂತಿತು. ಆ ಮೆಟ್ರೋ ಕೆಟ್ಟು ನಿಂತ ಹಿನ್ನೆಲೆಯಲ್ಲಿ ಇಂದು ಬೆಳಗಿನ ಜಾವ 20 ಪ್ರಯಾಣಿಕರು ಎರಡು ನಿಲ್ದಾಣಗಳ ನಡುವೆ ಸಿಲುಕಿಕೊಂಡರು. ಆದರೆ ಅವರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೈಕೋರ್ಟ್ ಮತ್ತು ಸೆಂಟ್ರಲ್ ಸ್ಟೇಷನ್‌ಗಳ ನಡುವೆ ನಡೆದ ಘಟನೆಯು ಪ್ರಯಾಣಿಕರಲ್ಲಿ ಆತಂಕ ಮೂಡಿಸಿತು. ನಂತರ ಅವರನ್ನು ರಕ್ಷಿಸಲಾಯಿತು. ಇಂದು ಬೆಳಿಗ್ಗೆ 6.30ರಿಂದ ರೈಲು ಸೇವೆಗಳು ಪುನರಾರಂಭಗೊಂಡವು.

ಮೆಟ್ರೋ ರೈಲಿನಲ್ಲಿ ಉಂಟಾದ ತಾಂತ್ರಿಕ ಸಮಸ್ಯೆಯಿಂದಾಗಿ, ಹೈಕೋರ್ಟ್ ನಿಲ್ದಾಣ ಮತ್ತು ಪುರಚ್ಚಿ ತಲೈವರ್ ಡಾ. ಎಂ.ಜಿ. ರಾಮಚಂದ್ರನ್ ಸೆಂಟ್ರಲ್ ಮೆಟ್ರೋ ಸ್ಟೇಷನ್ ನಡುವೆ ಮೆಟ್ರೋ ರೈಲು ಸ್ಥಗಿತಗೊಂಡಿತು. ತಕ್ಷಣ ಪ್ರಯಾಣಿಕರನ್ನು ಸ್ಥಳಾಂತರಿಸಲಾಯಿತು. ಪ್ರಯಾಣಿಕರು ಸುರಂಗ ಮಾರ್ಗದ ಮೂಲಕ ನಡೆದುಕೊಂಡು ಹೊರಗೆ ಬಂದರು ಎಂದು ಚೆನ್ನೈ ಮೆಟ್ರೋ ರೈಲು ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ದೆಹಲಿ: ವಾರದೊಳಗೆ ಎರಡನೇ ಘಟನೆ, ಮೆಟ್ರೋ ರೈಲಿನೆದುರು ಹಾರಿ ಪ್ರಾಣಬಿಟ್ಟ ವ್ಯಕ್ತಿ

ಬ್ಲೂ ಲೈನ್‌ನಲ್ಲಿರುವ ವಿಮಾನ ನಿಲ್ದಾಣ ಮತ್ತು ವಿಮ್ಕೊ ನಗರ ಡಿಪೋ ನಡುವಿನ ಮೆಟ್ರೋ ರೈಲು ಸೇವೆಗಳ ಸಾಮಾನ್ಯ ಕಾರ್ಯಾಚರಣೆ ಪುನರಾರಂಭವಾಯಿತು. ಗ್ರೀನ್ ಲೈನ್‌ನಲ್ಲಿರುವ ಸೆಂಟ್ರಲ್ ಮೆಟ್ರೋದಿಂದ ಸೇಂಟ್ ಥಾಮಸ್ ಮೌಂಟ್‌ವರೆಗೆ ಸಹ ಸಾಮಾನ್ಯ ವೇಳಾಪಟ್ಟಿಯ ಪ್ರಕಾರ ಚಾಲನೆಯಲ್ಲಿದೆ ಎಂದು ಚೆನ್ನೈ ಮೆಟ್ರೋ ರೈಲು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್​​ನ ಪೋಸ್ಟ್‌ನಲ್ಲಿ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK