AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕೆ ಬಂತಾ ಬಣ್ಣ ಬದಲಿಸಿದ ಹೆಮ್ಮಾರಿ? ಬ್ರಿಟನ್‌ನಿಂದ ಚೆನ್ನೈ, ದೆಹಲಿಗೆ ಮರಳಿದವರಿಗೆ ಕೊರೊನಾ!

ಕಳೆದ ಕೆಲವು ದಿನಗಳ ಹಿಂದೆ ಪತ್ತೆಯಾಗಿದ್ದ ಕೊರೊನಾವೈರಸ್​ನ ಹೊಸ ಪ್ರಬೇಧ ಇದೀಗ ದೇಶಕ್ಕೆ ಕಾಲಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಬ್ರಿಟನ್‌ನಿಂದ ಚೆನ್ನೈಗೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ.

ಭಾರತಕ್ಕೆ ಬಂತಾ ಬಣ್ಣ ಬದಲಿಸಿದ ಹೆಮ್ಮಾರಿ? ಬ್ರಿಟನ್‌ನಿಂದ ಚೆನ್ನೈ, ದೆಹಲಿಗೆ ಮರಳಿದವರಿಗೆ ಕೊರೊನಾ!
ಪ್ರಾತಿನಿಧಿಕ ಚಿತ್ರ
KUSHAL V
|

Updated on:Dec 22, 2020 | 11:53 AM

Share

ಚೆನ್ನೈ: ಕಳೆದ ಕೆಲವು ದಿನಗಳ ಹಿಂದೆ ಪತ್ತೆಯಾಗಿದ್ದ ಕೊರೊನಾ ವೈರಸ್​ನ ಹೊಸ ಪ್ರಭೇದ ಇದೀಗ ದೇಶಕ್ಕೆ ಕಾಲಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ ಬ್ರಿಟನ್‌ನಿಂದ ಚೆನ್ನೈಗೆ ಬಂದಿದ್ದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ.

ಬ್ರಿಟನ್‌ನಿಂದ ಮರಳಿದ್ದ ಈ ವ್ಯಕ್ತಿ ದೆಹಲಿ ಮೂಲಕ ಚೆನ್ನೈಗೆ ಆಗಮಿಸಿದ್ದ ಎಂದು ತಿಳಿದುಬಂದಿದೆ. ಇತ್ತೀಚೆಗೆ ಚೆನ್ನೈನಿಂದ ಬ್ರಿಟನ್‌ಗೆ ತೆರಳಿದ್ದ ಸೋಂಕಿತ ಮರಳಿದ ನಂತರ RT-PCR ಟೆಸ್ಟ್‌ಗೆ ಒಳಗಾದ ಸೋಂಕು ದೃಢಪಟ್ಟಿದೆ. ಸದ್ಯ, ನಗರದ ಕಿಂಗ್ಸ್‌ ಇನ್‌ಸ್ಟಿಟ್ಯೂಟ್‌ನಲ್ಲಿ ಸೋಂಕಿತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ, ಸೋಂಕಿತ ಇತ್ತೀಚೆಗಷ್ಟೇ ಇಂಗ್ಲೆಂಡ್​ಗೆ​ ಹೋಗಿದ್ದರಿಂದ ಈತನಿಗೆ ಕೊರೊನಾವೈರಸ್​ನ ಹೊಸ ಪ್ರಭೇದ ತಗುಲಿದೆಯಾ ಅನ್ನೋ ಅನುಮಾನ ವ್ಯಕ್ತವಾಗಿದೆ.

ಇತ್ತ, ಬ್ರಿಟನ್‌ನಿಂದ ದೆಹಲಿಗೆ ಆಗಮಿಸಿದ್ದ ಐವರಿಗೆ ಸೋಂಕು ದೃಢವಾಗಿದೆ.  ಲಂಡನ್‌ನಿಂದ ಬಂದಿದ್ದ 266 ಜನ ಪೈಕಿ ಐವರಿಗೆ ಸೋಂಕು ಪತ್ತೆಯಾಗಿದೆ. ಜೊತೆಗೆ, ಲಂಡನ್‌ನಿಂದ ಕೋಲ್ಕತ್ತಾಗೆ ವಾಪಸ್​ ಆದ 6 ಜನರಿಗೆ ಕೊರೊನಾ ದೃಢವಾಗಿದೆ. ಹಾಗಾಗಿ, ಅಲ್ಲೂ ಸಹ ಹೊಸ ಪ್ರಭೇದದ ಸೋಂಕಿನ ಬಗ್ಗೆ ಆತಂಕ ಹುಟ್ಟಿದೆ.

ರಾಜ್ಯದಲ್ಲಿ ಸದ್ಯಕ್ಕೆ ನೈಟ್ ಕರ್ಫ್ಯೂ ಅಗತ್ಯವಿಲ್ಲ- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ

Published On - 11:38 am, Tue, 22 December 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ