AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chennai Rain ತಮಿಳುನಾಡು, ಪುದುಚೇರಿಯಲ್ಲಿ ರೆಡ್ ಅಲರ್ಟ್; ಮಳೆಗೆ ಬಲಿಯಾದವರ ಸಂಖ್ಯೆ 12ಕ್ಕೆ ಏರಿಕೆ

Tamilnadu Rain ಬಂಗಾಳಕೊಲ್ಲಿಯಲ್ಲಿ(Bay of Bengal) ಉಂಟಾಗಿರುವ ಕಡಿಮೆ ಒತ್ತಡದ ಪ್ರದೇಶ ಶೀಘ್ರದಲ್ಲೇ ವಾಯುಭಾರ ಕುಸಿತವಾಗಿ ಕೇಂದ್ರೀಕೃತವಾಗಿದ್ದು, ಮುಂದಿನ ಎರಡು ದಿನಗಳ ಕಾಲ ತಮಿಳುನಾಡಿನಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಂಗಳವಾರ ಚೆನ್ನೈನಲ್ಲಿ ತಿಳಿಸಿದೆ.

Chennai Rain ತಮಿಳುನಾಡು, ಪುದುಚೇರಿಯಲ್ಲಿ ರೆಡ್ ಅಲರ್ಟ್; ಮಳೆಗೆ ಬಲಿಯಾದವರ ಸಂಖ್ಯೆ 12ಕ್ಕೆ ಏರಿಕೆ
ಮುಂದಿನ ವಾರವೂ ಮಳೆಯಿಂದ ರಿಲೀಫ್ ಸಿಗಲ್ಲ; ಮಳೆ ಎದುರಿಸಲು ತಮಿಳುನಾಡು, ಕರ್ನಾಟಕ ಜನ ಸಿದ್ಧತೆ ಮಾಡಿಕೊಳ್ಳುವುದು ಅನಿವಾರ್ಯ
TV9 Web
| Edited By: |

Updated on:Nov 10, 2021 | 3:55 PM

Share

ಚೆನ್ನೈ:ತಮಿಳುನಾಡಿನಲ್ಲಿ( Tamil Nadu) ಭಾರೀ ಮಳೆಯಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 12 ರಷ್ಟಿದೆ ಎಂದು ತಮಿಳುನಾಡು ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಕೆಕೆಎಸ್‌ಎಸ್‌ಆರ್ ರಾಮಚಂದ್ರನ್  (KKSSR Ramachandran)ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಚೆನ್ನೈನಲ್ಲಿರುವ ಐದು ತಂಡಗಳು ಸೇರಿದಂತೆ 13 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳನ್ನು ತಮಿಳುನಾಡು ಮತ್ತು ಪುದುಚೇರಿಯಲ್ಲಿ(Puducherry) ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದೆ. ಹೆಚ್ಚುವರಿ ಬೆಂಬಲಕ್ಕಾಗಿ ಮೂರು ತಂಡಗಳನ್ನು ಮೀಸಲು ಸ್ಥಾನದಲ್ಲಿ ಇರಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ(Bay of Bengal) ಉಂಟಾಗಿರುವ ಕಡಿಮೆ ಒತ್ತಡದ ಪ್ರದೇಶ ಶೀಘ್ರದಲ್ಲೇ ವಾಯುಭಾರ ಕುಸಿತವಾಗಿ ಕೇಂದ್ರೀಕೃತವಾಗಿದ್ದು, ಮುಂದಿನ ಎರಡು ದಿನಗಳ ಕಾಲ ತಮಿಳುನಾಡಿನಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಂಗಳವಾರ ಚೆನ್ನೈನಲ್ಲಿ ತಿಳಿಸಿದೆ. ಮುಂದಿನ ಎರಡು ಗಂಟೆಗಳಲ್ಲಿ, ಚೆನ್ನೈ, ಕಾಂಚೀಪುರಂನ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ವೆಲ್ಲೂರ್, ರಾಣಿಪೇಟ್, ತಿರುವಣ್ಣಾಮಲೈ, ತಿರುಪತ್ತೂರ್, ಕಡಲೂರು, ವಿಲ್ಲುಪುರಂ, ಚೆಂಗಲ್ಪಟ್ಟು, ಕಲ್ಲಕುರುಚಿ, ಮೈಲಾಡುತುರೈ, ನಾಗಪಟ್ಟಿಣಂ, ತನಿಯವೂರ್, ತಿರುವಾರೂರ್, ಪುದುಕೊಟ್ಟೈ, ಶಿವಗಂಗೈ, ರಾಮನಾಥಪುರಂ, ಸೇಲಂ, ತಿರುಚಿರಾಪಳ್ಳಿ, ಅರಿಯಲೂರ್, ಪೆರಂಬಲೂರ್, ಮಧುರೈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ.

ಐಎಂಡಿ ಮುನ್ಸೂಚನೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರವು ಒಂಬತ್ತು ಜಿಲ್ಲೆಗಳಾದ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ಚೆಂಗಲ್‌ಪೇಟ್, ಕಡಲೂರು, ನಾಗಪಟ್ಟಿಣಂ, ತಂಜಾವೂರು, ತಿರುವರೂರ್ ಮತ್ತು ಮೈಲಾಡುತುರೈನಲ್ಲಿ ನವೆಂಬರ್ 10 ಮತ್ತು 11 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ.

ಚೆನ್ನೈಯಲ್ಲಿ ತರಕಾರಿ ಬೆಲೆಯಲ್ಲಿ ಏರಿಕೆ ಕಳೆದ ನಾಲ್ಕು ದಿನಗಳಿಂದ ರಾಜ್ಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಚೆನ್ನೈನಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ವ್ಯಾಪಾರಿಗಳು ಮತ್ತು ಮಾರಾಟಗಾರರು ಹೆಚ್ಚಿನ ಬೇಡಿಕೆ ಮತ್ತು ಬೆಳೆಗಳ ಹಾನಿಯಿಂದಾಗಿ ಕಡಿಮೆ ಪೂರೈಕೆ ಮತ್ತು ಸಾಗಣೆಯಲ್ಲಿ ವಿಳಂಬ ಬೆಲೆ ಏರಿಕೆಗೆ ಕಾರಣವೆಂದು ಹೇಳುತ್ತಾರೆ. ಉದಾಹರಣೆಗೆ, ಟೊಮೆಟೊಗಳು ಬುಧವಾರದಂದು ಕೆಜಿಗೆ 125 ರೂ.ಗೆ ಚಿಲ್ಲರೆಯಾಗಿ ಮಾರಾಟವಾಗುತ್ತಿದ್ದು, ಹಿಂದಿನ ದಿನಕ್ಕೆ ಕೆಜಿಗೆ 100 ರೂ. ಸಗಟು ಮಾರುಕಟ್ಟೆಗಳಲ್ಲಿ, ಟೊಮ್ಯಾಟೊ ಕೆಜಿಗೆ 35-40 ರೂ.ಗೆ ಮಾರಾಟವಾಗುತ್ತಿದ್ದು, ಈಗ ಅದು ಕೆಜಿಗೆ 60-80 ರೂ. ಆಗಿದೆ.

ನಾಗಪಟ್ಟಣಂನಲ್ಲಿ 30 ಸೆಂ.ಮೀ ಮಳೆ; ನಾಳೆ ಕಡಲೂರು ಬಳಿ ವಾಯುಭಾರ ಕುಸಿತ ಉಂಟಾಗಲಿದೆ ಭಾರತೀಯ ಹವಾಮಾನ ಇಲಾಖೆ (IMD) ಬುಧವಾರದಂದು ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಮುಂದಿನ 12 ಗಂಟೆಗಳಲ್ಲಿ ವಾಯುಭಾರ ಕುಸಿತವಾಗಿ ಕೇಂದ್ರೀಕೃತವಾಗಲಿದ್ದು, ಗುರುವಾರ ಮುಂಜಾನೆ ಉತ್ತರ ತಮಿಳುನಾಡು ಕರಾವಳಿಯನ್ನು ತಲುಪುವ ಮೊದಲು ಪಶ್ಚಿಮ-ವಾಯುವ್ಯಕ್ಕೆ ಚಲಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಇದನ್ನೂ ಓದಿ: Tamil Nadu Rains ತಮಿಳುನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ; 9 ಜಿಲ್ಲೆಗಳಲ್ಲಿ ರಜೆ ಘೋಷಣೆ

Published On - 3:40 pm, Wed, 10 November 21

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು