AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಯುಭಾರ ಕುಸಿತ: ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕದಲ್ಲಿ ಭಾರಿ ಮಳೆ ನಿರೀಕ್ಷಿತ

ತಮಿಳುನಾಡಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ.

ವಾಯುಭಾರ ಕುಸಿತ: ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕದಲ್ಲಿ ಭಾರಿ ಮಳೆ ನಿರೀಕ್ಷಿತ
ಚೆನ್ನೈ ನಗರದಲ್ಲಿ ಮಳೆ
TV9 Web
| Edited By: |

Updated on:Nov 10, 2021 | 10:18 PM

Share

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಕರ್ನಾಟಕದ ಹಲವು ಭಾಗಗಳಲ್ಲಿ ಗುರುವಾರ (ನ.11) ವ್ಯಾಪಕ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬುಧವಾರ ಮಧ್ಯಾಹ್ನದಿಂದೀಚೆಗೆ ಚಂಡಮಾರುತ ರೂಪುಗೊಂಡಿದ್ದು, ಗುರುವಾರ ಸಂಜೆ ತಮಿಳುನಾಡು ಅಥವಾ ಆಂಧ್ರ ಪ್ರದೇಶದ ತೀರದಲ್ಲಿ ಇದು ಭೂಪ್ರದೇಶ ಮಾಡುವ ಸಾಧ್ಯತೆಯಿದೆ. ತಮಿಳುನಾಡಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ.

ತಮಿಳುನಾಡಿನ ತಿರುವಳ್ಳೂರ್, ಕಲ್ಲಕುರಿಚಿ, ಸೇಲಂ, ವೆಲ್ಲೂರು, ತಿರುವಣ್ಣಾಮಲೈ, ರಾಣಿಪೆಟ್ ಮತ್ತು ತಿರುಪತ್ತೂರು ಜಿಲ್ಲೆಗಳಲ್ಲಿ ಗುರುವಾರ ಸಿಡುಲು-ಗುಡುಗಿನಿಂದ ಕೂಡಿದ ಮಳೆ ಸುರಿಯಲಿದೆ. ನೀಲಗಿರಿ, ಕೊಯಮತ್ತೂರು, ಚೆಂಗಲಪಟ್ಟು, ನಾಮಕಲ್, ತಿರುಚಿರಾಮಳ್ಳಿ, ಚೆನ್ನೈ ಮತ್ತು ಪುದುಚೇರಿಗಳಲ್ಲಿ ಭಾರಿ ಮಳೆಯಾಗಲಿದೆ. ಇದೇ ಪರಿಸ್ಥಿತಿ ಮುಂದಿನ ಎರಡೂ ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ

ಚೆನ್ನೈ ನಗರಕ್ಕೆ ಪ್ರಸ್ತುತ ರೆಡ್​ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಸೂಚನೆಯ ಮೆರೆಗೆ ತಮಿಳುನಾಡು ಸರ್ಕಾರವು ನ.10-11ರಂದು ಚೆನ್ನೈ, ಕಾಂಚೀಪುರಂ, ತಿರುವಲ್ಲೂರು, ಚೆಂಗಲಪಟ್ಟು, ಕಡಲೂರು, ನಾಗಪಟ್ಟಿನಮ್, ತಂಜಾವೂರ್, ತಿರುವರೂರ್ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿದೆ. ವಿಮಾನ ನಿಲ್ದಾಣಕ್ಕೆ ಬರುವ-ಹೋಗುವ ಹಲವು ವಿಮಾನಗಳು ರದ್ದುಗೊಂಡಿವೆ, ಹಲವು ವಿಮಾನಗಳ ವೇಳಾಪಟ್ಟಿಯನ್ನು ಮರುಹೊಂದಾಣಿಕೆ ಮಾಡಲಾಗಿದೆ.

ಇದನ್ನೂ ಓದಿ: Chennai Floods ತಮಿಳುನಾಡಿನಲ್ಲಿ ಎಡೆಬಿಡದೆ ಸುರಿದ ಮಳೆಗೆ ಚೆನ್ನೈ ನಗರ ಜಲಾವೃತ; ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ಇದನ್ನೂ ಓದಿ: Chennai Rain: ಕುಂಭದ್ರೋಣ ಮಳೆಗೆ ತತ್ತರಿಸಿದ ಚೆನ್ನೈ; ಇಡೀ ನಗರ ಜಲಾವೃತ, ಐಎಂಡಿಯಿಂದ ರೆಡ್​ ಅಲರ್ಟ್​ ಘೋಷಣೆ

Published On - 10:17 pm, Wed, 10 November 21

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ