AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಯುಭಾರ ಕುಸಿತ: ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕದಲ್ಲಿ ಭಾರಿ ಮಳೆ ನಿರೀಕ್ಷಿತ

ತಮಿಳುನಾಡಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ.

ವಾಯುಭಾರ ಕುಸಿತ: ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕದಲ್ಲಿ ಭಾರಿ ಮಳೆ ನಿರೀಕ್ಷಿತ
ಚೆನ್ನೈ ನಗರದಲ್ಲಿ ಮಳೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 10, 2021 | 10:18 PM

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ತಮಿಳುನಾಡು, ಆಂಧ್ರ ಪ್ರದೇಶ ಮತ್ತು ಕರ್ನಾಟಕದ ಹಲವು ಭಾಗಗಳಲ್ಲಿ ಗುರುವಾರ (ನ.11) ವ್ಯಾಪಕ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬುಧವಾರ ಮಧ್ಯಾಹ್ನದಿಂದೀಚೆಗೆ ಚಂಡಮಾರುತ ರೂಪುಗೊಂಡಿದ್ದು, ಗುರುವಾರ ಸಂಜೆ ತಮಿಳುನಾಡು ಅಥವಾ ಆಂಧ್ರ ಪ್ರದೇಶದ ತೀರದಲ್ಲಿ ಇದು ಭೂಪ್ರದೇಶ ಮಾಡುವ ಸಾಧ್ಯತೆಯಿದೆ. ತಮಿಳುನಾಡಿನಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ.

ತಮಿಳುನಾಡಿನ ತಿರುವಳ್ಳೂರ್, ಕಲ್ಲಕುರಿಚಿ, ಸೇಲಂ, ವೆಲ್ಲೂರು, ತಿರುವಣ್ಣಾಮಲೈ, ರಾಣಿಪೆಟ್ ಮತ್ತು ತಿರುಪತ್ತೂರು ಜಿಲ್ಲೆಗಳಲ್ಲಿ ಗುರುವಾರ ಸಿಡುಲು-ಗುಡುಗಿನಿಂದ ಕೂಡಿದ ಮಳೆ ಸುರಿಯಲಿದೆ. ನೀಲಗಿರಿ, ಕೊಯಮತ್ತೂರು, ಚೆಂಗಲಪಟ್ಟು, ನಾಮಕಲ್, ತಿರುಚಿರಾಮಳ್ಳಿ, ಚೆನ್ನೈ ಮತ್ತು ಪುದುಚೇರಿಗಳಲ್ಲಿ ಭಾರಿ ಮಳೆಯಾಗಲಿದೆ. ಇದೇ ಪರಿಸ್ಥಿತಿ ಮುಂದಿನ ಎರಡೂ ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ

ಚೆನ್ನೈ ನಗರಕ್ಕೆ ಪ್ರಸ್ತುತ ರೆಡ್​ ಅಲರ್ಟ್ ಘೋಷಿಸಲಾಗಿದೆ. ಹವಾಮಾನ ಇಲಾಖೆಯ ಸೂಚನೆಯ ಮೆರೆಗೆ ತಮಿಳುನಾಡು ಸರ್ಕಾರವು ನ.10-11ರಂದು ಚೆನ್ನೈ, ಕಾಂಚೀಪುರಂ, ತಿರುವಲ್ಲೂರು, ಚೆಂಗಲಪಟ್ಟು, ಕಡಲೂರು, ನಾಗಪಟ್ಟಿನಮ್, ತಂಜಾವೂರ್, ತಿರುವರೂರ್ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿದೆ. ವಿಮಾನ ನಿಲ್ದಾಣಕ್ಕೆ ಬರುವ-ಹೋಗುವ ಹಲವು ವಿಮಾನಗಳು ರದ್ದುಗೊಂಡಿವೆ, ಹಲವು ವಿಮಾನಗಳ ವೇಳಾಪಟ್ಟಿಯನ್ನು ಮರುಹೊಂದಾಣಿಕೆ ಮಾಡಲಾಗಿದೆ.

ಇದನ್ನೂ ಓದಿ: Chennai Floods ತಮಿಳುನಾಡಿನಲ್ಲಿ ಎಡೆಬಿಡದೆ ಸುರಿದ ಮಳೆಗೆ ಚೆನ್ನೈ ನಗರ ಜಲಾವೃತ; ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ಇದನ್ನೂ ಓದಿ: Chennai Rain: ಕುಂಭದ್ರೋಣ ಮಳೆಗೆ ತತ್ತರಿಸಿದ ಚೆನ್ನೈ; ಇಡೀ ನಗರ ಜಲಾವೃತ, ಐಎಂಡಿಯಿಂದ ರೆಡ್​ ಅಲರ್ಟ್​ ಘೋಷಣೆ

Published On - 10:17 pm, Wed, 10 November 21

11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ