AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ: ಸಮುದ್ರದಾಳದಲ್ಲಿ ಸ್ಕೂಬಾ ಡೈವರ್​ಗಳಿಂದ ಮತದಾನದ ಬಗ್ಗೆ ವಿಶಿಷ್ಟ ಜಾಗೃತಿ ಅಭಿಯಾನ

ಚೆನ್ನೈನಲ್ಲಿ ಸ್ಕೂಬಾ ಡೈವರ್​ಗಳು ಸಮುದ್ರದಾಳದಲ್ಲಿ ಮತದಾನದ ಬಗ್ಗೆ ವಿಶಿಷ್ಟ ಜಾಗೃತಿ ಅಭಿಯಾನ ಕೈಗೊಂಡರು. ನೀರಿನಲ್ಲಿ ಮುಳುಗಿ ಇವಿಎಂನಲ್ಲಿ ಮತ ಚಲಾಯಿಸುವುದು ಹೇಗೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಟೆಂಪಲ್ ಅಡ್ವೆಂಚರ್‌ನ ನಿರ್ದೇಶಕ ಎಸ್‌ಬಿ ಅರವಿಂದ್ ತಾರುಶ್ರೀ ಕಾರ್ಯಕ್ರಮವನ್ನು ನಡೆಸಿದರು.

ಚೆನ್ನೈ: ಸಮುದ್ರದಾಳದಲ್ಲಿ ಸ್ಕೂಬಾ ಡೈವರ್​ಗಳಿಂದ ಮತದಾನದ ಬಗ್ಗೆ ವಿಶಿಷ್ಟ ಜಾಗೃತಿ ಅಭಿಯಾನ
ಸ್ಕೂಬಾ ಡೈವರ್ಸ್​
ನಯನಾ ರಾಜೀವ್
|

Updated on:Apr 12, 2024 | 10:52 AM

Share

ಲೋಕಸಭಾ ಚುನಾವಣೆ(Lok Sabha Election)ಗೆ ದಿನಗಣನೆ ಆರಂಭವಾಗಿದೆ,  ಚೆನ್ನೈನಲ್ಲಿ ಸ್ಕೂಬಾ ಡೈವರ್​ಗಳು ಸಮುದ್ರದಾಳದಲ್ಲಿ ಮತದಾನದ ಬಗ್ಗೆ ವಿಶಿಷ್ಟ ಜಾಗೃತಿ ಅಭಿಯಾನ ಕೈಗೊಂಡರು. ನೀರಿನಲ್ಲಿ ಮುಳುಗಿ ಇವಿಎಂನಲ್ಲಿ ಮತ ಚಲಾಯಿಸುವುದು ಹೇಗೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಟೆಂಪಲ್ ಅಡ್ವೆಂಚರ್‌ನ ನಿರ್ದೇಶಕ ಎಸ್‌ಬಿ ಅರವಿಂದ್ ತಾರುಶ್ರೀ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಲೋಕಸಭೆ ಚುನಾವಣೆಗೆ ದೇಶವು ಮೊದಲ ಹಂತದ (ಏಪ್ರಿಲ್ 19) ಮತದಾನಕ್ಕೆ ಸಿದ್ಧವಾಗಿದೆ . ಈ ಹಿನ್ನೆಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗ ಪ್ರತಿದಿನ ಜಾಗೃತಿ ಅಭಿಯಾನ ನಡೆಸುತ್ತಿದೆ. ಪ್ರಜಾಪ್ರಭುತ್ವದ ಹಬ್ಬ ಅಂದರೆ ಚುನಾವಣೆಯಲ್ಲಿ ಮತದಾನದ ಮೂಲಕ ಹೆಚ್ಚು ಹೆಚ್ಚು ಜನರು ಭಾಗವಹಿಸುವಂತಾಗಲು ಹೀಗೆ ಮಾಡಲಾಗುತ್ತಿದೆ.

ಸ್ಕೂಬಾ ಡೈವರ್‌ಗಳು ಚೆನ್ನೈನಲ್ಲಿರುವ ಸಮುದ್ರಕ್ಕೆ ಹೋಗುತ್ತಾರೆ. ಇಲ್ಲಿ ಅವರು ಅಣಕು ಇವಿಎಂ ಯಂತ್ರಗಳನ್ನು ತೆಗೆದುಕೊಂಡು ಮತ ಚಲಾಯಿಸಿದ್ದಾರೆ. ಚೆನ್ನೈನ ಸ್ಕೂಬಾ ಡೈವರ್‌ಗಳು ನೀಲಂಕಾರೈನಲ್ಲಿ ಸಮುದ್ರದ ಅಡಿಯಲ್ಲಿ ಅರವತ್ತು ಅಡಿಗಳಷ್ಟು ಆಳಕ್ಕೆ ಹೋಗಿ ಮತದಾನ ಜಾಗೃತಿ ಅಭಿಯಾನ ನಡೆದಿದ್ದು ಈ ಫೋಟೊವನ್ನು ಚುನಾವಣಾ ಆಯೋಗ ಹಂಚಿಕೊಂಡಿದೆ.

ಮತ್ತಷ್ಟು ಓದಿ:  ಈಗಷ್ಟೇ 18 ಆದವರಿಗೂ ಮತದಾನಕ್ಕೆ ಅವಕಾಶ: ಚುನಾವಣಾ ಆಯೋಗದಿಂದ ಬರ್ತ್​ಡೇ ಗಿಫ್ಟ್​​​

ಲೋಕಸಾಭಾ ಚುನಾವಣೆ ಘೋಷಣೆಯಾಗಿದೆ, ದೇಶದ 543 ಲೋಕಸಭಾ ಸ್ಥಾನಗಳಿಗೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತ ಏಪ್ರಿಲ್ 19 ರಂದು ಪ್ರಾರಂಭವಾಗಲಿದೆ. ಜೂನ್ 1 ರವರೆಗೆ ಚುನಾವಣೆ ನಡೆಯಲಿದೆ. ಜೂನ್ 4 ರಂದು ಅಂತಿಮ ಫಲಿತಾಂಶ ಬರಲಿದೆ. ದೇಶದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿವೆ.

ವಿಡಿಯೋ

ಎರಡನೇ ಹಂತಕ್ಕೆ ಏಪ್ರಿಲ್ 26, ಮೂರನೇ ಹಂತಕ್ಕೆ ಮೇ 7, ನಾಲ್ಕನೇ ಹಂತಕ್ಕೆ ಮೇ 13, ಐದನೇ ಹಂತಕ್ಕೆ ಮೇ 20, ಆರನೇ ಹಂತಕ್ಕೆ ಮೇ 25 ಮತ್ತು ಏಳನೇ ಹಂತಕ್ಕೆ ಜೂನ್ 1 ರಂದು ಮತದಾನ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:51 am, Fri, 12 April 24

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!