AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ: ಸಮುದ್ರದಾಳದಲ್ಲಿ ಸ್ಕೂಬಾ ಡೈವರ್​ಗಳಿಂದ ಮತದಾನದ ಬಗ್ಗೆ ವಿಶಿಷ್ಟ ಜಾಗೃತಿ ಅಭಿಯಾನ

ಚೆನ್ನೈನಲ್ಲಿ ಸ್ಕೂಬಾ ಡೈವರ್​ಗಳು ಸಮುದ್ರದಾಳದಲ್ಲಿ ಮತದಾನದ ಬಗ್ಗೆ ವಿಶಿಷ್ಟ ಜಾಗೃತಿ ಅಭಿಯಾನ ಕೈಗೊಂಡರು. ನೀರಿನಲ್ಲಿ ಮುಳುಗಿ ಇವಿಎಂನಲ್ಲಿ ಮತ ಚಲಾಯಿಸುವುದು ಹೇಗೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಟೆಂಪಲ್ ಅಡ್ವೆಂಚರ್‌ನ ನಿರ್ದೇಶಕ ಎಸ್‌ಬಿ ಅರವಿಂದ್ ತಾರುಶ್ರೀ ಕಾರ್ಯಕ್ರಮವನ್ನು ನಡೆಸಿದರು.

ಚೆನ್ನೈ: ಸಮುದ್ರದಾಳದಲ್ಲಿ ಸ್ಕೂಬಾ ಡೈವರ್​ಗಳಿಂದ ಮತದಾನದ ಬಗ್ಗೆ ವಿಶಿಷ್ಟ ಜಾಗೃತಿ ಅಭಿಯಾನ
ಸ್ಕೂಬಾ ಡೈವರ್ಸ್​
ನಯನಾ ರಾಜೀವ್
|

Updated on:Apr 12, 2024 | 10:52 AM

Share

ಲೋಕಸಭಾ ಚುನಾವಣೆ(Lok Sabha Election)ಗೆ ದಿನಗಣನೆ ಆರಂಭವಾಗಿದೆ,  ಚೆನ್ನೈನಲ್ಲಿ ಸ್ಕೂಬಾ ಡೈವರ್​ಗಳು ಸಮುದ್ರದಾಳದಲ್ಲಿ ಮತದಾನದ ಬಗ್ಗೆ ವಿಶಿಷ್ಟ ಜಾಗೃತಿ ಅಭಿಯಾನ ಕೈಗೊಂಡರು. ನೀರಿನಲ್ಲಿ ಮುಳುಗಿ ಇವಿಎಂನಲ್ಲಿ ಮತ ಚಲಾಯಿಸುವುದು ಹೇಗೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಟೆಂಪಲ್ ಅಡ್ವೆಂಚರ್‌ನ ನಿರ್ದೇಶಕ ಎಸ್‌ಬಿ ಅರವಿಂದ್ ತಾರುಶ್ರೀ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಲೋಕಸಭೆ ಚುನಾವಣೆಗೆ ದೇಶವು ಮೊದಲ ಹಂತದ (ಏಪ್ರಿಲ್ 19) ಮತದಾನಕ್ಕೆ ಸಿದ್ಧವಾಗಿದೆ . ಈ ಹಿನ್ನೆಲೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗ ಪ್ರತಿದಿನ ಜಾಗೃತಿ ಅಭಿಯಾನ ನಡೆಸುತ್ತಿದೆ. ಪ್ರಜಾಪ್ರಭುತ್ವದ ಹಬ್ಬ ಅಂದರೆ ಚುನಾವಣೆಯಲ್ಲಿ ಮತದಾನದ ಮೂಲಕ ಹೆಚ್ಚು ಹೆಚ್ಚು ಜನರು ಭಾಗವಹಿಸುವಂತಾಗಲು ಹೀಗೆ ಮಾಡಲಾಗುತ್ತಿದೆ.

ಸ್ಕೂಬಾ ಡೈವರ್‌ಗಳು ಚೆನ್ನೈನಲ್ಲಿರುವ ಸಮುದ್ರಕ್ಕೆ ಹೋಗುತ್ತಾರೆ. ಇಲ್ಲಿ ಅವರು ಅಣಕು ಇವಿಎಂ ಯಂತ್ರಗಳನ್ನು ತೆಗೆದುಕೊಂಡು ಮತ ಚಲಾಯಿಸಿದ್ದಾರೆ. ಚೆನ್ನೈನ ಸ್ಕೂಬಾ ಡೈವರ್‌ಗಳು ನೀಲಂಕಾರೈನಲ್ಲಿ ಸಮುದ್ರದ ಅಡಿಯಲ್ಲಿ ಅರವತ್ತು ಅಡಿಗಳಷ್ಟು ಆಳಕ್ಕೆ ಹೋಗಿ ಮತದಾನ ಜಾಗೃತಿ ಅಭಿಯಾನ ನಡೆದಿದ್ದು ಈ ಫೋಟೊವನ್ನು ಚುನಾವಣಾ ಆಯೋಗ ಹಂಚಿಕೊಂಡಿದೆ.

ಮತ್ತಷ್ಟು ಓದಿ:  ಈಗಷ್ಟೇ 18 ಆದವರಿಗೂ ಮತದಾನಕ್ಕೆ ಅವಕಾಶ: ಚುನಾವಣಾ ಆಯೋಗದಿಂದ ಬರ್ತ್​ಡೇ ಗಿಫ್ಟ್​​​

ಲೋಕಸಾಭಾ ಚುನಾವಣೆ ಘೋಷಣೆಯಾಗಿದೆ, ದೇಶದ 543 ಲೋಕಸಭಾ ಸ್ಥಾನಗಳಿಗೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತ ಏಪ್ರಿಲ್ 19 ರಂದು ಪ್ರಾರಂಭವಾಗಲಿದೆ. ಜೂನ್ 1 ರವರೆಗೆ ಚುನಾವಣೆ ನಡೆಯಲಿದೆ. ಜೂನ್ 4 ರಂದು ಅಂತಿಮ ಫಲಿತಾಂಶ ಬರಲಿದೆ. ದೇಶದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿವೆ.

ವಿಡಿಯೋ

ಎರಡನೇ ಹಂತಕ್ಕೆ ಏಪ್ರಿಲ್ 26, ಮೂರನೇ ಹಂತಕ್ಕೆ ಮೇ 7, ನಾಲ್ಕನೇ ಹಂತಕ್ಕೆ ಮೇ 13, ಐದನೇ ಹಂತಕ್ಕೆ ಮೇ 20, ಆರನೇ ಹಂತಕ್ಕೆ ಮೇ 25 ಮತ್ತು ಏಳನೇ ಹಂತಕ್ಕೆ ಜೂನ್ 1 ರಂದು ಮತದಾನ ನಡೆಯಲಿದೆ. ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:51 am, Fri, 12 April 24

ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​