AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಕೆ ಸ್ಟಾಲಿನ್​​​ರ 70ನೇ ಹುಟ್ಟುಹಬ್ಬದಂದು ಚೆನ್ನೈನಲ್ಲಿ ಮೊದಲ ಬಾರಿಗೆ ನಡೆಯಲಿದೆ ಜಲ್ಲಿಕಟ್ಟು

ಕಾರ್ಯಕ್ರಮಕ್ಕೆ ಸುಮಾರು 20,000 ಜನರು ಬರುವ ನಿರೀಕ್ಷೆಯಿದೆ ಎಂದು ಸಚಿವರು ಹೇಳಿದರು. ಒಂದು ತಿಂಗಳ ಹಿಂದೆಯೇ ಸಿದ್ಧತೆ ಆರಂಭವಾಗಿದ್ದು, ಜನವರಿ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ.

ಎಂಕೆ ಸ್ಟಾಲಿನ್​​​ರ 70ನೇ ಹುಟ್ಟುಹಬ್ಬದಂದು ಚೆನ್ನೈನಲ್ಲಿ ಮೊದಲ ಬಾರಿಗೆ ನಡೆಯಲಿದೆ ಜಲ್ಲಿಕಟ್ಟು
ಜಲ್ಲಿಕಟ್ಟು
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jan 11, 2023 | 8:12 PM

Share

ಸಾಮಾನ್ಯವಾಗಿ ಪೊಂಗಲ್ (Pongal) ಸಮಯದಲ್ಲಿ ತಮಿಳುನಾಡಿನ ಗ್ರಾಮೀಣ ಭಾಗಗಳಲ್ಲಿ ನಡೆಯುವ ಜನಪ್ರಿಯ ಗೂಳಿ ಪಳಗಿಸುವ ಕ್ರೀಡೆಯಾದ ಜಲ್ಲಿಕಟ್ಟನ್ನು (Jallikattu)ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ಅವರ 70 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಮೊದಲ ಬಾರಿಗೆ ಚೆನ್ನೈನಲ್ಲಿ ಆಯೋಜಿಸಲಾಗುವುದು ಎಂದು ಡಿಎಂಕೆ ಸಚಿವರೊಬ್ಬರು ತಿಳಿಸಿದ್ದಾರೆ. ಮಾರ್ಚ್ 5 ರಂದು ಚೆನ್ನೈನ ಹೊರವಲಯದಲ್ಲಿರುವ ಪಡಪ್ಪೈನಲ್ಲಿ ಮೊದಲ ಬಾರಿಗೆ ಜಲ್ಲಿಕಟ್ಟು ಸ್ಪರ್ಧೆ ನಡೆಯಲಿದೆ. ತಮಿಳುನಾಡಿನಾದ್ಯಂತ ಸುಮಾರು 500 ಅತ್ಯುತ್ತಮ ಹೋರಿಗಳು ಮತ್ತು ಗೂಳಿ ಪಳಗಿಸುವವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವು ಚೆನ್ನೈ ನಗರ ಮತ್ತು ಉಪನಗರಗಳ ಜನರ ದೀರ್ಘಕಾಲದ ಆಸೆಯನ್ನು ಪೂರೈಸುತ್ತದೆ ಎಂದು ಗ್ರಾಮೀಣ ಕೈಗಾರಿಕೆಗಳ ಸಚಿವ ಟಿಎಂ ಅನ್ಬರಸನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ಸುಮಾರು 20,000 ಜನರು ಬರುವ ನಿರೀಕ್ಷೆಯಿದೆ ಎಂದು ಸಚಿವರು ಹೇಳಿದರು. ಒಂದು ತಿಂಗಳ ಹಿಂದೆಯೇ ಸಿದ್ಧತೆ ಆರಂಭವಾಗಿದ್ದು, ಜನವರಿ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ.

ಉತ್ತಮ ಗೂಳಿಯ ಮಾಲೀಕರಿಗೆ ಕಾರು ಮತ್ತು ಉತ್ತಮ ಹೋರಿ ಪಳಗಿಸುವವರಿಗೆ ಮೋಟಾರ್ ಸೈಕಲ್ ನೀಡಲಾಗುವುದು.

ಈ ವರ್ಷ ಜಲ್ಲಿಕಟ್ಟು ಋತುವು ಪುದುಕೊಟ್ಟೈ ಜಿಲ್ಲೆಯಲ್ಲಿ ಕಳೆದ ವಾರ ಪ್ರಾರಂಭವಾಯಿತು. ಈ ಕ್ರೀಡೆಯು ಸಾಂಪ್ರದಾಯಿಕವಾಗಿ ಅಲಂಗನಲ್ಲೂರು, ಅವನಿಯಪುರಂ, ಮತ್ತು ಮಧುರೈನ ಪಾಲಮೇಡು ಮತ್ತು ದಕ್ಷಿಣ ತಮಿಳುನಾಡಿನ ಇತರ ಗ್ರಾಮಾಂತರ ಹಳ್ಳಿಗಳಲ್ಲಿ ಪೊಂಗಲ್ ಸುಗ್ಗಿಯ ಹಬ್ಬದ ಸಮಯದಲ್ಲಿ ನಡೆಯುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ