AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಕೆ ಸ್ಟಾಲಿನ್​​​ರ 70ನೇ ಹುಟ್ಟುಹಬ್ಬದಂದು ಚೆನ್ನೈನಲ್ಲಿ ಮೊದಲ ಬಾರಿಗೆ ನಡೆಯಲಿದೆ ಜಲ್ಲಿಕಟ್ಟು

ಕಾರ್ಯಕ್ರಮಕ್ಕೆ ಸುಮಾರು 20,000 ಜನರು ಬರುವ ನಿರೀಕ್ಷೆಯಿದೆ ಎಂದು ಸಚಿವರು ಹೇಳಿದರು. ಒಂದು ತಿಂಗಳ ಹಿಂದೆಯೇ ಸಿದ್ಧತೆ ಆರಂಭವಾಗಿದ್ದು, ಜನವರಿ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ.

ಎಂಕೆ ಸ್ಟಾಲಿನ್​​​ರ 70ನೇ ಹುಟ್ಟುಹಬ್ಬದಂದು ಚೆನ್ನೈನಲ್ಲಿ ಮೊದಲ ಬಾರಿಗೆ ನಡೆಯಲಿದೆ ಜಲ್ಲಿಕಟ್ಟು
ಜಲ್ಲಿಕಟ್ಟು
TV9 Web
| Edited By: |

Updated on: Jan 11, 2023 | 8:12 PM

Share

ಸಾಮಾನ್ಯವಾಗಿ ಪೊಂಗಲ್ (Pongal) ಸಮಯದಲ್ಲಿ ತಮಿಳುನಾಡಿನ ಗ್ರಾಮೀಣ ಭಾಗಗಳಲ್ಲಿ ನಡೆಯುವ ಜನಪ್ರಿಯ ಗೂಳಿ ಪಳಗಿಸುವ ಕ್ರೀಡೆಯಾದ ಜಲ್ಲಿಕಟ್ಟನ್ನು (Jallikattu)ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) ಅವರ 70 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಮೊದಲ ಬಾರಿಗೆ ಚೆನ್ನೈನಲ್ಲಿ ಆಯೋಜಿಸಲಾಗುವುದು ಎಂದು ಡಿಎಂಕೆ ಸಚಿವರೊಬ್ಬರು ತಿಳಿಸಿದ್ದಾರೆ. ಮಾರ್ಚ್ 5 ರಂದು ಚೆನ್ನೈನ ಹೊರವಲಯದಲ್ಲಿರುವ ಪಡಪ್ಪೈನಲ್ಲಿ ಮೊದಲ ಬಾರಿಗೆ ಜಲ್ಲಿಕಟ್ಟು ಸ್ಪರ್ಧೆ ನಡೆಯಲಿದೆ. ತಮಿಳುನಾಡಿನಾದ್ಯಂತ ಸುಮಾರು 500 ಅತ್ಯುತ್ತಮ ಹೋರಿಗಳು ಮತ್ತು ಗೂಳಿ ಪಳಗಿಸುವವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮವು ಚೆನ್ನೈ ನಗರ ಮತ್ತು ಉಪನಗರಗಳ ಜನರ ದೀರ್ಘಕಾಲದ ಆಸೆಯನ್ನು ಪೂರೈಸುತ್ತದೆ ಎಂದು ಗ್ರಾಮೀಣ ಕೈಗಾರಿಕೆಗಳ ಸಚಿವ ಟಿಎಂ ಅನ್ಬರಸನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ಸುಮಾರು 20,000 ಜನರು ಬರುವ ನಿರೀಕ್ಷೆಯಿದೆ ಎಂದು ಸಚಿವರು ಹೇಳಿದರು. ಒಂದು ತಿಂಗಳ ಹಿಂದೆಯೇ ಸಿದ್ಧತೆ ಆರಂಭವಾಗಿದ್ದು, ಜನವರಿ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ.

ಉತ್ತಮ ಗೂಳಿಯ ಮಾಲೀಕರಿಗೆ ಕಾರು ಮತ್ತು ಉತ್ತಮ ಹೋರಿ ಪಳಗಿಸುವವರಿಗೆ ಮೋಟಾರ್ ಸೈಕಲ್ ನೀಡಲಾಗುವುದು.

ಈ ವರ್ಷ ಜಲ್ಲಿಕಟ್ಟು ಋತುವು ಪುದುಕೊಟ್ಟೈ ಜಿಲ್ಲೆಯಲ್ಲಿ ಕಳೆದ ವಾರ ಪ್ರಾರಂಭವಾಯಿತು. ಈ ಕ್ರೀಡೆಯು ಸಾಂಪ್ರದಾಯಿಕವಾಗಿ ಅಲಂಗನಲ್ಲೂರು, ಅವನಿಯಪುರಂ, ಮತ್ತು ಮಧುರೈನ ಪಾಲಮೇಡು ಮತ್ತು ದಕ್ಷಿಣ ತಮಿಳುನಾಡಿನ ಇತರ ಗ್ರಾಮಾಂತರ ಹಳ್ಳಿಗಳಲ್ಲಿ ಪೊಂಗಲ್ ಸುಗ್ಗಿಯ ಹಬ್ಬದ ಸಮಯದಲ್ಲಿ ನಡೆಯುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು