AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP Office Attacked: ತಮಿಳುನಾಡು ಬಿಜೆಪಿ ಕೇಂದ್ರ ಕಚೇರಿ ‘ಕಮಲಾಲಯಂ’ ಮೇಲೆ ಪೆಟ್ರೋಲ್ ಬಾಂಬ್​ ದಾಳಿ​

Tamil Nadu BJP Office Attacked: ತಮಿಳುನಾಡಿನಲ್ಲಿ ಬಿಜೆಪಿ ಕಚೇರಿ ಮೇಲೆ ಅಪರಿಚಿತರು ಪೆಟ್ರೋಲ್ ಬಾಂಬ್​ ದಾಳಿ ನಡೆಸಿದ್ದಾರೆ. ಇಂದು ಗುರುವಾರ ಬೆಳಗಿನ ಜಾವ 1 ಗಂಟೆಯಲ್ಲಿ ಈ ದಾಳಿ ನಡೆದಿದೆ.

BJP Office Attacked: ತಮಿಳುನಾಡು ಬಿಜೆಪಿ ಕೇಂದ್ರ ಕಚೇರಿ ‘ಕಮಲಾಲಯಂ’ ಮೇಲೆ ಪೆಟ್ರೋಲ್ ಬಾಂಬ್​ ದಾಳಿ​
ತಮಿಳುನಾಡಿನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್​ ದಾಳಿ​
TV9 Web
| Updated By: ಸಾಧು ಶ್ರೀನಾಥ್​|

Updated on:Feb 10, 2022 | 7:38 AM

Share

ಚೆನ್ನೈ: ತಮಿಳುನಾಡಿನಲ್ಲಿ ಬಿಜೆಪಿ ಪ್ರಧಾನ ಕಚೇರಿಯ ಮೇಲೆ ಅಪರಿಚಿತರು ಪೆಟ್ರೋಲ್ ಬಾಂಬ್​ ದಾಳಿ ನಡೆಸಿದ್ದಾರೆ. ಇಂದು ಗುರುವಾರ ಬೆಳಗಿನ ಜಾವ ಭಾರತೀಯ ಜನತಾ ಪಕ್ಷದ ಕಚೇರಿ ಮೇಲೆ ಈ ದಾಳಿ ನಡೆದಿದೆ. ತಮಿಳುನಾಡು ಬಿಜೆಪಿ ಕೇಂದ್ರ ಕಚೇರಿ ಕಮಲಾಲಯಂ (Kamalalayam) ಮೇಲೆ ಈ ದಾಳಿ ನಡೆದಿದೆ. ಟಿ. ನಗರ್​ ಏರಿಯಾದಲ್ಲಿ (T Nagar) ಈ ಬಿಜೆಪಿ ಕಚೇರಿಯಿದ್ದು, ಘಟನೆಯು ಮುಖ್ಯಮಂತ್ರಿ ಸ್ಟ್ಯಾಲಿನ್​ ಅಧಿಕೃತ ಕಚೇರಿಯಿಂದ 2 ಕಿಮೀ ದೂರದಲ್ಲಿದೆ. ANI ಸುದ್ದಿ ಸಂಸ್ಥೆ ಈ ಕುರಿತು ಟ್ವೀಟ್​ ಮಾಡಿದೆ.

15 ವರ್ಷಗಳ ಹಿಂದೆಯೂ ಡಿಎಂಕೆ ಆಡಳಿತದಲ್ಲಿದ್ದಾಗ ಇಂತಹುದೇ ಘಟನೆ ನಡೆದಿತ್ತು: ಮಧ್ಯರಾತ್ರಿ 1.30 ರ ವೇಳೆ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್​ ಬಾಂಬ್​ ದಾಳಿ ನಡೆದಿದೆ. 15 ವರ್ಷಗಳ ಹಿಂದೆ ಇದೇ ಡಿಎಂಕೆ ಪಕ್ಷ ರಾಜ್ಯದಲ್ಲಿ ಆಡಳಿತದಲ್ಲಿದ್ದಾಗ ಇದೇ ಕಮಲಾಲಯಂ ಕಚೇರಿ ಮೇಲೆ ಇಂತಹುದೇ ದಾಳಿ ನಡೆದಿತ್ತು. ಈ ಘಟನೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರವನ್ನು ನಾವು ಖಂಡಿಸುತ್ತೇವೆ. ಬಿಜೆಪಿ ಕಾರ್ಯಕರ್ತರು ಇಂತಹ ಘಟನೆಗಳಿಂದ ಎದೆಗುಂದುವುದಿಲ್ಲ. ಪೊಲೀಸರಿಗೂ ಈ ಬಗ್ಗೆ ಮಾಹಿತಿ ಕೊಟ್ಟಿದ್ದೇವೆ ಎಂದು ಬಿಜೆಪಿ ನಾಯಕ ಕರಾಟೆ ತ್ಯಾಗರಾಜನ್​ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮುಂಬೈ ಗೊರೆಗಾವ್​​ನಲ್ಲಿ ಕಾರಿನಲ್ಲಿ ಯುವತಿಯ ಶವ ಪತ್ತೆ: ಮುಂಬೈ: ಗೊರೆಗಾವ್​​ನ ನಿರ್ಜನ ಪ್ರದೇಶದಲ್ಲಿ ಕಾರೊಂದರಲ್ಲಿ ಯುವತಿಯ ಶವ ಪತ್ತೆಯಾಗಿದೆ. ಪೊಲೀಸರು (Mumbai Goregaon Police Station) ಸ್ಥಳಕ್ಕೆ ಹಾಜರಾಗಿದ್ದು, ಯುವತಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಗೊರೆಗಾವ್​​ನಲ್ಲಿರುವ ರಾಮ ಮಂದಿರ ಸಮೀಪ ರಸ್ತೆಯಲ್ಲಿ ಕಾರು ಪತ್ತೆಯಾಗಿದ್ದು, ಅದರಲ್ಲಿ ಗುರುತು ಸಿಗಲಾರದಷ್ಟು ಕೊಳೆತುಹೋಗಿರುವ ಸ್ಥಿತಿಯಲ್ಲಿ ಈ ಯುವತಿಯ ಶವ ಪತ್ತೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಅಪ್ಪನ ಜೋತೆ ಪತಿ ಸೇರಿ ಪತ್ನಿಯ ಕೊಲೆ: ಹತ್ಯೆಗೂ ಮುನ್ನ ಬೇಗ ಬನ್ನಿ ಎಂದು ತಾಯಿಗೆ ಕರೆ ಮಾಡಿದ್ದ ಮೃತ ರೇಖಾ

ಇದನ್ನೂ ಓದಿ: Human Age: ಅರವತ್ತಕ್ಕೆ ಅರಳು ಮರಳು ಎನ್ನುವುದು ಏಕೆ? ಏನಿದು 60ರ ಲೆಕ್ಕಾಚಾರ?

Published On - 6:43 am, Thu, 10 February 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?