AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP Office Attacked: ತಮಿಳುನಾಡು ಬಿಜೆಪಿ ಕೇಂದ್ರ ಕಚೇರಿ ‘ಕಮಲಾಲಯಂ’ ಮೇಲೆ ಪೆಟ್ರೋಲ್ ಬಾಂಬ್​ ದಾಳಿ​

Tamil Nadu BJP Office Attacked: ತಮಿಳುನಾಡಿನಲ್ಲಿ ಬಿಜೆಪಿ ಕಚೇರಿ ಮೇಲೆ ಅಪರಿಚಿತರು ಪೆಟ್ರೋಲ್ ಬಾಂಬ್​ ದಾಳಿ ನಡೆಸಿದ್ದಾರೆ. ಇಂದು ಗುರುವಾರ ಬೆಳಗಿನ ಜಾವ 1 ಗಂಟೆಯಲ್ಲಿ ಈ ದಾಳಿ ನಡೆದಿದೆ.

BJP Office Attacked: ತಮಿಳುನಾಡು ಬಿಜೆಪಿ ಕೇಂದ್ರ ಕಚೇರಿ ‘ಕಮಲಾಲಯಂ’ ಮೇಲೆ ಪೆಟ್ರೋಲ್ ಬಾಂಬ್​ ದಾಳಿ​
ತಮಿಳುನಾಡಿನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್​ ದಾಳಿ​
TV9 Web
| Edited By: ಸಾಧು ಶ್ರೀನಾಥ್​|

Updated on:Feb 10, 2022 | 7:38 AM

Share

ಚೆನ್ನೈ: ತಮಿಳುನಾಡಿನಲ್ಲಿ ಬಿಜೆಪಿ ಪ್ರಧಾನ ಕಚೇರಿಯ ಮೇಲೆ ಅಪರಿಚಿತರು ಪೆಟ್ರೋಲ್ ಬಾಂಬ್​ ದಾಳಿ ನಡೆಸಿದ್ದಾರೆ. ಇಂದು ಗುರುವಾರ ಬೆಳಗಿನ ಜಾವ ಭಾರತೀಯ ಜನತಾ ಪಕ್ಷದ ಕಚೇರಿ ಮೇಲೆ ಈ ದಾಳಿ ನಡೆದಿದೆ. ತಮಿಳುನಾಡು ಬಿಜೆಪಿ ಕೇಂದ್ರ ಕಚೇರಿ ಕಮಲಾಲಯಂ (Kamalalayam) ಮೇಲೆ ಈ ದಾಳಿ ನಡೆದಿದೆ. ಟಿ. ನಗರ್​ ಏರಿಯಾದಲ್ಲಿ (T Nagar) ಈ ಬಿಜೆಪಿ ಕಚೇರಿಯಿದ್ದು, ಘಟನೆಯು ಮುಖ್ಯಮಂತ್ರಿ ಸ್ಟ್ಯಾಲಿನ್​ ಅಧಿಕೃತ ಕಚೇರಿಯಿಂದ 2 ಕಿಮೀ ದೂರದಲ್ಲಿದೆ. ANI ಸುದ್ದಿ ಸಂಸ್ಥೆ ಈ ಕುರಿತು ಟ್ವೀಟ್​ ಮಾಡಿದೆ.

15 ವರ್ಷಗಳ ಹಿಂದೆಯೂ ಡಿಎಂಕೆ ಆಡಳಿತದಲ್ಲಿದ್ದಾಗ ಇಂತಹುದೇ ಘಟನೆ ನಡೆದಿತ್ತು: ಮಧ್ಯರಾತ್ರಿ 1.30 ರ ವೇಳೆ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್​ ಬಾಂಬ್​ ದಾಳಿ ನಡೆದಿದೆ. 15 ವರ್ಷಗಳ ಹಿಂದೆ ಇದೇ ಡಿಎಂಕೆ ಪಕ್ಷ ರಾಜ್ಯದಲ್ಲಿ ಆಡಳಿತದಲ್ಲಿದ್ದಾಗ ಇದೇ ಕಮಲಾಲಯಂ ಕಚೇರಿ ಮೇಲೆ ಇಂತಹುದೇ ದಾಳಿ ನಡೆದಿತ್ತು. ಈ ಘಟನೆಯ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರವನ್ನು ನಾವು ಖಂಡಿಸುತ್ತೇವೆ. ಬಿಜೆಪಿ ಕಾರ್ಯಕರ್ತರು ಇಂತಹ ಘಟನೆಗಳಿಂದ ಎದೆಗುಂದುವುದಿಲ್ಲ. ಪೊಲೀಸರಿಗೂ ಈ ಬಗ್ಗೆ ಮಾಹಿತಿ ಕೊಟ್ಟಿದ್ದೇವೆ ಎಂದು ಬಿಜೆಪಿ ನಾಯಕ ಕರಾಟೆ ತ್ಯಾಗರಾಜನ್​ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮುಂಬೈ ಗೊರೆಗಾವ್​​ನಲ್ಲಿ ಕಾರಿನಲ್ಲಿ ಯುವತಿಯ ಶವ ಪತ್ತೆ: ಮುಂಬೈ: ಗೊರೆಗಾವ್​​ನ ನಿರ್ಜನ ಪ್ರದೇಶದಲ್ಲಿ ಕಾರೊಂದರಲ್ಲಿ ಯುವತಿಯ ಶವ ಪತ್ತೆಯಾಗಿದೆ. ಪೊಲೀಸರು (Mumbai Goregaon Police Station) ಸ್ಥಳಕ್ಕೆ ಹಾಜರಾಗಿದ್ದು, ಯುವತಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ. ಗೊರೆಗಾವ್​​ನಲ್ಲಿರುವ ರಾಮ ಮಂದಿರ ಸಮೀಪ ರಸ್ತೆಯಲ್ಲಿ ಕಾರು ಪತ್ತೆಯಾಗಿದ್ದು, ಅದರಲ್ಲಿ ಗುರುತು ಸಿಗಲಾರದಷ್ಟು ಕೊಳೆತುಹೋಗಿರುವ ಸ್ಥಿತಿಯಲ್ಲಿ ಈ ಯುವತಿಯ ಶವ ಪತ್ತೆಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಅಪ್ಪನ ಜೋತೆ ಪತಿ ಸೇರಿ ಪತ್ನಿಯ ಕೊಲೆ: ಹತ್ಯೆಗೂ ಮುನ್ನ ಬೇಗ ಬನ್ನಿ ಎಂದು ತಾಯಿಗೆ ಕರೆ ಮಾಡಿದ್ದ ಮೃತ ರೇಖಾ

ಇದನ್ನೂ ಓದಿ: Human Age: ಅರವತ್ತಕ್ಕೆ ಅರಳು ಮರಳು ಎನ್ನುವುದು ಏಕೆ? ಏನಿದು 60ರ ಲೆಕ್ಕಾಚಾರ?

Published On - 6:43 am, Thu, 10 February 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ