AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್​ಗಢದ ಹಳ್ಳಿಯಲ್ಲಿ ಬೋರ್​​ವೆಲ್​ಗೆ ಬಿದ್ದ ಬಾಲಕ; ನಿನ್ನೆ ಸಂಜೆಯಿಂದ ರಕ್ಷಣಾ ಕಾರ್ಯಾಚರಣೆ

80 ಅಡಿ ಆಳದ ಬೋರ್​​ವೆಲ್​ಗೆ ಬಿದ್ದಿರುವ ಬಾಲಕ ಜೀವಂತವಾಗಿದ್ದು, ಆತನನ್ನು ಸುರಕ್ಷಿತವಾಗಿ ಹೊರತರಲು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಪೈಪ್ ಮೂಲಕ ಬಾಲಕನಿಗೆ ಬೋರ್‌ವೆಲ್ ಒಳಗೆ ಆಮ್ಲಜನಕವನ್ನು ಒದಗಿಸಲಾಗುತ್ತಿದೆ.

ಛತ್ತೀಸ್​ಗಢದ ಹಳ್ಳಿಯಲ್ಲಿ ಬೋರ್​​ವೆಲ್​ಗೆ ಬಿದ್ದ ಬಾಲಕ; ನಿನ್ನೆ ಸಂಜೆಯಿಂದ ರಕ್ಷಣಾ ಕಾರ್ಯಾಚರಣೆ
ಛತ್ತೀಸ್​ಗಢದಲ್ಲಿ ಬೋರ್​ವೆಲ್​ಗೆ ಬಿದ್ದಿರುವ ಬಾಲಕImage Credit source: Zee News
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 11, 2022 | 4:02 PM

ರಾಯ್‌ಪುರ: ಛತ್ತೀಸ್‌ಗಢದ ಜಂಜಗಿರ್ ಚಂಪಾ ಜಿಲ್ಲೆಯ ಹಳ್ಳಿಯೊಂದರಲ್ಲಿ 80 ಅಡಿ ಆಳದ ಕೊಳವೆಬಾವಿಯಲ್ಲಿ (Borewell) ಬಿದ್ದ 11 ವರ್ಷದ ಬಾಲಕನನ್ನು ರಕ್ಷಿಸಲು ಶುಕ್ರವಾರ ರಾತ್ರಿಯಿಂದ ರಕ್ಷಣಾ ಕಾರ್ಯಾಚರಣೆ (Rescue Operation) ನಡೆಸಲಾಗುತ್ತಿದೆ, ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು, ಬಾಲಕನನ್ನು ಮೇಲೆತ್ತಲು ಸಾಧ್ಯವಾಗಿಲ್ಲ. ಜಂಜಗೀರ್ ಚಂಪಾ ಜಿಲ್ಲೆಯ ಮಲ್ಖರೋಡಾ ಡೆವಲಪ್‌ಮೆಂಟ್ ಬ್ಲಾಕ್‌ನ ಪಿಹ್ರಿದ್ ಗ್ರಾಮದಲ್ಲಿನ ರಾಹುಲ್ ಸಾಹು ಎಂಬ ಬಾಲಕ ತನ್ನ ಮನೆಯ ಹಿತ್ತಲಿನಲ್ಲಿದ್ದ ಬೋರ್‌ವೆಲ್‌ಗೆ ಬಿದ್ದಿದ್ದಾನೆ.

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಮಗುವನ್ನು ಹೊರತೆಗೆಯಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು ಸ್ಥಳದಲ್ಲಿಯೇ ಇವೆ ಎಂದು ಜಾಂಜ್‌ಗೀರ್ ಚಂಪಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಅಗರ್ವಾಲ್ ತಿಳಿಸಿದ್ದಾರೆ. ಭಾರತೀಯ ಸೇನೆಯ ತಜ್ಞರು ಕೂಡ ಸ್ಥಳದಲ್ಲಿ ಕಾರ್ಯಾಚರಣೆಯಲ್ಲಿ ಸಹಕರಿಸುತ್ತಿದ್ದಾರೆ.

ಇದನ್ನೂ ಓದಿ
Image
Jaggi Vasudev: ಕ್ಯಾಮೆರಾ ಆಫ್ ಮಾಡ್ರಿ; ಟಿವಿ ಸಂದರ್ಶನದಲ್ಲಿ ತಾಳ್ಮೆ ಕಳೆದುಕೊಂಡ ಸದ್ಗುರು ಜಗ್ಗಿ ವಾಸುದೇವ್
Image
Viral Video: ಗಾಯಗೊಂಡಿದ್ದ ಪಕ್ಷಿಯನ್ನು ಕಾಪಾಡಲು ಹೋಗಿ ತಾನೇ ದಾರುಣವಾಗಿ ಅಂತ್ಯ ಕಂಡ ಉದ್ಯಮಿ; ಶಾಕಿಂಗ್ ವಿಡಿಯೋ ವೈರಲ್
Image
Kulgam Encounter: ಕಾಶ್ಮೀರದ ಕುಲ್ಗಾಂನಲ್ಲಿ ಎನ್​ಕೌಂಟರ್; ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರನ ಹತ್ಯೆ

ಸುಮಾರು 18 ಗಂಟೆಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, 50 ಅಡಿ ಆಳದವರೆಗೆ ನೆಲವನ್ನು ಅಗೆಯಲಾಗಿದೆ. ಆದರೂ ಬಾಲಕನನ್ನು ಮೇಲೆತ್ತಲು ಸಾಧ್ಯವಾಗಿಲ್ಲ. ಮೇಲಿನ 60ರಿಂದ 65 ಅಡಿಗಳ ನಂತರ ಸುರಂಗವನ್ನು ಅಗೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಜಿಲ್ಲಾಧಿಕಾರಿ, ಎಸ್​ಪಿ, ಎನ್‌ಡಿಆರ್‌ಎಫ್-ಎಸ್‌ಡಿಆರ್‌ಎಫ್ ತಂಡಗಳು ಪಿಹ್ರಿದ್ ಗ್ರಾಮದಲ್ಲಿ ಉಪಸ್ಥಿತರಿದ್ದು, ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ರಕ್ಷಣಾ ಕಾರ್ಯಾಚರಣೆಗಳ ಬಗ್ಗೆ ನಿರಂತರವಾಗಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಮಗುವನ್ನು ರಕ್ಷಿಸಲು ಪಕ್ಕದಲ್ಲಿ ಸಮಾನಾಂತರ ಹೊಂಡವನ್ನು ಅಗೆಯಲು ಜೆಸಿಬಿ ಯಂತ್ರಗಳನ್ನು ಬಳಸಲಾಗುತ್ತಿದೆ.

ಇದನ್ನೂ ಓದಿ: Viral Video: ಬಾಯಾರಿದ ನಾಯಿಮರಿಗೆ ಬೋರ್​ವೆಲ್​ ಪಂಪ್ ಹೊಡೆದು ನೀರು ಕುಡಿಸಿದ ಬಾಲಕ; ವಿಡಿಯೋ ವೈರಲ್

ಸದ್ಯಕ್ಕೆ ಬೋರ್​​ವೆಲ್​ಗೆ ಬಿದ್ದಿರುವ ಬಾಲಕ ಜೀವಂತವಾಗಿದ್ದು, ಆತನನ್ನು ಸುರಕ್ಷಿತವಾಗಿ ಹೊರತರಲು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಪೈಪ್ ಮೂಲಕ ಬಾಲಕನಿಗೆ ಬೋರ್‌ವೆಲ್ ಒಳಗೆ ಆಮ್ಲಜನಕವನ್ನು ಒದಗಿಸಲಾಗುತ್ತಿದೆ. ರಾಹುಲ್ ಜೋರಾಗಿ ಅಳುತ್ತಿರುವ ಶಬ್ದ ಕೇಳಿದ ಕುಟುಂಬಸ್ಥರು ಬೋರ್‌ವೆಲ್‌ನಲ್ಲಿ ಆತ ಬಿದ್ದಿರುವ ಬಗ್ಗೆ ಸುತ್ತಮುತ್ತಲಿನ ಮನೆಯವರಿಗೆ ಮಾಹಿತಿ ನೀಡಿ, ಆತನನ್ನು ಮೇಲೆತ್ತಲು ಪ್ರಯತ್ನಿಸಿದ್ದರು. ಆದರೆ, ಅದು ಸಾಧ್ಯವಾಗದಿದ್ದಾಗ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ರಕ್ಷಣಾ ಕಾರ್ಯ ಆರಂಭಿಸಲಾಗಿದೆ.

ನಿನ್ನೆ ಸಂಜೆಯಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮಾಹಿತಿ ಪ್ರಕಾರ ನಾವು ರಾಹುಲ್ ಅನ್ನು ತಲುಪಲು 5-6 ಗಂಟೆ ಬೇಕಾಗಬಹುದು. ಬಾಳೆಹಣ್ಣು ಮತ್ತು ಜ್ಯೂಸ್ ಅನ್ನು ಮಗುವಿಗೆ ತಲುಪಿಸಲಾಗಿದ್ದು, ಆತನ ಯೋಗಕ್ಷೇಮಕ್ಕಾಗಿ ನಾವೆಲ್ಲರೂ ಪ್ರಾರ್ಥಿಸುತ್ತೇವೆ ಎಂದು ಸಿಎಂ ಬಘೇಲ್ ಇಂದು ಟ್ವೀಟ್ ಮಾಡಿದ್ದಾರೆ.

“ನಾನು ರಾಹುಲ್ ಅವರ ಪೋಷಕರೊಂದಿಗೆ ವಿಡಿಯೋ ಕಾಲ್ ಮೂಲಕ ಮಾತನಾಡಿದ್ದೇನೆ. ಅವರ ಮನಸ್ಥಿತಿಯನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಮಗು ಬೋರ್‌ವೆಲ್‌ಗೆ ಬಿದ್ದಿರುವುದರಿಂದ ನಮಗೂ ದುಃಖವಾಗಿದೆ. ಅವನನ್ನು ಉಳಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಸಿಎಂ ಬಘೇಲ್ ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:00 pm, Sat, 11 June 22

ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು
ಉತ್ತರ ಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 4 ಮಹಿಳೆಯರು ಸಾವು