AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್​ಗಢ: ಶಾಲೆಬಿಟ್ಟು ಟ್ರ್ಯಾಕ್ಟರ್​ ಸವಾರಿ ಮಾಡಲು ಹೋಗಿ ಮೂವರು ವಿದ್ಯಾರ್ಥಿಗಳು ಸಾವು

ಶಾಲೆಬಿಟ್ಟು ಟ್ರ್ಯಾಕ್ಟರ್​ ಸವಾರಿ ಮಾಡಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. ಮತ್ತೊಬ್ಬ ಬಾಲಕ ಗಾಯಗೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಕುರುಡ್ ಪೊಲೀಸ್ ಠಾಣೆ ವ್ಯಾಪ್ತಿಯ ಚರ್ರಾ ಗ್ರಾಮದ ಬಳಿ ಬುಧವಾರ ಈ ಅಪಘಾತ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಮೃತರನ್ನು ಮೋಗ್ರಾ ಗ್ರಾಮದ ನಿವಾಸಿಗಳಾದ ಪ್ರೀತಮ್ ಚಂದ್ರಕರ್ (16), ಮಾಯಾಂಕ್ ಧ್ರುವ್ (16) ಮತ್ತು ಚರ್ರಾದ ಹೊನೇಂದ್ರ ಸಾಹು (14) ಎಂದು ಗುರುತಿಸಲಾಗಿದೆ

ಛತ್ತೀಸ್​ಗಢ: ಶಾಲೆಬಿಟ್ಟು ಟ್ರ್ಯಾಕ್ಟರ್​ ಸವಾರಿ ಮಾಡಲು ಹೋಗಿ ಮೂವರು ವಿದ್ಯಾರ್ಥಿಗಳು ಸಾವು
ಪೊಲೀಸ್​
ನಯನಾ ರಾಜೀವ್
|

Updated on: Feb 06, 2025 | 3:14 PM

Share

ಶಾಲೆಗೆ ಚಕ್ಕರ್ ಹೊಡೆದು ಟ್ರ್ಯಾಕ್ಟರ್ ಸವಾರಿ ಮಾಡಲು ಹೋಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. ಛತ್ತೀಸ್​ಗಢದ ಧಮತರಿ ಜಿಲ್ಲೆಯಲ್ಲಿ ಶಾಲೆ ಬಿಟ್ಟು ಟ್ರ್ಯಾಕ್ಟರ್​ ಏರಿ ಹೊರಟಾಗ ಅದು ಪಲ್ಟಿಯಾಗಿ ಮೂವರು ಅಲ್ಲೇ ಪ್ರಾಣ ಬಿಟ್ಟಿದ್ದಾರೆ. ಮತ್ತೊಬ್ಬ ಬಾಲಕ ಗಾಯಗೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಕುರುಡ್ ಪೊಲೀಸ್ ಠಾಣೆ ವ್ಯಾಪ್ತಿಯ ಚರ್ರಾ ಗ್ರಾಮದ ಬಳಿ ಬುಧವಾರ ಈ ಅಪಘಾತ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರನ್ನು ಮೋಗ್ರಾ ಗ್ರಾಮದ ನಿವಾಸಿಗಳಾದ ಪ್ರೀತಮ್ ಚಂದ್ರಕರ್ (16), ಮಾಯಾಂಕ್ ಧ್ರುವ್ (16) ಮತ್ತು ಚರ್ರಾದ ಹೊನೇಂದ್ರ ಸಾಹು (14) ಎಂದು ಗುರುತಿಸಲಾಗಿದೆ . ಗಾಯಗೊಂಡ ಬಾಲಕ ಅರ್ಜುನ್ ಯಾದವ್ ಬನಗರ ಮೂಲದವನು ಎಂದು ಅವರು ಹೇಳಿದರು.

ಚಂದ್ರಕರ್ ತನ್ನ ಟ್ರ್ಯಾಕ್ಟರ್ ಹೊರತೆಗೆದಾಗ ನಾಲ್ವರೂ ಶಾಲೆಯನ್ನು ಬಿಟ್ಟು ಅದರ ಮೇಲೆ ಸವಾರಿ ಮಾಡಲು ಕುರುಡ್‌ಗೆ ಹೋದರು ಎಂದು ಅವರು ಹೇಳಿದರು. ಹಿಂತಿರುಗುವಾಗ, ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ಚಂದ್ರಕರ್, ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡು ಚಾರ್ರಾದ ಕೃಷಿ ಕಾಲೇಜು ಬಳಿ ಪಲ್ಟಿ ಹೊಡೆದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮಹಾಕುಂಭಕ್ಕೆ ತೆರಳುವ ಮಾರ್ಗದಲ್ಲಿ ಎರಡು ಪ್ರತ್ಯೇಕ ಅಪಘಾತ, ಮೂವರು ಸಾವು, 40 ಮಂದಿಗೆ ಗಾಯ

ಮೂವರು ಬಾಲಕರು ಟ್ರ್ಯಾಕ್ಟರ್ ಅಡಿಯಲ್ಲಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಅವರು ಹೇಳಿದರು. ಸ್ಥಳೀಯರು ಮಾಹಿತಿ ನೀಡಿದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ