ಛತ್ತೀಸ್​ಗಢ: 5 ವರ್ಷಗಳಿಂದ ನಾಪತ್ತೆಯಾಗಿದ್ದ ಸುದ್ದಿ ನಿರೂಪಕಿಯ ಹುಡುಕಾಟದ ವೇಳೆ ಶವ ಪತ್ತೆ

ಸುದ್ದಿ ನಿರೂಪಕಿ   ಸಲ್ಮಾ ಸುಲ್ತಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಂಗಳವಾರ ಶೋಧ ನಡೆಸುತ್ತಿದ್ದ ವೇಳೆ ಛತ್ತೀಸ್‌ಗಢದ ಕೊರ್ಬಾ-ದರ್ರಿ ರಸ್ತೆಯಲ್ಲಿ ಪಾಲಿಥಿನ್‌ನಲ್ಲಿ ಸುತ್ತಿದ ಶವ ಪತ್ತೆಯಾಗಿದೆ. ಛತ್ತೀಸ್‌ಗಢದ ಸುದ್ದಿ ನಿರೂಪಕಿ ಸುಲ್ತಾನಾ ಐದು ವರ್ಷಗಳ ಹಿಂದೆ ನಾಪತ್ತೆಯಾಗಿದ್ದರು. ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ, ಸಲ್ಮಾ ಅವರ ಕುಟುಂಬವು ಶವವನ್ನು ಗುರುತಿಸಲು ಸಾಧ್ಯವಾಗಿಲ್ಲ. ಮೃತದೇಹದೊಂದಿಗೆ ಒಂದು ಜೊತೆ ಚಪ್ಪಲಿಯೂ ಪತ್ತೆಯಾಗಿದೆ.

ಛತ್ತೀಸ್​ಗಢ: 5 ವರ್ಷಗಳಿಂದ ನಾಪತ್ತೆಯಾಗಿದ್ದ ಸುದ್ದಿ ನಿರೂಪಕಿಯ ಹುಡುಕಾಟದ ವೇಳೆ ಶವ ಪತ್ತೆ
ಸಾವು
Follow us
|

Updated on: Aug 23, 2023 | 9:15 AM

ಸುದ್ದಿ ನಿರೂಪಕಿ ಸಲ್ಮಾ ಸುಲ್ತಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಂಗಳವಾರ ಶೋಧ ನಡೆಸುತ್ತಿದ್ದ ವೇಳೆ ಛತ್ತೀಸ್‌ಗಢದ ಕೊರ್ಬಾ-ದರ್ರಿ ರಸ್ತೆಯಲ್ಲಿ ಪಾಲಿಥಿನ್‌ನಲ್ಲಿ ಸುತ್ತಿದ ಶವ ಪತ್ತೆಯಾಗಿದೆ. ಛತ್ತೀಸ್‌ಗಢದ ಸುದ್ದಿ ನಿರೂಪಕಿ ಸುಲ್ತಾನಾ ಐದು ವರ್ಷಗಳ ಹಿಂದೆ ನಾಪತ್ತೆಯಾಗಿದ್ದರು. ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ, ಸಲ್ಮಾ ಅವರ ಕುಟುಂಬವು ಶವವನ್ನು ಗುರುತಿಸಲು ಸಾಧ್ಯವಾಗಿಲ್ಲ. ಮೃತದೇಹದೊಂದಿಗೆ ಒಂದು ಜೊತೆ ಚಪ್ಪಲಿಯೂ ಪತ್ತೆಯಾಗಿದೆ.

ಸಲ್ಮಾ ಸುಲ್ತಾನಾ ಅವರ ನಾಪತ್ತೆ ಪ್ರಕರಣದಲ್ಲಿ ಕೆಲವು ಮಾಹಿತಿಗಳು ಲಭ್ಯವಾಗಿದ್ದು, ಈ ಪ್ರಕಾರ ಮೃತದೇಹವನ್ನು ಹುಡುಕಲು ನಾಲ್ಕು ಪಥದ ರಸ್ತೆಯನ್ನು ಅಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಲ್ಮಾ ಸುಲ್ತಾನಾ ಕೊರ್ಬಾದ ಉಪನಗರ ಕುಸ್ಮುಂಡಾ ನಿವಾಸಿ. ಅವರು ಸುದ್ದಿ ವರದಿ, ಸ್ಟೇಜ್ ಶೋಗಳು ಮತ್ತು ಇತರ ಕಾರ್ಯಕ್ರಮಗಳಿಗೆ ಹೆಸರುವಾಸಿಯಾಗಿದ್ದರು. ಅಕ್ಟೋಬರ್ 21, 2018 ರಂದು, ಅವರು ಕುಸ್ಮುಂಡಾದಿಂದ ಕೊರ್ಬಾಗೆ ಕೆಲಸದ ನಿಮಿತ್ತ ಬಂದಿದ್ದರು. ಆದರೆ, ಆಕೆ ಮನೆಗೆ ಹಿಂತಿರುಗಿರಲಿಲ್ಲ.

ಮತ್ತಷ್ಟು ಓದಿ: ಬೆಂಗಳೂರು: ಕಾಣೆಯಾಗಿದ್ದ ಯುವತಿ ಶವ ಪತ್ತೆ ಪಕ್ರರಣ; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿಯ ಬಂಧನ

ಆಕೆಯ ಕುಟುಂಬಸ್ಥರು ಹುಡುಕಾಡಿದರೂ ಸುಳಿವು ಸಿಕ್ಕಿರಲಿಲ್ಲ. ಕಾಣೆಯಾದ ದೂರಿನ ನಂತರ ಅವರ ಹುಡುಕಾಟವು ದಿನಗಟ್ಟಲೆ ನಡೆಯಿತು, ಆದರೆ ಅವರು ಪತ್ತೆಯಾಗಲಿಲ್ಲ. ನಂತರ ತನಿಖೆ ವೇಳೆ ಸಲ್ಮಾ ಕೊರ್ಬಾದ ಬ್ಯಾಂಕ್‌ನಿಂದ ಸಾಲ ಪಡೆದಿದ್ದು, ಅದನ್ನು ಯುವಕನೊಬ್ಬ 2018ರವರೆಗೆ ಮರುಪಾವತಿ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಆದರೆ, 2019ರ ನಂತರ ಸಾಲ ಮರುಪಾವತಿ ನಿಂತಿತ್ತು.

ತನಿಖೆಯ ವೇಳೆ ಐದು ವರ್ಷಗಳ ಹಿಂದೆ ಸಲ್ಮಾಳನ್ನು ಕೊಲೆ ಮಾಡಿ ಶವವನ್ನು ಕೊರ್ಬಾ-ದರ್ರಿ ರಸ್ತೆಯಲ್ಲಿ ಹೂಳಲಾಗಿತ್ತು ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈಗ ಶವ ಸಿಕ್ಕಿದ್ದು ಹೆಚ್ಚಿನ ಮಾಹಿತಿ ಇನ್ನೇನು ಲಭ್ಯವಾಬೇಕಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಶಿವಕುಮಾರ್ ಸಿಎಂ ಆಗಬೇಕು ಎಂದಷ್ಟೇ ಹೇಳಿದ್ದು: ಚಂದ್ರಶೇಖರನಾಥ ಸ್ವಾಮೀಜಿ
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಸೋಲಿಗೆ ಮಾಧ್ಯಮಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ ಡಿಕೆ ಸುರೇಶ್
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಹಣವನ್ನು ಗಾಳಿಯಲ್ಲಿ ತೂರಿ ಹುಟ್ಟುಹಬ್ಬ ಆಚರಿಸಿಕೊಂಡ ಹುಬ್ಬಳ್ಳಿಯ ಯುವಕ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
ಯುವಕರ ನೆಚ್ಚಿನ ಸ್ಟೈಲಿಶ್ ಕ್ಯಾಸಿಯೋ G Shock ಸ್ಮಾರ್ಟ್​ವಾಚ್ ಬಿಡುಗಡೆ
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?
‘ಎಲ್ಲರಿಗೂ ನೋವಿದೆ’; ದರ್ಶನ್ ಪ್ರಕರಣದಲ್ಲಿ ಸುಮಲತಾ, ರಾಕ್​ಲೈನ್ ಮೌನ ಏಕೆ?