AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್​ಗಢ: 5 ವರ್ಷಗಳಿಂದ ನಾಪತ್ತೆಯಾಗಿದ್ದ ಸುದ್ದಿ ನಿರೂಪಕಿಯ ಹುಡುಕಾಟದ ವೇಳೆ ಶವ ಪತ್ತೆ

ಸುದ್ದಿ ನಿರೂಪಕಿ   ಸಲ್ಮಾ ಸುಲ್ತಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಂಗಳವಾರ ಶೋಧ ನಡೆಸುತ್ತಿದ್ದ ವೇಳೆ ಛತ್ತೀಸ್‌ಗಢದ ಕೊರ್ಬಾ-ದರ್ರಿ ರಸ್ತೆಯಲ್ಲಿ ಪಾಲಿಥಿನ್‌ನಲ್ಲಿ ಸುತ್ತಿದ ಶವ ಪತ್ತೆಯಾಗಿದೆ. ಛತ್ತೀಸ್‌ಗಢದ ಸುದ್ದಿ ನಿರೂಪಕಿ ಸುಲ್ತಾನಾ ಐದು ವರ್ಷಗಳ ಹಿಂದೆ ನಾಪತ್ತೆಯಾಗಿದ್ದರು. ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ, ಸಲ್ಮಾ ಅವರ ಕುಟುಂಬವು ಶವವನ್ನು ಗುರುತಿಸಲು ಸಾಧ್ಯವಾಗಿಲ್ಲ. ಮೃತದೇಹದೊಂದಿಗೆ ಒಂದು ಜೊತೆ ಚಪ್ಪಲಿಯೂ ಪತ್ತೆಯಾಗಿದೆ.

ಛತ್ತೀಸ್​ಗಢ: 5 ವರ್ಷಗಳಿಂದ ನಾಪತ್ತೆಯಾಗಿದ್ದ ಸುದ್ದಿ ನಿರೂಪಕಿಯ ಹುಡುಕಾಟದ ವೇಳೆ ಶವ ಪತ್ತೆ
ಸಾವು
Follow us
ನಯನಾ ರಾಜೀವ್
|

Updated on: Aug 23, 2023 | 9:15 AM

ಸುದ್ದಿ ನಿರೂಪಕಿ ಸಲ್ಮಾ ಸುಲ್ತಾನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಂಗಳವಾರ ಶೋಧ ನಡೆಸುತ್ತಿದ್ದ ವೇಳೆ ಛತ್ತೀಸ್‌ಗಢದ ಕೊರ್ಬಾ-ದರ್ರಿ ರಸ್ತೆಯಲ್ಲಿ ಪಾಲಿಥಿನ್‌ನಲ್ಲಿ ಸುತ್ತಿದ ಶವ ಪತ್ತೆಯಾಗಿದೆ. ಛತ್ತೀಸ್‌ಗಢದ ಸುದ್ದಿ ನಿರೂಪಕಿ ಸುಲ್ತಾನಾ ಐದು ವರ್ಷಗಳ ಹಿಂದೆ ನಾಪತ್ತೆಯಾಗಿದ್ದರು. ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ, ಸಲ್ಮಾ ಅವರ ಕುಟುಂಬವು ಶವವನ್ನು ಗುರುತಿಸಲು ಸಾಧ್ಯವಾಗಿಲ್ಲ. ಮೃತದೇಹದೊಂದಿಗೆ ಒಂದು ಜೊತೆ ಚಪ್ಪಲಿಯೂ ಪತ್ತೆಯಾಗಿದೆ.

ಸಲ್ಮಾ ಸುಲ್ತಾನಾ ಅವರ ನಾಪತ್ತೆ ಪ್ರಕರಣದಲ್ಲಿ ಕೆಲವು ಮಾಹಿತಿಗಳು ಲಭ್ಯವಾಗಿದ್ದು, ಈ ಪ್ರಕಾರ ಮೃತದೇಹವನ್ನು ಹುಡುಕಲು ನಾಲ್ಕು ಪಥದ ರಸ್ತೆಯನ್ನು ಅಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಲ್ಮಾ ಸುಲ್ತಾನಾ ಕೊರ್ಬಾದ ಉಪನಗರ ಕುಸ್ಮುಂಡಾ ನಿವಾಸಿ. ಅವರು ಸುದ್ದಿ ವರದಿ, ಸ್ಟೇಜ್ ಶೋಗಳು ಮತ್ತು ಇತರ ಕಾರ್ಯಕ್ರಮಗಳಿಗೆ ಹೆಸರುವಾಸಿಯಾಗಿದ್ದರು. ಅಕ್ಟೋಬರ್ 21, 2018 ರಂದು, ಅವರು ಕುಸ್ಮುಂಡಾದಿಂದ ಕೊರ್ಬಾಗೆ ಕೆಲಸದ ನಿಮಿತ್ತ ಬಂದಿದ್ದರು. ಆದರೆ, ಆಕೆ ಮನೆಗೆ ಹಿಂತಿರುಗಿರಲಿಲ್ಲ.

ಮತ್ತಷ್ಟು ಓದಿ: ಬೆಂಗಳೂರು: ಕಾಣೆಯಾಗಿದ್ದ ಯುವತಿ ಶವ ಪತ್ತೆ ಪಕ್ರರಣ; ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ ಆರೋಪಿಯ ಬಂಧನ

ಆಕೆಯ ಕುಟುಂಬಸ್ಥರು ಹುಡುಕಾಡಿದರೂ ಸುಳಿವು ಸಿಕ್ಕಿರಲಿಲ್ಲ. ಕಾಣೆಯಾದ ದೂರಿನ ನಂತರ ಅವರ ಹುಡುಕಾಟವು ದಿನಗಟ್ಟಲೆ ನಡೆಯಿತು, ಆದರೆ ಅವರು ಪತ್ತೆಯಾಗಲಿಲ್ಲ. ನಂತರ ತನಿಖೆ ವೇಳೆ ಸಲ್ಮಾ ಕೊರ್ಬಾದ ಬ್ಯಾಂಕ್‌ನಿಂದ ಸಾಲ ಪಡೆದಿದ್ದು, ಅದನ್ನು ಯುವಕನೊಬ್ಬ 2018ರವರೆಗೆ ಮರುಪಾವತಿ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಆದರೆ, 2019ರ ನಂತರ ಸಾಲ ಮರುಪಾವತಿ ನಿಂತಿತ್ತು.

ತನಿಖೆಯ ವೇಳೆ ಐದು ವರ್ಷಗಳ ಹಿಂದೆ ಸಲ್ಮಾಳನ್ನು ಕೊಲೆ ಮಾಡಿ ಶವವನ್ನು ಕೊರ್ಬಾ-ದರ್ರಿ ರಸ್ತೆಯಲ್ಲಿ ಹೂಳಲಾಗಿತ್ತು ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈಗ ಶವ ಸಿಕ್ಕಿದ್ದು ಹೆಚ್ಚಿನ ಮಾಹಿತಿ ಇನ್ನೇನು ಲಭ್ಯವಾಬೇಕಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಫೈನಲ್​ಗೇರುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಆರ್​ಸಿಬಿ
ಫೈನಲ್​ಗೇರುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಆರ್​ಸಿಬಿ
ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​