ಛತ್ತೀಸ್‌ಗಢದ ಅಬುಜ್ಮಾರ್‌ನಲ್ಲಿ ಎನ್‌ಕೌಂಟರ್‌; 8 ನಕ್ಸಲರ ಹತ್ಯೆ, ಓರ್ವ ಭದ್ರತಾ ಸಿಬ್ಬಂದಿ ಸಾವು

|

Updated on: Jun 15, 2024 | 1:43 PM

ಛತ್ತೀಸ್​ಗಢದ ಅಬುಜ್ಮಾರ್​ನಲ್ಲಿ ನಕ್ಸಲರ ಎನ್​ಕೌಂಟರ್ ಕಾರ್ಯಾಚರಣೆ ನಡೆದಿದೆ. ಅಬುಜ್ಮಾರ್ ನಾರಾಯಣಪುರ, ಬಿಜಾಪುರ ಜಿಲ್ಲೆ ಮತ್ತು ದಂತೇವಾಡ ಜಿಲ್ಲೆಗಳಲ್ಲಿ ಕಂಡುಬರುವ ಗುಡ್ಡಗಾಡು ಅರಣ್ಯ ಪ್ರದೇಶವಾಗಿದೆ.

ಛತ್ತೀಸ್‌ಗಢದ ಅಬುಜ್ಮಾರ್‌ನಲ್ಲಿ ಎನ್‌ಕೌಂಟರ್‌; 8 ನಕ್ಸಲರ ಹತ್ಯೆ, ಓರ್ವ ಭದ್ರತಾ ಸಿಬ್ಬಂದಿ ಸಾವು
ಸಾಂದರ್ಭಿಕ ಚಿತ್ರ
Follow us on

ನವದೆಹಲಿ: ಅಬುಜ್ಮಾರ್​ನಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ (Naxals Encounter) 8 ನಕ್ಸಲರು ಹತರಾಗಿದ್ದಾರೆ. ಒಬ್ಬ ಯೋಧ (Indian Jawan) ಪಟ್ಟಿದ್ದಾರೆ. ಇಬ್ಬರಿಗೆ ಗಾಯಗಳಾಗಿವೆ. ಛತ್ತೀಸ್‌ಗಢದ (Chhattisgarh) ನಾರಾಯಣಪುರ ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಸುದೀರ್ಘ ಗುಂಡಿನ ಚಕಮಕಿ ನಡೆಯುತ್ತಿದೆ.

ಅಬುಜ್ಮಾರ್ ನಾರಾಯಣಪುರ, ಬಿಜಾಪುರ ಜಿಲ್ಲೆ ಮತ್ತು ದಾಂತೇವಾಡ ಜಿಲ್ಲೆಗಳಲ್ಲಿ ಬರುವ ಗುಡ್ಡಗಾಡು, ಅರಣ್ಯ ಪ್ರದೇಶವಾಗಿದೆ. ಭೌಗೋಳಿಕವಾಗಿ ಪ್ರತ್ಯೇಕವಾದ ಮತ್ತು ಹೆಚ್ಚಾಗಿ ಪ್ರವೇಶಿಸಲಾಗದ ಈ ಪ್ರದೇಶವನ್ನು ಮಾವೋವಾದಿಗಳ ಚಟುವಟಿಕೆಗಳ ಕೇಂದ್ರವೆಂದು ಪರಿಗಣಿಸಲಾಗಿದೆ.

ನಾರಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಎಂಬ 4 ಜಿಲ್ಲೆಗಳ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಅಬುಜ್ಮಾರ್ ಅರಣ್ಯದಲ್ಲಿ ಇಂದು ಬೆಳಗ್ಗೆ ಗುಂಡಿನ ಚಕಮಕಿ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳಿಂದ ಭರ್ಜರಿ ಕಾರ್ಯಾಚರಣೆ; 9 ನಕ್ಸಲರ ಬಂಧನ

4 ಜಿಲ್ಲೆಗಳ ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್‌ಜಿ) ಸಿಬ್ಬಂದಿ, ವಿಶೇಷ ಕಾರ್ಯಪಡೆ (ಎಸ್‌ಟಿಎಫ್) ಮತ್ತು ಇಂಡೋ ಟಿಬೆಟಿಯನ್ ಬಾರ್ಡರ್ ಪೋಲೀಸ್ (ಐಟಿಬಿಪಿ) 53 ನೇ ಬೆಟಾಲಿಯನ್ ಅನ್ನು ಒಳಗೊಂಡ ಕಾರ್ಯಾಚರಣೆಯನ್ನು ಜೂನ್ 12ರಂದು ಪ್ರಾರಂಭಿಸಲಾಯಿತು.

ಈ ತಿಂಗಳ ಆರಂಭದಲ್ಲಿ ನಾರಾಯಣಪುರದಲ್ಲಿ 6 ಮಾವೋವಾದಿಗಳನ್ನು ಹತ್ಯೆ ಮಾಡಲಾಗಿತ್ತು. ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು 6 ಮಾವೋವಾದಿಗಳನ್ನು ಹತ್ಯೆ ಮಾಡಿದ ಕೆಲವು ದಿನಗಳ ನಂತರ ಈ ಘಟನೆ ಬೆಳಕಿಗೆ ಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ