AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhattisgarh: ಫೋನ್​ನಲ್ಲಿ ಮಾತನಾಡುತ್ತಾ ಬಸ್​ ಚಾಲನೆ, ಸೇತುವೆಗೆ ಡಿಕ್ಕಿ, 26 ಪ್ರಯಾಣಿಕರಿಗೆ ಗಾಯ

ಛತ್ತೀಸ್‌ಗಢದ ಘರ್ಘೋಡಾ ಪ್ರದೇಶದ ಬಳಿ ವೇಗವಾಗಿ ಬಂದ ಬಸ್(Bus) ಸೇತುವೆಗೆ ಡಿಕ್ಕಿ ಹೊಡೆದು 26 ಜನರು ಗಾಯಗೊಂಡಿದ್ದಾರೆ.

Chhattisgarh: ಫೋನ್​ನಲ್ಲಿ ಮಾತನಾಡುತ್ತಾ ಬಸ್​ ಚಾಲನೆ, ಸೇತುವೆಗೆ ಡಿಕ್ಕಿ, 26 ಪ್ರಯಾಣಿಕರಿಗೆ ಗಾಯ
ಬಸ್ ಅಪಘಾತImage Credit source: India Today
Follow us
ನಯನಾ ರಾಜೀವ್
|

Updated on: Jun 19, 2023 | 12:39 PM

ಛತ್ತೀಸ್‌ಗಢದ ಘರ್ಘೋಡಾ ಪ್ರದೇಶದ ಬಳಿ ವೇಗವಾಗಿ ಬಂದ ಬಸ್(Bus) ಸೇತುವೆಗೆ ಡಿಕ್ಕಿ ಹೊಡೆದು 26 ಜನರು ಗಾಯಗೊಂಡಿದ್ದಾರೆ. ರೈಲ್ವೆ ಸೇತುವೆಯ ಮೇಲೆ ಸಂಭವಿಸಿದ ಬಸ್ ಅಪಘಾತದಲ್ಲಿ ಸುಮಾರು 26 ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಚಾಲಕ ವಾಹನ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡುವುದರಲ್ಲಿ ನಿರತರಾಗಿದ್ದರಿಂದ ಅಪಘಾತ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಏಪ್ರಿಲ್‌ನಲ್ಲಿ ಇದೇ ರೀತಿಯ ಅಪಘಾತದಲ್ಲಿ ಛತ್ತೀಸ್‌ಗಢದಲ್ಲಿ ಬಸ್ ಪಲ್ಟಿಯಾಗಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 40 ಜನರು ಗಾಯಗೊಂಡಿದ್ದರು. ಆ ಸಮಯದಲ್ಲಿ, ಗಾಯಾಳುಗಳನ್ನು ತಕ್ಷಣವೇ ಅಂಬಾಗರ್ ಚೌಕಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಯಿತು. ಬಸ್ ದೊಂಡಿ ಲೋಹರಾ ಪ್ರದೇಶದ ಗ್ರಾಮಕ್ಕೆ ತೆರಳುತ್ತಿತ್ತು.

ಮತ್ತೊಂದು ಘಟನೆ ಮಸ್ಸೂರಿ-ಡೆಹ್ರಾಡೂನ್ ರಸ್ತೆಯಲ್ಲಿ ಬಸ್ ಕಂದಕಕ್ಕೆ ಬಿದ್ದ ಪರಿಣಾಮ ಬಸ್ ಚಾಲಕ ಸೇರಿದಂತೆ 22 ಜನರು ಗಾಯಗೊಂಡಿದ್ದರು. ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಹಾಯದಿಂದ ಎಲ್ಲಾ ಗಾಯಾಳುಗಳನ್ನು ರಕ್ಷಿಸಲಾಗಿದೆ ಮತ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!