Chhattisgarh Accident: ಛತ್ತೀಸ್‌ಗಢದಲ್ಲಿ ಕಾರಿಗೆ ಕಬ್ಬಿಣ ತುಂಬಿದ ಟ್ರಕ್ ಡಿಕ್ಕಿ: 4 ಮಂದಿ ಸಾವು

ಕಬ್ಬಿಣ ತುಂಬಿದ ಟ್ರಕ್​ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಛತ್ತೀಸ್​ಗಢದ ಬಲೋದ್ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆ ಮತ್ತು ಅವರ ಮಗಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ.

Chhattisgarh Accident: ಛತ್ತೀಸ್‌ಗಢದಲ್ಲಿ ಕಾರಿಗೆ ಕಬ್ಬಿಣ ತುಂಬಿದ ಟ್ರಕ್ ಡಿಕ್ಕಿ: 4 ಮಂದಿ ಸಾವು
ಅಪಘಾತ
Image Credit source: India Today

Updated on: Feb 22, 2023 | 9:40 AM

ಕಬ್ಬಿಣ ತುಂಬಿದ ಟ್ರಕ್​ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿರುವ ಘಟನೆ ಛತ್ತೀಸ್​ಗಢದ ಬಲೋದ್ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆ ಮತ್ತು ಅವರ ಮಗಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಗುಂಡರ್ದೇಹಿ ಪೊಲೀಸ್ ಠಾಣೆ ವ್ಯಾಪ್ತಿಯ ಖಪಡವಾಡ ಬಳಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ವರದಿಯ ಪ್ರಕಾರ, ಮಹಿಳೆ, ಸಿಮ್ರಾನ್ ಸಲೂಜಾ ಮತ್ತು ಅವರ ಮಗಳು ಯಾವುದೋ ಕೆಲಸದ ನಿಮಿತ್ತ ರಾಯ್‌ಪುರಕ್ಕೆ ತೆರಳಿದ್ದ ವೇಳೆ ಅವರ ಕಾರು ಕೆಟ್ಟು ನಿಂತಿತ್ತು. ನಂತರ ಅವರು ಕಾರನ್ನು ಬಾಡಿಗೆಗೆ ಕಾರೊಂದು ತೆಗೆದುಕೊಂಡು ಬಲೋದ್‌ಗೆ ಹಿಂತಿರುಗುತ್ತಿದ್ದರು.

ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಅಪಘಾತದ ವೇಳೆ ಕಾರಿನಲ್ಲಿ ಬಾಡಿಗೆ ಕಾರಿನ ಚಾಲಕ, ಸಿಮ್ರಾನ್, ರಾಜವೀರ್ ಸಲೂಜಾ ಸೇರಿದಂತೆ ನಾಲ್ವರು ಇದ್ದರು. ಅವರು ಖಪಡವಾಡ ತಲುಪಿದಾಗ ಅವರ ಕಾರು ಕಬ್ಬಿಣವನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ, ನಂತರ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು

ಸ್ಥಳಕ್ಕಾಗಮಿಸಿ ಕಾರಿನಿಂದ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಷ್ಟರಲ್ಲಿ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us