AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhattisgarh Road Accident: ಛತ್ತೀಸ್​ಗಢದಲ್ಲಿ ಭೀಕರ ರಸ್ತೆ ಅಪಘಾತ, ಇಬ್ಬರು ಮಕ್ಕಳು ಸೇರಿ 11 ಮಂದಿ ಸಾವು, 10ಕ್ಕೂ ಅಧಿಕ ಜನರಿಗೆ ಗಾಯ

ಛತ್ತೀಸ್​ಗಢದಲ್ಲಿ ಪಿಕಪ್​ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿ, ಇಬ್ಬರು ಮಕ್ಕಳು ಸೇರಿ 11 ಮಂದಿ ಮೃತಪಟ್ಟಿದ್ದು, 10ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

Chhattisgarh Road Accident: ಛತ್ತೀಸ್​ಗಢದಲ್ಲಿ ಭೀಕರ ರಸ್ತೆ ಅಪಘಾತ, ಇಬ್ಬರು ಮಕ್ಕಳು ಸೇರಿ 11 ಮಂದಿ ಸಾವು, 10ಕ್ಕೂ ಅಧಿಕ ಜನರಿಗೆ ಗಾಯ
ಅಪಘಾತ
ನಯನಾ ರಾಜೀವ್
|

Updated on: Feb 24, 2023 | 9:02 AM

Share

ಛತ್ತೀಸ್​ಗಢದಲ್ಲಿ ಪಿಕಪ್​ ಹಾಗೂ ಟ್ರಕ್ ನಡುವೆ ಅಪಘಾತ ಸಂಭವಿಸಿ, ಇಬ್ಬರು ಮಕ್ಕಳು ಸೇರಿ 11 ಮಂದಿ ಮೃತಪಟ್ಟಿದ್ದು, 10ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಭಟಪರದ ಎಸ್‌ಡಿಒಪಿ ಸಿದ್ಧಾರ್ಥ್ ಬಾಘೇಲ್ ಈ ಮಾಹಿತಿ ನೀಡಿದ್ದಾರೆ. ಬಲೋದಬಜಾರ್-ಭಟಪರಾ ರಸ್ತೆಯ ಭಟಪರಾ ಪೊಲೀಸ್ ಠಾಣೆ ವ್ಯಾಪ್ತಿಯ ಖಮಾರಿಯಾ ಗ್ರಾಮದ ಬಳಿ ಗುರುವಾರ ತಡರಾತ್ರಿ ಸಂಭವಿಸಿದ ಅಪಘಾತದಲ್ಲಿ ಹನ್ನೆರಡು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಮ್ಗಾ ಪ್ರದೇಶದ ಖಿಲೋರಾ ಗ್ರಾಮದ ನಿವಾಸಿಗಳಾದ ಸಂತ್ರಸ್ತರು ಅರ್ಜುನಿ ಪ್ರದೇಶದಲ್ಲಿ ನಡೆದ ಕುಟುಂಬ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ಓದಿ:ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ. ಮೃತರೆಲ್ಲರೂ ಸಂಬಂಧಿಕರು ಎನ್ನಲಾಗಿದೆ. ಮಾಹಿತಿಯ ಪ್ರಕಾರ, ಬಲೋಡಾಬಜಾರ್‌ನ ಅರ್ಜುನಿ ಪ್ರದೇಶದಲ್ಲಿ ಗುರುವಾರ ತಡರಾತ್ರಿ ವೇಗವಾಗಿ ಬಂದ ಟ್ರಕ್ ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದು ನೋವಿನ ಅಪಘಾತ ಸಂಭವಿಸಿದೆ. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ 11 ಮಂದಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಮಾಹಿತಿ ಪಡೆದು ಸ್ಥಳಕ್ಕೆ ಪೊಲೀಸ್ ತಂಡವನ್ನು ಕಳುಹಿಸಲಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್