AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Vaccine: ಕೋವ್ಯಾಕ್ಸಿನ್ ಲಸಿಕೆ ಸುರಕ್ಷಿತ: ಛತ್ತೀಸ್​ಗಡ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಪ್ರತಿಕ್ರಿಯೆ

Coronavirus Vaccine: ಛತ್ತೀಸ್​ಗಡ ಆರೋಗ್ಯ ಸಚಿವ ಟಿಎಸ್ ಸಿಂಗ್ ದಿಯೊ ಅವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಕೋವ್ಯಾಕ್ಸಿನ್ ಸುರಕ್ಷಿತ ಮತ್ತು ಬಳಕೆಗೆ ಯೋಗ್ಯ ಎಂದಿದ್ದಾರೆ.

Covid 19 Vaccine: ಕೋವ್ಯಾಕ್ಸಿನ್ ಲಸಿಕೆ ಸುರಕ್ಷಿತ: ಛತ್ತೀಸ್​ಗಡ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಪ್ರತಿಕ್ರಿಯೆ
ಡಾ.ಹರ್ಷವರ್ಧನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Feb 12, 2021 | 11:38 AM

Share

ನವದೆಹಲಿ: ಭಾರತ್ ಬಯೋಟೆಕ್ ಅಭಿವೃದ್ಧಿ ಪಡಿಸಿದ ಕೋವ್ಯಾಕ್ಸಿನ್ ಲಸಿಕೆ ಸುರಕ್ಷಿತ ಮತ್ತು ರೋಗ ನಿರೋಧಕ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ಕೋವ್ಯಾಕ್ಸಿನ್ ಲಸಿಕೆ ವಿತರಣೆ ನಿಲ್ಲಿಸಬೇಕು ಎಂದು ಛತ್ತೀಸ್​ಗಡ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ ಹರ್ಷವರ್ಧನ್, ಕೋವಾಕ್ಸಿನ್ ವೈದ್ಯಕೀಯ ಪ್ರಯೋಗ ಪೂರ್ಣಗೊಳಿಸಿದೆ ಎಂದಿದ್ದಾರೆ.

ಕೋವ್ಯಾಕ್ಸಿನ್ ಇನ್ನೂ ಮೂರನೇ ಹಂತದ ವೈದ್ಯಕೀಯ ಪ್ರಯೋಗ ಪೂರ್ಣಗೊಳಿಸಿಲ್ಲ. ಲಸಿಕೆಯ ಅವಧಿ ಎಷ್ಟು ಎಂಬುದರ ಬಗ್ಗೆ ಕೂಡಾ ಮಾಹಿತಿ ಇಲ್ಲ. ಈ ಬಗ್ಗೆ ಆರೋಗ್ಯ ಇಲಾಖೆ ಸಮರ್ಪಕ ಉತ್ತರ ನೀಡುವವರೆಗೆ ಛತ್ತೀಸ್​ಗಡದಲ್ಲಿ ಕೋವ್ಯಾಕ್ಸಿನ್ ವಿತರಣೆ ರದ್ದು ಮಾಡಬೇಕು ಎಂದು ಛತ್ತೀಸ್​ಗಡ ಆರೋಗ್ಯ ಸಚಿವ ಟಿಎಸ್ ಸಿಂಗ್ ದಿಯೊ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಪ್ರತಿಕ್ರಿಯಿಸಿರುವ ಹರ್ಷವರ್ಧನ್, ಕೋವ್ಯಾಕ್ಸಿನ್ ಸುರಕ್ಷಿತ ಮತ್ತು ಬಳಕೆಗೆ ಯೋಗ್ಯ ಎಂದಿದ್ದಾರೆ.

ಇದನ್ನೂ ಓದಿ:  ಭಾರತ್​ ಬಯೋಟೆಕ್​ ಲಸಿಕೆ ಸ್ವೀಕರಿಸಲ್ಲ ಎಂದು ಪಟ್ಟು ಹಿಡಿದು ಕೂತ ಕಾಂಗ್ರೆಸ್ ಆಡಳಿತ ರಾಜ್ಯಗಳು!

ಹರ್ಷವರ್ಧನ್ ಅವರ ಪ್ರತಿಕ್ರಿಯೆ ದೇಶದಲ್ಲಿ ಕೋವಿಡ್ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಅಭಿವೃದ್ಧಿ ಪಡಿಸಿರುವ ಈ ಹೊಸ ಲಸಿಕೆ ವೈದ್ಯಕೀಯ ಪ್ರಯೋಗ ಪೂರ್ಣಗೊಳಿಸಿದೆ. ರಾಷ್ಟ್ರೀಯ ನಿಯಂತ್ರಣ ಪ್ರಾಧಿಕಾರವು ಪೂರ್ವ ವೈದ್ಯಕೀಯ ಪ್ರಯೋಗ ಮತ್ತು ವೈದ್ಯಕೀಯ ಪ್ರಯೋಗದ ಮೌಲ್ಯ ಮಾಪನ ಮಾಡಿದ ನಂತರವೇ ಔಷಧಿ ಉತ್ಪಾದಕರಿಗೆ ಅನುಮತಿ ನೀಡಿದೆ.

ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಬಳಕೆಗೆ ಅನುಮತಿ ಲಭಿಸಿದ್ದು ಇವೆರಡೂ ರೋಗ ನಿರೋಧಕ ಮತ್ತು ಸುರಕ್ಷಿತವಾಗಿವೆ. ಕೋವ್ಯಾಕ್ಸಿನ್ ಬಳಕೆಯ ಅವಧಿಯ ಮಾಹಿತಿ ಲಸಿಕೆಯ ಬಾಟಲಿ ಮೇಲೆ ಬರೆದಿದೆ ಎಂದು ಹರ್ಷವರ್ಧನ್ ಉತ್ತರಿಸಿದ್ದಾರೆ.

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!