AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Vaccine: ಕೋವ್ಯಾಕ್ಸಿನ್ ಲಸಿಕೆ ಸುರಕ್ಷಿತ: ಛತ್ತೀಸ್​ಗಡ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಪ್ರತಿಕ್ರಿಯೆ

Coronavirus Vaccine: ಛತ್ತೀಸ್​ಗಡ ಆರೋಗ್ಯ ಸಚಿವ ಟಿಎಸ್ ಸಿಂಗ್ ದಿಯೊ ಅವರ ಪತ್ರಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ಕೋವ್ಯಾಕ್ಸಿನ್ ಸುರಕ್ಷಿತ ಮತ್ತು ಬಳಕೆಗೆ ಯೋಗ್ಯ ಎಂದಿದ್ದಾರೆ.

Covid 19 Vaccine: ಕೋವ್ಯಾಕ್ಸಿನ್ ಲಸಿಕೆ ಸುರಕ್ಷಿತ: ಛತ್ತೀಸ್​ಗಡ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಪ್ರತಿಕ್ರಿಯೆ
ಡಾ.ಹರ್ಷವರ್ಧನ್
ರಶ್ಮಿ ಕಲ್ಲಕಟ್ಟ
|

Updated on: Feb 12, 2021 | 11:38 AM

Share

ನವದೆಹಲಿ: ಭಾರತ್ ಬಯೋಟೆಕ್ ಅಭಿವೃದ್ಧಿ ಪಡಿಸಿದ ಕೋವ್ಯಾಕ್ಸಿನ್ ಲಸಿಕೆ ಸುರಕ್ಷಿತ ಮತ್ತು ರೋಗ ನಿರೋಧಕ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಹೇಳಿದ್ದಾರೆ. ಕೋವ್ಯಾಕ್ಸಿನ್ ಲಸಿಕೆ ವಿತರಣೆ ನಿಲ್ಲಿಸಬೇಕು ಎಂದು ಛತ್ತೀಸ್​ಗಡ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ ಹರ್ಷವರ್ಧನ್, ಕೋವಾಕ್ಸಿನ್ ವೈದ್ಯಕೀಯ ಪ್ರಯೋಗ ಪೂರ್ಣಗೊಳಿಸಿದೆ ಎಂದಿದ್ದಾರೆ.

ಕೋವ್ಯಾಕ್ಸಿನ್ ಇನ್ನೂ ಮೂರನೇ ಹಂತದ ವೈದ್ಯಕೀಯ ಪ್ರಯೋಗ ಪೂರ್ಣಗೊಳಿಸಿಲ್ಲ. ಲಸಿಕೆಯ ಅವಧಿ ಎಷ್ಟು ಎಂಬುದರ ಬಗ್ಗೆ ಕೂಡಾ ಮಾಹಿತಿ ಇಲ್ಲ. ಈ ಬಗ್ಗೆ ಆರೋಗ್ಯ ಇಲಾಖೆ ಸಮರ್ಪಕ ಉತ್ತರ ನೀಡುವವರೆಗೆ ಛತ್ತೀಸ್​ಗಡದಲ್ಲಿ ಕೋವ್ಯಾಕ್ಸಿನ್ ವಿತರಣೆ ರದ್ದು ಮಾಡಬೇಕು ಎಂದು ಛತ್ತೀಸ್​ಗಡ ಆರೋಗ್ಯ ಸಚಿವ ಟಿಎಸ್ ಸಿಂಗ್ ದಿಯೊ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದರು. ಈ ಪತ್ರಕ್ಕೆ ಪ್ರತಿಕ್ರಿಯಿಸಿರುವ ಹರ್ಷವರ್ಧನ್, ಕೋವ್ಯಾಕ್ಸಿನ್ ಸುರಕ್ಷಿತ ಮತ್ತು ಬಳಕೆಗೆ ಯೋಗ್ಯ ಎಂದಿದ್ದಾರೆ.

ಇದನ್ನೂ ಓದಿ:  ಭಾರತ್​ ಬಯೋಟೆಕ್​ ಲಸಿಕೆ ಸ್ವೀಕರಿಸಲ್ಲ ಎಂದು ಪಟ್ಟು ಹಿಡಿದು ಕೂತ ಕಾಂಗ್ರೆಸ್ ಆಡಳಿತ ರಾಜ್ಯಗಳು!

ಹರ್ಷವರ್ಧನ್ ಅವರ ಪ್ರತಿಕ್ರಿಯೆ ದೇಶದಲ್ಲಿ ಕೋವಿಡ್ ಸಾಂಕ್ರಾಮಿಕದ ವಿರುದ್ಧ ಹೋರಾಡಲು ಅಭಿವೃದ್ಧಿ ಪಡಿಸಿರುವ ಈ ಹೊಸ ಲಸಿಕೆ ವೈದ್ಯಕೀಯ ಪ್ರಯೋಗ ಪೂರ್ಣಗೊಳಿಸಿದೆ. ರಾಷ್ಟ್ರೀಯ ನಿಯಂತ್ರಣ ಪ್ರಾಧಿಕಾರವು ಪೂರ್ವ ವೈದ್ಯಕೀಯ ಪ್ರಯೋಗ ಮತ್ತು ವೈದ್ಯಕೀಯ ಪ್ರಯೋಗದ ಮೌಲ್ಯ ಮಾಪನ ಮಾಡಿದ ನಂತರವೇ ಔಷಧಿ ಉತ್ಪಾದಕರಿಗೆ ಅನುಮತಿ ನೀಡಿದೆ.

ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಬಳಕೆಗೆ ಅನುಮತಿ ಲಭಿಸಿದ್ದು ಇವೆರಡೂ ರೋಗ ನಿರೋಧಕ ಮತ್ತು ಸುರಕ್ಷಿತವಾಗಿವೆ. ಕೋವ್ಯಾಕ್ಸಿನ್ ಬಳಕೆಯ ಅವಧಿಯ ಮಾಹಿತಿ ಲಸಿಕೆಯ ಬಾಟಲಿ ಮೇಲೆ ಬರೆದಿದೆ ಎಂದು ಹರ್ಷವರ್ಧನ್ ಉತ್ತರಿಸಿದ್ದಾರೆ.

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ