AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡನೋಡುತ್ತಿದ್ದಂತೆ ಕಾರಿನಡಿ ಸಿಲುಕಿದ ಬಿಜೆಪಿ ನಾಯಕನ 6 ವರ್ಷದ ಮಗ

ಛತ್ತೀಸ್‌ಗಢದ ಬಿಜೆಪಿ ನಾಯಕನ 6 ವರ್ಷದ ಮಗ ಅಂಬಿಕಾಪುರದಲ್ಲಿ ತನ್ನ ಚಿಕ್ಕಮ್ಮನ ಮನೆಯ ಹೊರಗೆ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಕಾರಿನಡಿ ಸಿಲುಕಿ ನಜ್ಜುಗುಜ್ಜಾಗಿ ಸಾವನ್ನಪ್ಪಿದ್ದಾನೆ. ಈ ಘಟನೆಯ ನಂತರ ಕಾಲೋನಿಯ ಜನರು ಮತ್ತು ಬಿಜೆಪಿ ನಾಯಕನ ಕುಟುಂಬಸ್ಥರು ಕಾರಿನ ಚಾಲಕನನ್ನು ಹಿಡಿದು ಥಳಿಸಿದ್ದಾರೆ.

ನೋಡನೋಡುತ್ತಿದ್ದಂತೆ ಕಾರಿನಡಿ ಸಿಲುಕಿದ ಬಿಜೆಪಿ ನಾಯಕನ 6 ವರ್ಷದ ಮಗ
ಕಾರಿನಡಿ ಸಿಲುಕಿದ ಬಿಜೆಪಿ ನಾಯಕನ 6 ವರ್ಷದ ಮಗ
ಸುಷ್ಮಾ ಚಕ್ರೆ
|

Updated on: Oct 18, 2024 | 5:12 PM

Share

ನವದೆಹಲಿ: ಛತ್ತೀಸ್‌ಗಢದ ಬಿಜೆಪಿ ನಾಯಕ ಧೀರಜ್ ಸಿಂಗ್ ದೇವ್ ಅವರ 6 ವರ್ಷದ ಮಗ ಮಂಗಳವಾರ ರಾತ್ರಿ ಅಂಬಿಕಾಪುರದಲ್ಲಿರುವ ತನ್ನ ಚಿಕ್ಕಮ್ಮನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಕಾರಿನಡಿ ಸಿಲುಕಿ ಸಾವನ್ನಪ್ಪಿದ್ದಾನೆ. ಈ ಘಟನೆಯ ನಂತರ, ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆ ಮಗು ಚಿಕಿತ್ಸೆ ವೇಳೆ ಸಾವನ್ನಪ್ಪಿದೆ.

ಈ ಘಟನೆ ಮನೆಯ ಸಮೀಪದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 6 ವರ್ಷದ ಹುಡುಗ ಬೇರೆ ಮಕ್ಕಳು ಮತ್ತು ಮಹಿಳೆಯೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿರುವುದನ್ನು ಕಾಣಬಹುದು. ಆಗ ಆ ಬಾಲಕ ರಸ್ತೆಯ ಮಧ್ಯ ಕುಳಿತು ಏನೋ ಮಾಡುತ್ತಿದ್ದ. ಆಗ ಹಿಂದಿನಿಂದ ಬಂದ ಒಂದು ಕಾರು ತಿರುವಿನಲ್ಲಿ ಕುಳಿತಿದ್ದ ಮಗುವಿನ ಮೇಲೆ ಹರಿದಿದೆ. ಇದರಿಂದ ಆ ಬಾಲಕ ಕಾರಿನಡಿ ಸಿಲುಕಿ ಗಾಯಗೊಂಡಿದ್ದಾನೆ.

ಇದನ್ನೂ ಓದಿ: ಓವರ್‌ಟೇಕ್ ಮಾಡಿದ್ದಕ್ಕೆ ಯುವಕನಿಗೆ ಹೊಡೆದು ಕೊಲೆ; ಮಗನ ಮೇಲೆ ಮಲಗಿ ಬೇಡಿಕೊಂಡ ಅಮ್ಮ!

ವರದಿಗಳ ಪ್ರಕಾರ, ಈ ಘಟನೆಯ ನಂತರ ಕಾಲೋನಿಯ ಜನರು ಮತ್ತು ಬಿಜೆಪಿ ನಾಯಕನ ಸೋದರ ಮಾವ ಅಭಿಷೇಕ್ ಸಿಂಗ್ ಆರೋಪಿ ಚಾಲಕನನ್ನು ಹಿಡಿದು ಕೆಟ್ಟದಾಗಿ ಥಳಿಸಿದ್ದಾರೆ. ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಲಾಯಿತು. ಈ ನಡುವೆ ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಾತಕದ ಪ್ರಕಾರ ಸಿಹಿ ಹಾಗೂ ಖಾರ ಹೇಗೆ ಸೇವಿಸಬೇಕು?
ಜಾತಕದ ಪ್ರಕಾರ ಸಿಹಿ ಹಾಗೂ ಖಾರ ಹೇಗೆ ಸೇವಿಸಬೇಕು?
ಇಂದು ಈ ರಾಶಿಯವರಿಗೆ ದೂರದ ಪ್ರಯಾಣ ಯೋಗ
ಇಂದು ಈ ರಾಶಿಯವರಿಗೆ ದೂರದ ಪ್ರಯಾಣ ಯೋಗ
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್