AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡನೋಡುತ್ತಿದ್ದಂತೆ ಕಾರಿನಡಿ ಸಿಲುಕಿದ ಬಿಜೆಪಿ ನಾಯಕನ 6 ವರ್ಷದ ಮಗ

ಛತ್ತೀಸ್‌ಗಢದ ಬಿಜೆಪಿ ನಾಯಕನ 6 ವರ್ಷದ ಮಗ ಅಂಬಿಕಾಪುರದಲ್ಲಿ ತನ್ನ ಚಿಕ್ಕಮ್ಮನ ಮನೆಯ ಹೊರಗೆ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಕಾರಿನಡಿ ಸಿಲುಕಿ ನಜ್ಜುಗುಜ್ಜಾಗಿ ಸಾವನ್ನಪ್ಪಿದ್ದಾನೆ. ಈ ಘಟನೆಯ ನಂತರ ಕಾಲೋನಿಯ ಜನರು ಮತ್ತು ಬಿಜೆಪಿ ನಾಯಕನ ಕುಟುಂಬಸ್ಥರು ಕಾರಿನ ಚಾಲಕನನ್ನು ಹಿಡಿದು ಥಳಿಸಿದ್ದಾರೆ.

ನೋಡನೋಡುತ್ತಿದ್ದಂತೆ ಕಾರಿನಡಿ ಸಿಲುಕಿದ ಬಿಜೆಪಿ ನಾಯಕನ 6 ವರ್ಷದ ಮಗ
ಕಾರಿನಡಿ ಸಿಲುಕಿದ ಬಿಜೆಪಿ ನಾಯಕನ 6 ವರ್ಷದ ಮಗ
ಸುಷ್ಮಾ ಚಕ್ರೆ
|

Updated on: Oct 18, 2024 | 5:12 PM

Share

ನವದೆಹಲಿ: ಛತ್ತೀಸ್‌ಗಢದ ಬಿಜೆಪಿ ನಾಯಕ ಧೀರಜ್ ಸಿಂಗ್ ದೇವ್ ಅವರ 6 ವರ್ಷದ ಮಗ ಮಂಗಳವಾರ ರಾತ್ರಿ ಅಂಬಿಕಾಪುರದಲ್ಲಿರುವ ತನ್ನ ಚಿಕ್ಕಮ್ಮನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಕಾರಿನಡಿ ಸಿಲುಕಿ ಸಾವನ್ನಪ್ಪಿದ್ದಾನೆ. ಈ ಘಟನೆಯ ನಂತರ, ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆ ಮಗು ಚಿಕಿತ್ಸೆ ವೇಳೆ ಸಾವನ್ನಪ್ಪಿದೆ.

ಈ ಘಟನೆ ಮನೆಯ ಸಮೀಪದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 6 ವರ್ಷದ ಹುಡುಗ ಬೇರೆ ಮಕ್ಕಳು ಮತ್ತು ಮಹಿಳೆಯೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿರುವುದನ್ನು ಕಾಣಬಹುದು. ಆಗ ಆ ಬಾಲಕ ರಸ್ತೆಯ ಮಧ್ಯ ಕುಳಿತು ಏನೋ ಮಾಡುತ್ತಿದ್ದ. ಆಗ ಹಿಂದಿನಿಂದ ಬಂದ ಒಂದು ಕಾರು ತಿರುವಿನಲ್ಲಿ ಕುಳಿತಿದ್ದ ಮಗುವಿನ ಮೇಲೆ ಹರಿದಿದೆ. ಇದರಿಂದ ಆ ಬಾಲಕ ಕಾರಿನಡಿ ಸಿಲುಕಿ ಗಾಯಗೊಂಡಿದ್ದಾನೆ.

ಇದನ್ನೂ ಓದಿ: ಓವರ್‌ಟೇಕ್ ಮಾಡಿದ್ದಕ್ಕೆ ಯುವಕನಿಗೆ ಹೊಡೆದು ಕೊಲೆ; ಮಗನ ಮೇಲೆ ಮಲಗಿ ಬೇಡಿಕೊಂಡ ಅಮ್ಮ!

ವರದಿಗಳ ಪ್ರಕಾರ, ಈ ಘಟನೆಯ ನಂತರ ಕಾಲೋನಿಯ ಜನರು ಮತ್ತು ಬಿಜೆಪಿ ನಾಯಕನ ಸೋದರ ಮಾವ ಅಭಿಷೇಕ್ ಸಿಂಗ್ ಆರೋಪಿ ಚಾಲಕನನ್ನು ಹಿಡಿದು ಕೆಟ್ಟದಾಗಿ ಥಳಿಸಿದ್ದಾರೆ. ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಲಾಯಿತು. ಈ ನಡುವೆ ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
24 ಗಂಟೆಗಳಿಂದ ಕೆಸರಿನಲ್ಲಿ ಸಿಲುಕಿ ನರಳಾಡುತ್ತಿರುವ ಕಾಡಾನೆ
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ಬೆಳಗಾವಿಯಲ್ಲಿ RSS ವಾರ್ಷಿಕ ಸಭೆ ಬಗ್ಗೆ ಪ್ರಿಯಾಂಕ್ ಖರ್ಗೆ ಖಡಕ್ ಮಾತು
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಭೂಕುಸಿತದ ಬಗ್ಗೆ ಡಿಸಿ ಮೇಘಶ್ರೀ ಮಾಹಿತಿ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ
ವಯನಾಡು ಗುಡ್ಡ ಕುಸಿತ ದುರಂತದ ಬಗ್ಗೆ ಮಾಹಿತಿ ಬಿಚ್ಚಿಟ್ಟ ಹೊಟೇಲ್ ಮಾಲೀಕ