AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೋಡನೋಡುತ್ತಿದ್ದಂತೆ ಕಾರಿನಡಿ ಸಿಲುಕಿದ ಬಿಜೆಪಿ ನಾಯಕನ 6 ವರ್ಷದ ಮಗ

ಛತ್ತೀಸ್‌ಗಢದ ಬಿಜೆಪಿ ನಾಯಕನ 6 ವರ್ಷದ ಮಗ ಅಂಬಿಕಾಪುರದಲ್ಲಿ ತನ್ನ ಚಿಕ್ಕಮ್ಮನ ಮನೆಯ ಹೊರಗೆ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಕಾರಿನಡಿ ಸಿಲುಕಿ ನಜ್ಜುಗುಜ್ಜಾಗಿ ಸಾವನ್ನಪ್ಪಿದ್ದಾನೆ. ಈ ಘಟನೆಯ ನಂತರ ಕಾಲೋನಿಯ ಜನರು ಮತ್ತು ಬಿಜೆಪಿ ನಾಯಕನ ಕುಟುಂಬಸ್ಥರು ಕಾರಿನ ಚಾಲಕನನ್ನು ಹಿಡಿದು ಥಳಿಸಿದ್ದಾರೆ.

ನೋಡನೋಡುತ್ತಿದ್ದಂತೆ ಕಾರಿನಡಿ ಸಿಲುಕಿದ ಬಿಜೆಪಿ ನಾಯಕನ 6 ವರ್ಷದ ಮಗ
ಕಾರಿನಡಿ ಸಿಲುಕಿದ ಬಿಜೆಪಿ ನಾಯಕನ 6 ವರ್ಷದ ಮಗ
ಸುಷ್ಮಾ ಚಕ್ರೆ
|

Updated on: Oct 18, 2024 | 5:12 PM

Share

ನವದೆಹಲಿ: ಛತ್ತೀಸ್‌ಗಢದ ಬಿಜೆಪಿ ನಾಯಕ ಧೀರಜ್ ಸಿಂಗ್ ದೇವ್ ಅವರ 6 ವರ್ಷದ ಮಗ ಮಂಗಳವಾರ ರಾತ್ರಿ ಅಂಬಿಕಾಪುರದಲ್ಲಿರುವ ತನ್ನ ಚಿಕ್ಕಮ್ಮನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಕಾರಿನಡಿ ಸಿಲುಕಿ ಸಾವನ್ನಪ್ಪಿದ್ದಾನೆ. ಈ ಘಟನೆಯ ನಂತರ, ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆ ಮಗು ಚಿಕಿತ್ಸೆ ವೇಳೆ ಸಾವನ್ನಪ್ಪಿದೆ.

ಈ ಘಟನೆ ಮನೆಯ ಸಮೀಪದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 6 ವರ್ಷದ ಹುಡುಗ ಬೇರೆ ಮಕ್ಕಳು ಮತ್ತು ಮಹಿಳೆಯೊಂದಿಗೆ ಬ್ಯಾಡ್ಮಿಂಟನ್ ಆಡುತ್ತಿರುವುದನ್ನು ಕಾಣಬಹುದು. ಆಗ ಆ ಬಾಲಕ ರಸ್ತೆಯ ಮಧ್ಯ ಕುಳಿತು ಏನೋ ಮಾಡುತ್ತಿದ್ದ. ಆಗ ಹಿಂದಿನಿಂದ ಬಂದ ಒಂದು ಕಾರು ತಿರುವಿನಲ್ಲಿ ಕುಳಿತಿದ್ದ ಮಗುವಿನ ಮೇಲೆ ಹರಿದಿದೆ. ಇದರಿಂದ ಆ ಬಾಲಕ ಕಾರಿನಡಿ ಸಿಲುಕಿ ಗಾಯಗೊಂಡಿದ್ದಾನೆ.

ಇದನ್ನೂ ಓದಿ: ಓವರ್‌ಟೇಕ್ ಮಾಡಿದ್ದಕ್ಕೆ ಯುವಕನಿಗೆ ಹೊಡೆದು ಕೊಲೆ; ಮಗನ ಮೇಲೆ ಮಲಗಿ ಬೇಡಿಕೊಂಡ ಅಮ್ಮ!

ವರದಿಗಳ ಪ್ರಕಾರ, ಈ ಘಟನೆಯ ನಂತರ ಕಾಲೋನಿಯ ಜನರು ಮತ್ತು ಬಿಜೆಪಿ ನಾಯಕನ ಸೋದರ ಮಾವ ಅಭಿಷೇಕ್ ಸಿಂಗ್ ಆರೋಪಿ ಚಾಲಕನನ್ನು ಹಿಡಿದು ಕೆಟ್ಟದಾಗಿ ಥಳಿಸಿದ್ದಾರೆ. ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಲಾಯಿತು. ಈ ನಡುವೆ ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್