AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhattisgarh: ಮಾವೋವಾದಿಗಳಿಂದ ಐಇಡಿ ಸ್ಫೋಟ, ಓರ್ವ ಚಾಲಕ ಸೇರಿ, 10 ಪೊಲೀಸರು ಸಾವು

ಛತ್ತೀಸ್‌ಗಢದ ದಾಂತೇವಾಡದಲ್ಲಿ ಮಾವೋವಾದಿಗಳು ನಡೆಸಿದ ಬಾಂಬ್​​ ದಾಳಿಯಲ್ಲಿ 10 ಪೊಲೀಸ್ ಸಿಬ್ಬಂದಿ, ಸೇರಿ ಒಬ್ಬ ಚಾಲಕ ಬಲಿಯಾಗಿದ್ದಾರೆ.

Chhattisgarh: ಮಾವೋವಾದಿಗಳಿಂದ ಐಇಡಿ ಸ್ಫೋಟ, ಓರ್ವ ಚಾಲಕ ಸೇರಿ, 10 ಪೊಲೀಸರು ಸಾವು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Apr 26, 2023 | 3:53 PM

Share

ದಾಂತೇವಾಡ: ಛತ್ತೀಸ್‌ಗಢದ (Chhattisgarh) ದಾಂತೇವಾಡದಲ್ಲಿ ಮಾವೋವಾದಿಗಳು ನಡೆಸಿದ  ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟಯಲ್ಲಿ 10 ಪೊಲೀಸ್,  ಒಬ್ಬ ಚಾಲಕ ಬಲಿಯಾಗಿದ್ದಾರೆ. ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯಲ್ಲಿ ಪೊಲೀಸರು ಪ್ರಯಾಣಿಸುತ್ತಿದ್ದಾಗ ಸುಧಾರಿತ ಸ್ಫೋಟಕ ಸಾಧನ (ಐಇಡಿ)ದಿಂದ ಅವರ ವಾಹನವನ್ನು ಸ್ಫೋಟಗೊಳಿಸಿದ್ದಾರೆ. ಈ ಸ್ಫೋಟದಿಂದ ಹತ್ತು ಪೊಲೀಸರು ಮತ್ತು ಒಬ್ಬ ಚಾಲಕ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಪ್ತಚರ ಇಲಾಖೆಯ ಮಾಹಿತಿಯ ಪ್ರಕಾರ ಮಾವೋವಾದಿ ವಿರುದ್ಧ ಕಾರ್ಯಾಚರಣೆ ನಡೆಸಿ ಪೊಲೀಸರು ಹಿಂತಿರುಗುತ್ತಿದ್ದಾಗ ಈ ದಾಳಿ ನಡೆದಿದೆ ಎಂದು ಹೇಳಿದ್ದಾರೆ. ಈ ಪೊಲೀಸರು ಜಿಲ್ಲಾ ಮೀಸಲು ಗಾರ್ಡ್ (DRG)ನಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ಹೇಳಲಾಗಿದೆ. ಛತ್ತೀಸ್‌ಗಢ ಪೋಲಿಸ್‌ನ ವಿಶೇಷ ಪಡೆಯಾಗಿದ್ದು, ಇದು ಮಾವೋವಾದಿಗಳನ್ನು ಎದುರಿಸಲು ವಿಶೇಷ ತರಬೇತಿಯನ್ನು ಪಡೆದುಕೊಂಡಿದೆ. ಈ ಕಾರ್ಯಚರಣೆಯಲ್ಲಿ ಸ್ಥಳೀಯ ಬುಡಕಟ್ಟು ಜನಾಂಗದವರನ್ನು ಕೂಡ ಬಳಸಿಕೊಳ್ಳುತ್ತಾರೆ.

ಎಡಪಂಥೀಯ ಉಗ್ರವಾದದ ಕೇಂದ್ರವಾದ ಬಸ್ತಾರ್‌ನಲ್ಲಿ ಬಂಡುಕೋರರ ವಿರುದ್ಧದ ಹಲವಾರು ಯಶಸ್ವಿ ಕಾರ್ಯಾಚರಣೆಗಳಲ್ಲಿ DRG ಪ್ರಮುಖ ಪಾತ್ರ ವಹಿಸಿದೆ. ದಾಳಿಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ಹೇಳಲಾಗಿದೆ.

ದಂತೇವಾಡದ ಅರನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾವೋವಾದಿ ಕೇಡರ್​​ಗೆ ಇರುವ ಮಾಹಿತಿ ಮೇರೆಗೆ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಆಗಮಿಸಿದ್ದ ಡಿಆರ್‌ಜಿ ಪಡೆಯ ಮೇಲೆ ಐಇಡಿ ಸ್ಫೋಟಗೊಂಡು ನಮ್ಮ 10 ಡಿಆರ್‌ಜಿ ಜವಾನರು ಮತ್ತು ಚಾಲಕ ಹುತಾತ್ಮರಾದ ಸುದ್ದಿ ತುಂಬಾ ದುಃಖಕರವಾಗಿದೆ. ಅವರ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ನೀಡಲಿ ಎಂದು ಬಾಘೆಲ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Chhattisgarh Accident: ಛತ್ತೀಸ್‌ಗಢದಲ್ಲಿ ಕಾರಿಗೆ ಕಬ್ಬಿಣ ತುಂಬಿದ ಟ್ರಕ್ ಡಿಕ್ಕಿ: 4 ಮಂದಿ ಸಾವು

ನಕ್ಸಲರೆಂದು ಕರೆಯಲ್ಪಡುವ ಮಾವೋವಾದಿಗಳು ಆರು ದಶಕಗಳಿಂದ ನೂರಾರು ಜನರನ್ನು ಕೊಂದ ಸರ್ಕಾರದ ವಿರುದ್ಧ ಸಶಸ್ತ್ರ ಬಂಡಾಯವನ್ನು ನಡೆಸಿದ್ದಾರೆ. ದೇಶದ ಆರ್ಥಿಕ ಉತ್ಕರ್ಷದಿಂದ ಹೊರಗುಳಿದಿರುವ ಬಡವರ ಪರವಾಗಿ ಅವರು ಹೋರಾಡುತ್ತಿದ್ದಾರೆ ಎಂದು ಮಾವೋವಾದಿಗಳು ಹೇಳುತ್ತಾರೆ.

1967ರಿಂದ ದೇಶದ ಆಂತರಿಕ ಭದ್ರತೆಗೆ ಮಾವೋವಾದಿಗಳು ದೊಡ್ಡ ಸಮಸಸ್ಯೆಯಾಗಿದೆ. ಈ ಮಾವೋವಾದಿಗಳು ದಟ್ಟವಾದ ಕಾಡುಗಳಲ್ಲಿ ವಾಸವಾಗಿದ್ದು, ಭಾರತೀಯ ಆಡಳಿತ ಮತ್ತು ಪಡೆಗಳ ವಿರುದ್ಧ ಅವರ ಕಾರ್ಯಾಚರಣೆ ನಡೆಸುತ್ತಾರೆ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:27 pm, Wed, 26 April 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ