AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhattisgarh: ಮಾವೋವಾದಿಗಳಿಂದ ಐಇಡಿ ಸ್ಫೋಟ, ಓರ್ವ ಚಾಲಕ ಸೇರಿ, 10 ಪೊಲೀಸರು ಸಾವು

ಛತ್ತೀಸ್‌ಗಢದ ದಾಂತೇವಾಡದಲ್ಲಿ ಮಾವೋವಾದಿಗಳು ನಡೆಸಿದ ಬಾಂಬ್​​ ದಾಳಿಯಲ್ಲಿ 10 ಪೊಲೀಸ್ ಸಿಬ್ಬಂದಿ, ಸೇರಿ ಒಬ್ಬ ಚಾಲಕ ಬಲಿಯಾಗಿದ್ದಾರೆ.

Chhattisgarh: ಮಾವೋವಾದಿಗಳಿಂದ ಐಇಡಿ ಸ್ಫೋಟ, ಓರ್ವ ಚಾಲಕ ಸೇರಿ, 10 ಪೊಲೀಸರು ಸಾವು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Apr 26, 2023 | 3:53 PM

Share

ದಾಂತೇವಾಡ: ಛತ್ತೀಸ್‌ಗಢದ (Chhattisgarh) ದಾಂತೇವಾಡದಲ್ಲಿ ಮಾವೋವಾದಿಗಳು ನಡೆಸಿದ  ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟಯಲ್ಲಿ 10 ಪೊಲೀಸ್,  ಒಬ್ಬ ಚಾಲಕ ಬಲಿಯಾಗಿದ್ದಾರೆ. ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯಲ್ಲಿ ಪೊಲೀಸರು ಪ್ರಯಾಣಿಸುತ್ತಿದ್ದಾಗ ಸುಧಾರಿತ ಸ್ಫೋಟಕ ಸಾಧನ (ಐಇಡಿ)ದಿಂದ ಅವರ ವಾಹನವನ್ನು ಸ್ಫೋಟಗೊಳಿಸಿದ್ದಾರೆ. ಈ ಸ್ಫೋಟದಿಂದ ಹತ್ತು ಪೊಲೀಸರು ಮತ್ತು ಒಬ್ಬ ಚಾಲಕ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಪ್ತಚರ ಇಲಾಖೆಯ ಮಾಹಿತಿಯ ಪ್ರಕಾರ ಮಾವೋವಾದಿ ವಿರುದ್ಧ ಕಾರ್ಯಾಚರಣೆ ನಡೆಸಿ ಪೊಲೀಸರು ಹಿಂತಿರುಗುತ್ತಿದ್ದಾಗ ಈ ದಾಳಿ ನಡೆದಿದೆ ಎಂದು ಹೇಳಿದ್ದಾರೆ. ಈ ಪೊಲೀಸರು ಜಿಲ್ಲಾ ಮೀಸಲು ಗಾರ್ಡ್ (DRG)ನಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ಹೇಳಲಾಗಿದೆ. ಛತ್ತೀಸ್‌ಗಢ ಪೋಲಿಸ್‌ನ ವಿಶೇಷ ಪಡೆಯಾಗಿದ್ದು, ಇದು ಮಾವೋವಾದಿಗಳನ್ನು ಎದುರಿಸಲು ವಿಶೇಷ ತರಬೇತಿಯನ್ನು ಪಡೆದುಕೊಂಡಿದೆ. ಈ ಕಾರ್ಯಚರಣೆಯಲ್ಲಿ ಸ್ಥಳೀಯ ಬುಡಕಟ್ಟು ಜನಾಂಗದವರನ್ನು ಕೂಡ ಬಳಸಿಕೊಳ್ಳುತ್ತಾರೆ.

ಎಡಪಂಥೀಯ ಉಗ್ರವಾದದ ಕೇಂದ್ರವಾದ ಬಸ್ತಾರ್‌ನಲ್ಲಿ ಬಂಡುಕೋರರ ವಿರುದ್ಧದ ಹಲವಾರು ಯಶಸ್ವಿ ಕಾರ್ಯಾಚರಣೆಗಳಲ್ಲಿ DRG ಪ್ರಮುಖ ಪಾತ್ರ ವಹಿಸಿದೆ. ದಾಳಿಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ಹೇಳಲಾಗಿದೆ.

ದಂತೇವಾಡದ ಅರನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾವೋವಾದಿ ಕೇಡರ್​​ಗೆ ಇರುವ ಮಾಹಿತಿ ಮೇರೆಗೆ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಆಗಮಿಸಿದ್ದ ಡಿಆರ್‌ಜಿ ಪಡೆಯ ಮೇಲೆ ಐಇಡಿ ಸ್ಫೋಟಗೊಂಡು ನಮ್ಮ 10 ಡಿಆರ್‌ಜಿ ಜವಾನರು ಮತ್ತು ಚಾಲಕ ಹುತಾತ್ಮರಾದ ಸುದ್ದಿ ತುಂಬಾ ದುಃಖಕರವಾಗಿದೆ. ಅವರ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ನೀಡಲಿ ಎಂದು ಬಾಘೆಲ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Chhattisgarh Accident: ಛತ್ತೀಸ್‌ಗಢದಲ್ಲಿ ಕಾರಿಗೆ ಕಬ್ಬಿಣ ತುಂಬಿದ ಟ್ರಕ್ ಡಿಕ್ಕಿ: 4 ಮಂದಿ ಸಾವು

ನಕ್ಸಲರೆಂದು ಕರೆಯಲ್ಪಡುವ ಮಾವೋವಾದಿಗಳು ಆರು ದಶಕಗಳಿಂದ ನೂರಾರು ಜನರನ್ನು ಕೊಂದ ಸರ್ಕಾರದ ವಿರುದ್ಧ ಸಶಸ್ತ್ರ ಬಂಡಾಯವನ್ನು ನಡೆಸಿದ್ದಾರೆ. ದೇಶದ ಆರ್ಥಿಕ ಉತ್ಕರ್ಷದಿಂದ ಹೊರಗುಳಿದಿರುವ ಬಡವರ ಪರವಾಗಿ ಅವರು ಹೋರಾಡುತ್ತಿದ್ದಾರೆ ಎಂದು ಮಾವೋವಾದಿಗಳು ಹೇಳುತ್ತಾರೆ.

1967ರಿಂದ ದೇಶದ ಆಂತರಿಕ ಭದ್ರತೆಗೆ ಮಾವೋವಾದಿಗಳು ದೊಡ್ಡ ಸಮಸಸ್ಯೆಯಾಗಿದೆ. ಈ ಮಾವೋವಾದಿಗಳು ದಟ್ಟವಾದ ಕಾಡುಗಳಲ್ಲಿ ವಾಸವಾಗಿದ್ದು, ಭಾರತೀಯ ಆಡಳಿತ ಮತ್ತು ಪಡೆಗಳ ವಿರುದ್ಧ ಅವರ ಕಾರ್ಯಾಚರಣೆ ನಡೆಸುತ್ತಾರೆ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:27 pm, Wed, 26 April 23

ಬಸ್​​ಗೆ ಕಾರು ಗುದ್ದಿ ಐವರ ಸಾವು: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಬಸ್​​ಗೆ ಕಾರು ಗುದ್ದಿ ಐವರ ಸಾವು: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಮಹಾಶಿವರಾತ್ರಿ ಆಚರಣೆ ಯಾಕೆ ಮಾಡಬೇಕು? ಇಲ್ಲಿದೆ ಮಾಹಿತಿ
ಮಹಾಶಿವರಾತ್ರಿ ಆಚರಣೆ ಯಾಕೆ ಮಾಡಬೇಕು? ಇಲ್ಲಿದೆ ಮಾಹಿತಿ
ಈ ರಾಶಿಯವರಿಗೆ ಇಂದು ಸಿಗಲಿದೆ ಐದು ಗ್ರಹಗಳ ಶುಭ ಫಲ
ಈ ರಾಶಿಯವರಿಗೆ ಇಂದು ಸಿಗಲಿದೆ ಐದು ಗ್ರಹಗಳ ಶುಭ ಫಲ
ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಟಿವಿ9ನಿಂದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ
ರಿಯಲ್ ಎಸ್ಟೇಟ್ ಉದ್ಯಮಿ ರೋಹನ್ ಮೊಂಟೆರೋಗೆ ಟಿವಿ9 ನವ ನಕ್ಷತ್ರ ಪ್ರಶಸ್ತಿ
ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​
ಬೂಕರ್ ಪ್ರಶಸ್ತಿ ಲೇಖಕಿ ಬಾನು ಮುಷ್ತಾಕ್​ಗೆ ಟಿವಿ9 ನವ ನಕ್ಷತ್ರ ಅವಾರ್ಡ್​​
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್