Chhattisgarh: ಮಾವೋವಾದಿಗಳಿಂದ ಐಇಡಿ ಸ್ಫೋಟ, ಓರ್ವ ಚಾಲಕ ಸೇರಿ, 10 ಪೊಲೀಸರು ಸಾವು

ಛತ್ತೀಸ್‌ಗಢದ ದಾಂತೇವಾಡದಲ್ಲಿ ಮಾವೋವಾದಿಗಳು ನಡೆಸಿದ ಬಾಂಬ್​​ ದಾಳಿಯಲ್ಲಿ 10 ಪೊಲೀಸ್ ಸಿಬ್ಬಂದಿ, ಸೇರಿ ಒಬ್ಬ ಚಾಲಕ ಬಲಿಯಾಗಿದ್ದಾರೆ.

Chhattisgarh: ಮಾವೋವಾದಿಗಳಿಂದ ಐಇಡಿ ಸ್ಫೋಟ, ಓರ್ವ ಚಾಲಕ ಸೇರಿ, 10 ಪೊಲೀಸರು ಸಾವು
ಸಾಂದರ್ಭಿಕ ಚಿತ್ರ

Updated on: Apr 26, 2023 | 3:53 PM

ದಾಂತೇವಾಡ: ಛತ್ತೀಸ್‌ಗಢದ (Chhattisgarh) ದಾಂತೇವಾಡದಲ್ಲಿ ಮಾವೋವಾದಿಗಳು ನಡೆಸಿದ  ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟಯಲ್ಲಿ 10 ಪೊಲೀಸ್,  ಒಬ್ಬ ಚಾಲಕ ಬಲಿಯಾಗಿದ್ದಾರೆ. ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯಲ್ಲಿ ಪೊಲೀಸರು ಪ್ರಯಾಣಿಸುತ್ತಿದ್ದಾಗ ಸುಧಾರಿತ ಸ್ಫೋಟಕ ಸಾಧನ (ಐಇಡಿ)ದಿಂದ ಅವರ ವಾಹನವನ್ನು ಸ್ಫೋಟಗೊಳಿಸಿದ್ದಾರೆ. ಈ ಸ್ಫೋಟದಿಂದ ಹತ್ತು ಪೊಲೀಸರು ಮತ್ತು ಒಬ್ಬ ಚಾಲಕ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಪ್ತಚರ ಇಲಾಖೆಯ ಮಾಹಿತಿಯ ಪ್ರಕಾರ ಮಾವೋವಾದಿ ವಿರುದ್ಧ ಕಾರ್ಯಾಚರಣೆ ನಡೆಸಿ ಪೊಲೀಸರು ಹಿಂತಿರುಗುತ್ತಿದ್ದಾಗ ಈ ದಾಳಿ ನಡೆದಿದೆ ಎಂದು ಹೇಳಿದ್ದಾರೆ. ಈ ಪೊಲೀಸರು ಜಿಲ್ಲಾ ಮೀಸಲು ಗಾರ್ಡ್ (DRG)ನಲ್ಲಿ ಸೇವೆ ಸಲ್ಲಿಸುತ್ತಿದ್ದರು ಎಂದು ಹೇಳಲಾಗಿದೆ. ಛತ್ತೀಸ್‌ಗಢ ಪೋಲಿಸ್‌ನ ವಿಶೇಷ ಪಡೆಯಾಗಿದ್ದು, ಇದು ಮಾವೋವಾದಿಗಳನ್ನು ಎದುರಿಸಲು ವಿಶೇಷ ತರಬೇತಿಯನ್ನು ಪಡೆದುಕೊಂಡಿದೆ. ಈ ಕಾರ್ಯಚರಣೆಯಲ್ಲಿ ಸ್ಥಳೀಯ ಬುಡಕಟ್ಟು ಜನಾಂಗದವರನ್ನು ಕೂಡ ಬಳಸಿಕೊಳ್ಳುತ್ತಾರೆ.

ಎಡಪಂಥೀಯ ಉಗ್ರವಾದದ ಕೇಂದ್ರವಾದ ಬಸ್ತಾರ್‌ನಲ್ಲಿ ಬಂಡುಕೋರರ ವಿರುದ್ಧದ ಹಲವಾರು ಯಶಸ್ವಿ ಕಾರ್ಯಾಚರಣೆಗಳಲ್ಲಿ DRG ಪ್ರಮುಖ ಪಾತ್ರ ವಹಿಸಿದೆ. ದಾಳಿಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರೊಂದಿಗೆ ಮಾತನಾಡಿದ್ದಾರೆ ಎಂದು ಹೇಳಲಾಗಿದೆ.

ದಂತೇವಾಡದ ಅರನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾವೋವಾದಿ ಕೇಡರ್​​ಗೆ ಇರುವ ಮಾಹಿತಿ ಮೇರೆಗೆ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಆಗಮಿಸಿದ್ದ ಡಿಆರ್‌ಜಿ ಪಡೆಯ ಮೇಲೆ ಐಇಡಿ ಸ್ಫೋಟಗೊಂಡು ನಮ್ಮ 10 ಡಿಆರ್‌ಜಿ ಜವಾನರು ಮತ್ತು ಚಾಲಕ ಹುತಾತ್ಮರಾದ ಸುದ್ದಿ ತುಂಬಾ ದುಃಖಕರವಾಗಿದೆ. ಅವರ ಕುಟುಂಬಕ್ಕೆ ದುಃಖ ಬರಿಸುವ ಶಕ್ತಿ ನೀಡಲಿ ಎಂದು ಬಾಘೆಲ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Chhattisgarh Accident: ಛತ್ತೀಸ್‌ಗಢದಲ್ಲಿ ಕಾರಿಗೆ ಕಬ್ಬಿಣ ತುಂಬಿದ ಟ್ರಕ್ ಡಿಕ್ಕಿ: 4 ಮಂದಿ ಸಾವು

ನಕ್ಸಲರೆಂದು ಕರೆಯಲ್ಪಡುವ ಮಾವೋವಾದಿಗಳು ಆರು ದಶಕಗಳಿಂದ ನೂರಾರು ಜನರನ್ನು ಕೊಂದ ಸರ್ಕಾರದ ವಿರುದ್ಧ ಸಶಸ್ತ್ರ ಬಂಡಾಯವನ್ನು ನಡೆಸಿದ್ದಾರೆ. ದೇಶದ ಆರ್ಥಿಕ ಉತ್ಕರ್ಷದಿಂದ ಹೊರಗುಳಿದಿರುವ ಬಡವರ ಪರವಾಗಿ ಅವರು ಹೋರಾಡುತ್ತಿದ್ದಾರೆ ಎಂದು ಮಾವೋವಾದಿಗಳು ಹೇಳುತ್ತಾರೆ.

1967ರಿಂದ ದೇಶದ ಆಂತರಿಕ ಭದ್ರತೆಗೆ ಮಾವೋವಾದಿಗಳು ದೊಡ್ಡ ಸಮಸಸ್ಯೆಯಾಗಿದೆ. ಈ ಮಾವೋವಾದಿಗಳು ದಟ್ಟವಾದ ಕಾಡುಗಳಲ್ಲಿ ವಾಸವಾಗಿದ್ದು, ಭಾರತೀಯ ಆಡಳಿತ ಮತ್ತು ಪಡೆಗಳ ವಿರುದ್ಧ ಅವರ ಕಾರ್ಯಾಚರಣೆ ನಡೆಸುತ್ತಾರೆ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:27 pm, Wed, 26 April 23

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us