AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್​ಗಡ ಕಾಂಗ್ರೆಸ್​​ನಲ್ಲಿ ಕಿತ್ತಾಟ; ‘ಅವರು ನನ್ನನ್ನು ಕೊಲ್ಲುವ ಸಾಧ್ಯತೆ ಇದೆ’ ಎಂದು ರಾಜ್ಯ ಆರೋಗ್ಯ ಸಚಿವರ ವಿರುದ್ಧ ಶಾಸಕನ ಆರೋಪ

Chhattisgarh Congress: ಶನಿವಾರ ರಾತ್ರಿ ಸುರ್ಗುಜಾ ಪ್ರದೇಶದಲ್ಲಿ ಸಿಂಗ್‌ದೇವ್ ಅವರ ಬೆಂಬಲಿಗರು ಸಿಂಗ್ ಬೆಂಗಾವಲು ವಾಹನದ ಮೇಲೆ ದಾಳಿ ಮಾಡಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ಸಿಂಗ್ ಈ ರೀತಿ ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಛತ್ತೀಸ್​ಗಡ ಕಾಂಗ್ರೆಸ್​​ನಲ್ಲಿ ಕಿತ್ತಾಟ; ‘ಅವರು ನನ್ನನ್ನು ಕೊಲ್ಲುವ ಸಾಧ್ಯತೆ ಇದೆ’ ಎಂದು ರಾಜ್ಯ ಆರೋಗ್ಯ ಸಚಿವರ ವಿರುದ್ಧ ಶಾಸಕನ ಆರೋಪ
ಬೃಹಸ್ಪತಿ ಸಿಂಗ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 26, 2021 | 12:21 PM

ಛತ್ತೀಸ್​ಗಡ: ‘ನನ್ನ ಪ್ರಾಣಕ್ಕೆ ಅಪಾಯವಿದೆ ಅವರ ಮೇಲೆ ದಾಳಿ ಮಾಡಬಹುದು’ ಎಂದು ಛತ್ತೀಸ್​ಗಡದ ಕಾಂಗ್ರೆಸ್ ಶಾಸಕ ಬೃಹಸ್ಪತಿ ಸಿಂಗ್ ತಮ್ಮ ಪಕ್ಷದ ಹಿರಿಯ ನಾಯಕ ಮತ್ತು ರಾಜ್ಯ ಆರೋಗ್ಯ ಸಚಿವ ಟಿ.ಎಸ್. ಸಿಂಗ್‌ದೇವ್ ಅವರ ವಿರುದ್ಧ ಆರೋಪ ಮಾಡಿದ್ದಾರೆ.

ರಾಮಾನುಜ್​​ಗಂಜ್ ಶಾಸಕರಾಗಿರುವ ಸಿಂಗ್, “ಮಹಾರಾಜ” (ಸಿಂಗ್‌ದೇವ್) ನನ್ನನ್ನು ಕೊಲ್ಲಬಹುದು ”ಎಂದು ಹೇಳಿದ್ದಾರೆ. “ನನ್ನನ್ನು ಕೊಲ್ಲುವ ಮೂಲಕ ಸಿಂಗ್‌ದೇವ್ ಮುಖ್ಯಮಂತ್ರಿಯಾಗುವುದಾದರೆ ಅವರು ಈ ಹುದ್ದೆಯಿಂದ ಆಶೀರ್ವದಿಸಲ್ಪಡಬೇಕು”. ಸಚಿವರು ಇತರ ಕಾಂಗ್ರೆಸ್ ಶಾಸಕರನ್ನು ಸಹ ಅವಮಾನಿಸಿದ್ದಾರೆ ಎಂದಿದ್ದಾರೆ ಸಿಂಗ್.

ಶನಿವಾರ ರಾತ್ರಿ ಸುರ್ಗುಜಾ ಪ್ರದೇಶದಲ್ಲಿ ಸಿಂಗ್‌ದೇವ್ ಅವರ ಬೆಂಬಲಿಗರು ಸಿಂಗ್ ಬೆಂಗಾವಲು ವಾಹನದ ಮೇಲೆ ದಾಳಿ ಮಾಡಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ಸಿಂಗ್ ಈ ರೀತಿ ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಈ ವಿಷಯವನ್ನು ಪ್ರಸ್ತಾಪಿಸುವುದಾಗಿ ಸಿಂಗ್ ಹೇಳಿದ್ದಾರೆ. “ಶಾಸಕಾಂಗ ಪಕ್ಷದ ಸಭೆಯಲ್ಲಿಯೂ ನಾನು ನನ್ನ ವಿಷಯವನ್ನು ತಿಳಿಸುತ್ತೇನೆ. ನಾನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಪಿಎಲ್ ಪುನಿಯಾ, ವಿಧಾನಸಭೆಯ ಸ್ಪೀಕರ್, ವಿಧಾನಸಭೆಯ ಉಪ ಸ್ಪೀಕರ್ ಅವರಿಗೆ ದೂರು ನೀಡುತ್ತೇನೆ. ಈ ವಿಷಯದಲ್ಲಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇನೆ ಎಂದು ಸಿಂಗ್ ಹೇಳಿದರು.

ಸಿಂಗ್ ಬೆಂಗಾವಲು ವಾಹನದ ಮೇಲೆ ದಾಳಿಯ ನಂತರ, 18 ಕ್ಕೂ ಹೆಚ್ಚು ಶಾಸಕರು ರಾಯ್ಪುರದ ಸಿಂಗ್ ಅವರ ನಿವಾಸಕ್ಕೆ ತೆರಳಿ ಅವರ ಯೋಗಕ್ಷೇಮವನ್ನು ವಿಚಾರಿಸಿದರು.

ಏತನ್ಮಧ್ಯೆ, ಇದು ಪಕ್ಷದ ವಿಷಯವಾಗಿದೆ ಮತ್ತು ಮಾತುಕತೆಯ ಮೂಲಕ ಪರಿಹರಿಸಲಾಗುವುದು ಎಂದು ಸಿಂಗ್ ದೇವ್ ಹೇಳಿದರು. “ನಾವು ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ. ಯಾವುದೇ ಸಮಸ್ಯೆ ಇದ್ದರೆ, ನಾವು ಅದನ್ನು ಚರ್ಚೆಗಳ ಮೂಲಕ ಪರಿಹರಿಸುತ್ತೇವೆ, ”ಎಂದು ಅವರು ಹೇಳಿದರು.

ಇದನ್ನೂ ಓದಿ: Ramappa Temple ಯುನೆಸ್ಕೊ ವಿಶ್ವ ಪಾರಂಪರಿಕ ತಾಣ ಪಟ್ಟಿಯಲ್ಲಿ ತೆಲಂಗಾಣದ ರಾಮಪ್ಪ ದೇವಾಲಯ; ಪ್ರಧಾನಿ ಮೋದಿ ಅಭಿನಂದನೆ

(Chhattisgarh Congress MLA Brihaspati Singh Blames Health Minister TS Singhdeo for Convoy Attack)

ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಪಾಟ್ನಾದಲ್ಲಿ 1,200 ಕೋಟಿ ವೆಚ್ಚದ ಟರ್ಮಿನಲ್ ಉದ್ಘಾಟಿಸಿದ ಮೋದಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಆರ್​ಸಿಬಿ ವೇಗಿಗಳ ವಿಕೆಟ್ ಬೇಟೆ ಹೇಗಿದೆ ನೀವೇ ನೋಡಿ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ಕನ್ನಡದ ಬಗ್ಗೆ ಕಮಲ್ ಹಾಸನ್​ ಹೇಳಿದ್ದು ಸರಿಯೇ? ನಟಿ ಜಯಮಾಲಾ ಪ್ರತಿಕ್ರಿಯೆ
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ರೆಹಮಾನ್ ಕೊಲೆಗೆ ಪೊಲೀಸ್ ಕಮೀಶನರ್ ಹೊಣೆ: ಯುವ ಮುಖಂಡರು
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಕಮಲ್ ಹಾಸನ್ ನಟನೆಯ ಥಗ್ ಲೈಫ್ ಬ್ಯಾನ್ ಮಾಡೋದು ಚರ್ಚೆಯ ವಿಷಯ: ಸುಮಲತಾ
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು