AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhattisgarh Encounter: ಛತ್ತೀಸ್​ಗಢ ಎನ್​ಕೌಂಟರ್​, 29 ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆ

ನಕ್ಸಲ್ ಪೀಡಿತ ಪ್ರದೇಶವೆಂದೇ ಗುರುತಿಸಿಕೊಂಡಿರುವ ಛತ್ತೀಸ್​ಗಢದಲ್ಲಿ ಮಂಗಳವಾರ ನಡೆದ ಎನ್​ಕೌಂಟರ್​ನಲ್ಲಿ ಭದ್ರತಾ ಪಡೆಗಳು 29 ನಕ್ಸಲರನ್ನು ಹತ್ಯೆ ಮಾಡಿದ್ದಾರೆ. ಎನ್​ಕೌಂಟರ್​ನಲ್ಲಿ ಭದ್ರತಾ ಪಡೆ ಪ್ರಭಾವಿ ಕಮಾಂಡರ್ ಶಂಕರ್ ರಾವ್​ರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದೆ. ಅವರನ್ನು ಹಿಡಿದುಕೊಟ್ಟವರಿಗೆ 25 ಲಕ್ಷ ರೂ. ಬಹುಮಾನ ನೀಡುವುದಾಗಿ ಈ ಮೊದಲು ಘೋಷಿಸಲಾಗಿತ್ತು.

Chhattisgarh Encounter: ಛತ್ತೀಸ್​ಗಢ ಎನ್​ಕೌಂಟರ್​, 29 ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆ
ನಕ್ಸಲ್Image Credit source: Mint
ನಯನಾ ರಾಜೀವ್
|

Updated on:Apr 17, 2024 | 8:30 AM

Share

ಛತ್ತೀಸ್​ಗಢ(Chhattisgarh)ದಲ್ಲಿ 2024ರ ಲೋಕಸಭಾ ಚುನಾವಣೆ(Lok Sabha Election)ಯ ಮೊದಲ ಹಂತದ ಮತದಾನಕ್ಕೂ ಮೊದಲು ಭದ್ರತಾ ಪಡೆ ಎನ್​ಕೌಂಟರ್​ನಲ್ಲಿ 29 ನಕ್ಸಲ(Naxal)ರನ್ನು ಹತ್ಯೆ ಮಾಡಿದ್ದಾರೆ. ರಾಜ್ಯದಲ್ಲಿ ಈವರೆಗಿನ ಅತಿದೊಡ್ಡ ಎನ್​ಕೌಂಟರ್(Encounter) ಇದು ಎಂದೇ ಹೇಳಬಹುದು. ನಕ್ಸಲ್ ಕಮಾಂಡರ್​ಗಳನ್ನು ಕೂಡ ಹತ್ಯೆ ಮಾಡಲಾಗಿದೆ. ಇದು ಛತ್ತೀಸ್​ಗಢದ ಎಡಪಂಥೀಯ ಉಗ್ರವಾದದ ವಿರುದ್ಧದ ಹೋರಾಟದಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಈ ಸಂಖ್ಯೆಯ ನಕ್ಸಲರನ್ನು ಒಂದೇ ಬಾರಿಗೆ ಹೊಡೆದುರುಳಿಸಲಾಗಿದೆ.

ಮಾವೋವಾದಿಗಳ ಭದ್ರಕೋಟೆಯಾಗಿರುವ ಬಸ್ತಾರ್​ ಪ್ರದೇಶದಲ್ಲಿ ಇದುವರೆಗೆ ನಡೆದ ಎನ್​ಕೌಂಟರ್​ನಲ್ಲಿ ಈ ವರ್ಷ 79 ನಕ್ಸಲರು ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಮೂವರು ಭದ್ರತಾ ಸಿಬ್ಬಂದಿಗೂ ಗಾಯಗಳಾಗಿವೆ. ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಎನ್​ಕೌಂಟರ್​ನಲ್ಲಿ ಭದ್ರತಾ ಪಡೆ ಪ್ರಭಾವಿ ಕಮಾಂಡರ್ ಶಂಕರ್ ರಾವ್​ರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದೆ. ಅವರನ್ನು ಹಿಡಿದುಕೊಟ್ಟವರಿಗೆ 25 ಲಕ್ಷ ರೂ. ಬಹುಮಾನ ನೀಡುವುದಾಗಿ ಈ ಮೊದಲು ಘೋಷಿಸಲಾಗಿತ್ತು. ಛತ್ತೀಸ್​ಗಢದ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಎನ್​ಕೌಂಟರ್​ನ್ನು ನಕ್ಸಲೀಯರ ಮೇಲಿನ ಸರ್ಜಿಕಲ್ ಸ್ಟ್ರೈಕ್ ಎಂದು ಕರೆದಿದ್ದಾರೆ. ಇದರ ಸಂಪೂರ್ಣ ಶ್ರೇಯ ಭದ್ರತಾ ಪಡೆಗೆ ಸಲ್ಲುತ್ತದೆ ಎಂದರು.

ಮತ್ತಷ್ಟು ಓದಿ: Chhattisgarh: ಕಂಕೇರ್​ನಲ್ಲಿ ಎನ್​ಕೌಂಟರ್​, ಮೂವರು ನಕ್ಸಲರ ಕೊಂದ ಯೋಧರು

ನಿಷೇಧಿತ ಸಿಪಿಐಯ ಉತ್ತರ ಬಸ್ತಾರ್ ವಿಭಾಗದ ಮುಖ್ಯಸ್ಥ ಶಂಕರ್, ಲಲಿತಾ, ರಾಜು ಮತ್ತು ಇತರರು ಇರುವ ಬಗ್ಗೆ ಮಾಹಿತಿ ಆಧರಿಸಿ ಈ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾಗ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ.

ಸ್ಥಳದಿಂದ 29 ನಕ್ಸಲೀಯರ ಮೃತದೇಹಗಳು , ಎಕೆ-47, ಎಸ್​ಎಲ್​ಆರ್​, ಐಎನ್​ಎಸ್​ಎಎಸ್​, 303 ರೈಫಲ್​ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ನಕ್ಸಲ್ ಪೀಡಿತ ಬಸ್ತಾರ್ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 19ರಂದು ಮತದಾನ ನಡೆಯಲಿದೆ, ಕಂಕೇರ್ ಕ್ಷೇತ್ರದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:29 am, Wed, 17 April 24

Follow Us
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ