AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhattisgarh Encounter: ಛತ್ತೀಸ್​ಗಢ ಎನ್​ಕೌಂಟರ್​, 29 ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆ

ನಕ್ಸಲ್ ಪೀಡಿತ ಪ್ರದೇಶವೆಂದೇ ಗುರುತಿಸಿಕೊಂಡಿರುವ ಛತ್ತೀಸ್​ಗಢದಲ್ಲಿ ಮಂಗಳವಾರ ನಡೆದ ಎನ್​ಕೌಂಟರ್​ನಲ್ಲಿ ಭದ್ರತಾ ಪಡೆಗಳು 29 ನಕ್ಸಲರನ್ನು ಹತ್ಯೆ ಮಾಡಿದ್ದಾರೆ. ಎನ್​ಕೌಂಟರ್​ನಲ್ಲಿ ಭದ್ರತಾ ಪಡೆ ಪ್ರಭಾವಿ ಕಮಾಂಡರ್ ಶಂಕರ್ ರಾವ್​ರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದೆ. ಅವರನ್ನು ಹಿಡಿದುಕೊಟ್ಟವರಿಗೆ 25 ಲಕ್ಷ ರೂ. ಬಹುಮಾನ ನೀಡುವುದಾಗಿ ಈ ಮೊದಲು ಘೋಷಿಸಲಾಗಿತ್ತು.

Chhattisgarh Encounter: ಛತ್ತೀಸ್​ಗಢ ಎನ್​ಕೌಂಟರ್​, 29 ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆ
ನಕ್ಸಲ್Image Credit source: Mint
Follow us
ನಯನಾ ರಾಜೀವ್
|

Updated on:Apr 17, 2024 | 8:30 AM

ಛತ್ತೀಸ್​ಗಢ(Chhattisgarh)ದಲ್ಲಿ 2024ರ ಲೋಕಸಭಾ ಚುನಾವಣೆ(Lok Sabha Election)ಯ ಮೊದಲ ಹಂತದ ಮತದಾನಕ್ಕೂ ಮೊದಲು ಭದ್ರತಾ ಪಡೆ ಎನ್​ಕೌಂಟರ್​ನಲ್ಲಿ 29 ನಕ್ಸಲ(Naxal)ರನ್ನು ಹತ್ಯೆ ಮಾಡಿದ್ದಾರೆ. ರಾಜ್ಯದಲ್ಲಿ ಈವರೆಗಿನ ಅತಿದೊಡ್ಡ ಎನ್​ಕೌಂಟರ್(Encounter) ಇದು ಎಂದೇ ಹೇಳಬಹುದು. ನಕ್ಸಲ್ ಕಮಾಂಡರ್​ಗಳನ್ನು ಕೂಡ ಹತ್ಯೆ ಮಾಡಲಾಗಿದೆ. ಇದು ಛತ್ತೀಸ್​ಗಢದ ಎಡಪಂಥೀಯ ಉಗ್ರವಾದದ ವಿರುದ್ಧದ ಹೋರಾಟದಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಈ ಸಂಖ್ಯೆಯ ನಕ್ಸಲರನ್ನು ಒಂದೇ ಬಾರಿಗೆ ಹೊಡೆದುರುಳಿಸಲಾಗಿದೆ.

ಮಾವೋವಾದಿಗಳ ಭದ್ರಕೋಟೆಯಾಗಿರುವ ಬಸ್ತಾರ್​ ಪ್ರದೇಶದಲ್ಲಿ ಇದುವರೆಗೆ ನಡೆದ ಎನ್​ಕೌಂಟರ್​ನಲ್ಲಿ ಈ ವರ್ಷ 79 ನಕ್ಸಲರು ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಮೂವರು ಭದ್ರತಾ ಸಿಬ್ಬಂದಿಗೂ ಗಾಯಗಳಾಗಿವೆ. ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

ಎನ್​ಕೌಂಟರ್​ನಲ್ಲಿ ಭದ್ರತಾ ಪಡೆ ಪ್ರಭಾವಿ ಕಮಾಂಡರ್ ಶಂಕರ್ ರಾವ್​ರನ್ನು ಕೊಲ್ಲುವಲ್ಲಿ ಯಶಸ್ವಿಯಾಗಿದೆ. ಅವರನ್ನು ಹಿಡಿದುಕೊಟ್ಟವರಿಗೆ 25 ಲಕ್ಷ ರೂ. ಬಹುಮಾನ ನೀಡುವುದಾಗಿ ಈ ಮೊದಲು ಘೋಷಿಸಲಾಗಿತ್ತು. ಛತ್ತೀಸ್​ಗಢದ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಎನ್​ಕೌಂಟರ್​ನ್ನು ನಕ್ಸಲೀಯರ ಮೇಲಿನ ಸರ್ಜಿಕಲ್ ಸ್ಟ್ರೈಕ್ ಎಂದು ಕರೆದಿದ್ದಾರೆ. ಇದರ ಸಂಪೂರ್ಣ ಶ್ರೇಯ ಭದ್ರತಾ ಪಡೆಗೆ ಸಲ್ಲುತ್ತದೆ ಎಂದರು.

ಮತ್ತಷ್ಟು ಓದಿ: Chhattisgarh: ಕಂಕೇರ್​ನಲ್ಲಿ ಎನ್​ಕೌಂಟರ್​, ಮೂವರು ನಕ್ಸಲರ ಕೊಂದ ಯೋಧರು

ನಿಷೇಧಿತ ಸಿಪಿಐಯ ಉತ್ತರ ಬಸ್ತಾರ್ ವಿಭಾಗದ ಮುಖ್ಯಸ್ಥ ಶಂಕರ್, ಲಲಿತಾ, ರಾಜು ಮತ್ತು ಇತರರು ಇರುವ ಬಗ್ಗೆ ಮಾಹಿತಿ ಆಧರಿಸಿ ಈ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಈ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದಾಗ ಭದ್ರತಾ ಪಡೆಗಳು ಮತ್ತು ನಕ್ಸಲೀಯರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದೆ.

ಸ್ಥಳದಿಂದ 29 ನಕ್ಸಲೀಯರ ಮೃತದೇಹಗಳು , ಎಕೆ-47, ಎಸ್​ಎಲ್​ಆರ್​, ಐಎನ್​ಎಸ್​ಎಎಸ್​, 303 ರೈಫಲ್​ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ನಕ್ಸಲ್ ಪೀಡಿತ ಬಸ್ತಾರ್ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 19ರಂದು ಮತದಾನ ನಡೆಯಲಿದೆ, ಕಂಕೇರ್ ಕ್ಷೇತ್ರದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:29 am, Wed, 17 April 24

ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ
ಸಿಯಾಲ್​ಕೋಟ್ ತೊರೆಯುತ್ತಿರುವ ಪಾಕ್ ಜನ, ಕಾಲ್ತುಳಿದಂಥಾ ಸ್ಥಿತಿ