AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ವ್ಯಕ್ತಿ 12 ವರ್ಷಗಳ ಬಳಿಕ ಸೆರೆ

ಪತ್ನಿಯನ್ನು ಕೊಲೆ ಮಾಡಿ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಛತ್ತೀಸ್​ಗಢದ ದುರ್ಗ್​ನಲ್ಲಿ ನಡೆದಿದೆ. ಆರೋಪಿ ಪದೇ ಪದೇ ಊರು ಬದಲಾಯಿಸುತ್ತಿದ್ದ, ಜತೆಗೆ ತನ್ನ ಗುರುತು ಕೂಡ ಬದಲಾಯಿಸಿಕೊಂಡಿದ್ದ.

ಪತ್ನಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ವ್ಯಕ್ತಿ  12 ವರ್ಷಗಳ ಬಳಿಕ ಸೆರೆ
ಆರೋಪಿImage Credit source: India Today
Follow us
ನಯನಾ ರಾಜೀವ್
|

Updated on: Nov 24, 2024 | 2:49 PM

ಪತ್ನಿಯನ್ನು ಕೊಲೆ ಮಾಡಿ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಛತ್ತೀಸ್​ಗಢದ ದುರ್ಗ್​ನಲ್ಲಿ ನಡೆದಿದೆ. ಆರೋಪಿ ಪದೇ ಪದೇ ಊರು ಬದಲಾಯಿಸುತ್ತಿದ್ದ, ಜತೆಗೆ ತನ್ನ ಗುರುತು ಕೂಡ ಬದಲಾಯಿಸಿಕೊಂಡಿದ್ದ.

ಪತಿ-ಪತ್ನಿ ಇಬ್ಬರೂ ಜಗಳವಾಡಿದ್ದರು ಅದು ವಿಕೋಪಕ್ಕೆ ಹೋಗಿ ವ್ಯಕ್ತಿ ಆಕೆಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದ, ನಂತರ ಅಪರಾಧ ಸ್ಥಳದಿಂದ ಪರಾರಿಯಾಗಿದ್ದ. ಪತಿ-ಪತ್ನಿ ಇಬ್ಬರೂ ನಿತ್ಯ ಮದ್ಯಪಾನ ಮಾಡುತ್ತಿದ್ದು, ಮದ್ಯದ ಅಮಲಿನಲ್ಲಿ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತ್ನಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಬಳಿಕ ಆರೋಪಿ ಪರಾರಿಯಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾಳೆ. ಹಳೆ ಪ್ರಕರಣಗಳ ನಿತ್ಯ ಪರಿಶೀಲನೆ ನಡೆಸುತ್ತಿದ್ದಾಗ, ಮಾಹಿತಿದಾರರೊಬ್ಬರು ನೀಡಿದ ಸುಳಿವು ರಾಜನಂದಗಾಂವ್‌ನಲ್ಲಿ ಆರೋಪಿಗಳ ಉಪಸ್ಥಿತಿಯನ್ನು ಬಹಿರಂಗಪಡಿಸಿತು. ಮಾಹಿತಿಗಳನ್ನು ಪರಿಶೀಲಿಸಿದ ನಂತರ, ನೆವಾಯಿ ಪೊಲೀಸರು ಪತ್ತೆ ತಪ್ಪಿಸಲು ವಿವಿಧ ವೇಷಗಳಲ್ಲಿ ವಿವಿಧ ಕೆಲಸಗಳನ್ನು ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಕೆಲವೊಮ್ಮೆ ಮಗಳ ಮನೆಯಲ್ಲಿ ತಲೆಮರೆಸಿಕೊಂಡು ಬೇರೆ ಬೇರೆ ಜಿಲ್ಲೆಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದ. ಅವರ ನಿರಂತರ ಚಲನವಲನಗಳನ್ನು ಗಮನಿಸಿ ಪೊಲೀಸರು ಬಂಧಿಸಿದ್ದಾರೆ. ಆತ ಚಾಣಾಕ್ಷನಾಗಿದ್ದು, ಪೊಲೀಸರ ದಾರಿ ತಪ್ಪಿಸಲು ಪದೇ ಪದೇ ತನ್ನ ಗುರುತು ಹಾಗೂ ವಿಳಾಸವನ್ನು ಬದಲಾಯುಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಕುಮಾರಸ್ವಾಮಿ, ಬಿಜೆಪಿ ನಾಯಕರಿಂದ ಹೆಣಗಳ ಮೇಲೆ ರಾಜಕಾರಣ: ಶಿವಕುಮಾರ್
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಪೋಸ್ಟ್​ಮಾರ್ಟಂ ಬೇಡ, ದೇಹ ಕೊಡಿ ಎಂದು ಅತ್ತ ತಾಯಿ ನೆನೆದು ಡಿಕೆಶಿ ಕಣ್ಣೀರು
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಸತ್ಕಾರ ಸಮಾರಂಭವನ್ನು ಕೇವಲ 10 ನಿಮಿಷಗಳಲ್ಲಿ ಮುಗಿಸಿದ್ದು: ಶಿವಕುಮಾರ್
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ