AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕ್ಸಲರು ಅಪಹರಿಸಿದ್ದ ಸಿಆರ್​ಪಿಎಫ್ ಕೋಬ್ರಾ ತುಕಡಿಯ ಯೋಧ ರಾಕೇಶ್ವರ್ ಸಿಂಗ್ ಬಿಡುಗಡೆ

ಸಿಆರ್​ಪಿಎಫ್ ಮತ್ತು ಇತರ ಭದ್ರತಾ ಸಿಬ್ಬಂದಿ ಮೇಲೆ ಏಪ್ರಿಲ್3ರಂದು ನಕ್ಸಲರು ನಡೆಸಿದ ದಾಳಿಯಲ್ಲಿ ನಕ್ಸಲರು ಅಪಹರಣ ಮಾಡಿದ್ದ ಕೇಂದ್ರೀಯ ಸಶಸ್ತ್ರ ಮೀಸಲು ಪಡೆಯ (Central Reserve Police Force - CRPF) ಕೋಬ್ರಾ ತುಕಡಿಯ ಯೋಧ ರಾಕೇಶ್ವರ್​ ಸಿಂಗ್ ಬಿಡುಗಡೆಯಾಗಿದ್ದಾರೆ.

ನಕ್ಸಲರು ಅಪಹರಿಸಿದ್ದ ಸಿಆರ್​ಪಿಎಫ್ ಕೋಬ್ರಾ ತುಕಡಿಯ ಯೋಧ ರಾಕೇಶ್ವರ್ ಸಿಂಗ್ ಬಿಡುಗಡೆ
ಯೋಧ ರಾಕೇಶ್ವರ್​ ಸಿಂಗ್
ರಶ್ಮಿ ಕಲ್ಲಕಟ್ಟ
|

Updated on:Apr 08, 2021 | 6:58 PM

Share

ರಾಯಪುರ: ಸಿಆರ್​ಪಿಎಫ್ ಮತ್ತು ಇತರ ಭದ್ರತಾ ಸಿಬ್ಬಂದಿ ಮೇಲೆ ಏಪ್ರಿಲ್3ರಂದು ನಕ್ಸಲರು ನಡೆಸಿದ ದಾಳಿಯಲ್ಲಿ ನಕ್ಸಲರು ಅಪಹರಣ ಮಾಡಿದ್ದ ಕೇಂದ್ರೀಯ ಸಶಸ್ತ್ರ ಮೀಸಲು ಪಡೆಯ (Central Reserve Police Force – CRPF) ಕೋಬ್ರಾ ತುಕಡಿಯ ಯೋಧ ರಾಕೇಶ್ವರ್​ ಸಿಂಗ್ ಬಿಡುಗಡೆಯಾಗಿದ್ದಾರೆ. ಜೋನಾಗುಡದಲ್ಲಿ ನಡೆದ ದಾಳಿ ವೇಳೆ ನಕ್ಸಲರು ರಾಕೇಶ್ವರ್ ಸಿಂಗ್ ಅವರನ್ನು ಅಪಹರಿಸಿದ್ದರು. ಮಾವೋವಾದಿಗಳ ಕೈಯಿಂದ ಬಿಡುಗಡೆ ಆದ ನಂತರ ರಾಕೇಶ್ವರ್ ಅನ್ನು ಬಿಜಾಪುರ್ ಸಿಆರ್​ಪಿಎಫ್ ಶಿಬಿರಕ್ಕೆ ಕರೆತರಲಾಗಿದೆ

ನಕ್ಸಲರು ಮಂಗಳವಾರ (ಏಪ್ರಿಲ್ 6)  ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿ, ‘ಅಪಹೃತ ಸಿಆರ್​ಪಿಎಫ್ ಯೋಧನ ಬಿಡುಗಡೆಗಾಗಿ ಮಾತುಕತೆಗಾಗಿ ಮಧ್ಯವರ್ತಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಿ’ ಎಂದು ಹೇಳಿದ್ದರು. ಆದಾಗ್ಯೂ,  ಸರ್ಕಾರ ಮಧ್ಯವರ್ತಿಗಳನ್ನು ಮಾತುಕತೆಗಾಗಿ ಬಿಟ್ಟಿತ್ತೇ ಎಂಬುದರ ಬಗ್ಗೆಯಾಗಲೀ, ನಕ್ಸಲರು ಯಾವ ರೀತಿಯ ಬೇಡಿಕೆ ಒಡ್ಡಿ ಸಿಂಗ್ ಅವರನ್ನು ಬಿಡುಗಡೆಗೊಳಿಸಿದ್ದಾರೆ ಎಂಬುದರ ಬಗ್ಗೆಯಾಗಲೀ  ಸ್ಷಷ್ಟ ಮಾಹಿತಿ ಈವರೆಗೆ ಲಭಿಸಿಲ್ಲ.

ಇದು ನನ್ನ ಜೀವನದ ಅತೀ ಖುಷಿಯ ಕ್ಷಣ. ಈ ರೀತಿ ಹಿಂದಿರುಗಿ ಬಂದಿದ್ದಕ್ಕೆ ನಾನು ಆಭಾರಿ ಆಗಿರುತ್ತೇನೆ. ಸರ್ಕಾರಕ್ಕೆ ಧನ್ಯವಾದಗಳು. ಅವರು ಸುರಕ್ಷಿತವಾಗಿ  ಬರುತ್ತಾರೆ ಎಂದು ನನಗೆ ಅಧಿಕೃತ ಸಂದೇಶ ಬಂದಿತ್ತು. ಅವರ ಆರೋಗ್ಯ  ಚೆನ್ನಾಗಿದೆ ಎಂದು ರಾಕೇಶ್ವರ್ ಸಿಂಗ್ ಅವರ ಪತ್ನಿ ಮೀನು ಹೇಳಿದ್ದಾರೆ.

ರಾಕೇಶ್ವರ್ ಅವರನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಅವರನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗುವುದು ಎಂದು ಬಿಜಾಪುರ್ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಕಳೆದ ಶನಿವಾರ (ಏಪ್ರಿಲ್ 3) ಸಿಆರ್​ಪಿಎಫ್​ನ ಕೋಬ್ರಾ ಘಟಕ, ಜಿಲ್ಲಾ ಮೀಸಲು ಪಡೆ, ವಿಶೇಷ ಕಾರ್ಯಪಡೆಯ ಸಿಬ್ಬಂದಿಯ ಮೇಲೆ ನಕ್ಸಲರು ಹೊಂಚುದಾಳಿ ನಡೆಸಿದ್ದರು. ಈ ವೇಳೆ ಸುಮಾರು ಐದು ತಾಸು ಗುಂಡಿನ ಚಕಮಕಿ ನಡೆದಿತ್ತು. ಭದ್ರತಾಪಡೆಗಳಿಗೆ ಸೇರಿದ 22 ಮಂದಿ ಹುತಾತ್ಮರಾಗಿದ್ದರು. ಈ ವೇಳೆ ಸುಮಾರು 20 ಮಾವೋವಾದಿಗಳನ್ನು ಕೊಲ್ಲಲಾಗಿದೆ ಎಂದು ಭದ್ರತಾ ಪಡೆಗಳ ಸಿಬ್ಬಂದಿ ಹೇಳಿದ್ದರು. ಆದರೆ ಈ ಹೇಳಿಕೆಯನ್ನು ನಿರಾಕರಿಸಿದ್ದ ನಕ್ಸಲರು ತಮ್ಮ ಪಾಳಯದಲ್ಲಿ ಕೇವಲ ನಾಲ್ವರು ಸತ್ತಿದ್ದಾರೆ ಎಂದು ಹೇಳಿದ್ದರು.

ಶೂಟ್​ಔಟ್​ ವೇಳೆ ಸಿಆರ್​ಪಿಎಫ್​ ತುಕಡಿಯಲ್ಲಿದ್ದ ಜಮ್ಮು ಮೂಲದ ರಾಕೇಶ್ವರ್ ಸಿಂಗ್ ಮಾನ್ಹಸ್ ನಂತರ ನಾಪತ್ತೆಯಾಗಿದ್ದರು. ಅವರನ್ನು ನಕ್ಸಲರು ಅಪಹರಿಸಿರಬಹುದು ಎಂದು ಶಂಕಿಸಲಾಗಿತ್ತು. ನಾಪತ್ತೆಯಾಗಿದ್ದ ಯೋಧನ ಚಿತ್ರ ಏಪ್ರಿಲ್ 7ರಂದು ಮುಂಜಾನೆ 11.27ಕ್ಕೆ ಸ್ಥಳೀಯ ಪತ್ರಕರ್ತರಿಗೆ ಸಿಕ್ಕಿದೆ. ಮಾವೋವಾದಿಗಳ ನಾಯಕ ವಿಕಲ್ಪ ಈ ಫೋಟೊ ಕಳಿಸಿದ್ದಾರೆ ಎಂದು ಸುಕ್ಮದ ಪತ್ರಕರ್ತ ರಾಜಾ ರಾಥೋಡ್ ತಿಳಿಸಿದ್ದಾರೆ.

ಇದನ್ನೂ ಓದಿ: ನಕ್ಸಲರಿಂದ ಅಪಹೃತ ಕಮಾಂಡೊ ರಾಕೇಶ್ವರ್ ಸಿಂಗ್ ಚಿತ್ರ ಬಿಡುಗಡೆ

(Chhattisgarh Naxal Attack crpf jawan Rakeshwar Singh Manhas captured by naxals released)

Published On - 6:32 pm, Thu, 8 April 21

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ