AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್​ಗಢದಲ್ಲಿ ಮೊಬೈಲ್​ ಟವರ್​ ಸುಟ್ಟು ಹಾಕಿದ ನಕ್ಸಲರು

ಛತ್ತೀಸ್​ಗಢದಲ್ಲಿ ನಕ್ಸಲರು ಎರಡು ಮೊಬೈಲ್​ ಟವರ್​ಗಳನ್ನು ಸುಟ್ಟು ಭಸ್ಮ ಮಾಡಿದ್ದಾರೆ. ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಶನಿವಾರ ಮುಕ್ತಾಯಗೊಂಡಿದೆ. ಕಳೆದ ಒಂದು ವಾರದ ಹಿಂದಷ್ಟೇ ಇದೇ ಪ್ರದೇಶದಲ್ಲಿ 30 ಮಂದಿ ನಕ್ಸಲರು ಶರಣಾಗಿದ್ದರು.

ಛತ್ತೀಸ್​ಗಢದಲ್ಲಿ ಮೊಬೈಲ್​ ಟವರ್​ ಸುಟ್ಟು ಹಾಕಿದ ನಕ್ಸಲರು
ನಯನಾ ರಾಜೀವ್
|

Updated on: Jun 02, 2024 | 10:35 AM

Share

ಛತ್ತೀಸ್​ಗಢದಲ್ಲಿ ಮತ್ತೆ ನಕ್ಸಲರ ಹಾವಳಿ ಮುಂದುವರೆದಿದ್ದು, ಇಂದು ಮೊಬೈಲ್​ ಟವರ್​ ಸುಟ್ಟು ಭಸ್ಮ ಮಾಡಿದ್ದಾರೆ. ಬಿಜಾಪುರದ ಎರಡು ಗ್ರಾಮಗಳಲ್ಲಿ ಅಳವಡಿಸಿದ್ದ ಎರಡು ಮೊಬೈಲ್ ಟವರ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಧೌಡೈ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ, ನಾರಾಯಣಪುರ ಪೊಲೀಸ್​ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ಮಾತನಾಡಿ, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.

ಇದಕ್ಕೂ ಮುನ್ನ ಮೇ 27ರಂದು ನಾರಾಯಣಪುರದ ಛೋಟೆಡೊಂಗರ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಎರಡು ಮಬೈಲ್​ ಟವರ್​ಗಳಿಗೆ ಬೆಂಕಿ ಹಚ್ಚಿದ್ದರು. ಮೇ 25ರಂದು ಬಿಜಾಪುರದ ಜಪ್ಪೆಮಾರ್ಕ್​ ಮತ್ತು ಕಮ್ಕನಾರ್​ ಅರಣ್ಯದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್​ಕೌಂಟರ್​ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದರು.

ಛತ್ತೀಸ್​ಗಢ: ಭದ್ರತಾ ಪಡೆದ ಮುಂದೆ ಶರಣಾದ 30 ನಕ್ಸಲರು ಛತ್ತೀಸ್​ಗಢದ ಬಿಜಾಪುರದಲ್ಲಿ 30 ನಕ್ಸಲರು(Naxals) ಭದ್ರತಾಪಡೆಗಳ ಮುಂದೆ ಶರಣಾಗಿದ್ದಾರೆ. ಈ ಪೈಕಿ 9 ನಕ್ಸಲರ ತಲೆ ಮೇಲೆ 39 ಲಕ್ಷ ರೂ. ಇನಾಮು ಘೋಷಿಸಲಾಗಿತ್ತು. ಆದಿವಾಸಿಗಳ ಮೇಲಿನ ದೌರ್ಜನ್ಯಗಳು ಮತ್ತು ಮಾವೋವಾದದ ಪೊಳ್ಳು ಸಿದ್ದಾಂತದಿಂದ ನಿರಾಶಗೊಂಡಿದ್ದೇವೆ ಎಂದು ನಕ್ಸಲರು ಹೇಳಿದ್ದಾರೆ. ಛತ್ತೀಸ್​ಗಢ ಪೊಲೀಸ್​ ಹಾಗೂ ಸಿಆರ್​ಪಿಎಫ್​ನ ಹಿರಿಯ ಅಧಿಕಾರಿಗಳ ಮುಂದೆ ಶರಣಾದ ನಕ್ಸಲರಲ್ಲಿ ಆರು ಮಹಿಳೆಯರೂ ಇದ್ದಾರೆ.

ಮತ್ತಷ್ಟು ಓದಿ: ಚುನಾವಣೆ ಹೊತ್ತಲ್ಲಿ ಕರಾವಳಿಯಲ್ಲಿ ನಕ್ಸಲರ ಚಲನವಲನ: ಮನೆಗೆ ಬಂದು ಊಟ ಮಾಡಿದ ಶಂಕಿತರು

ಪ್ರಕರಣದ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು, ಶರಣಾದ 30 ನಕ್ಸಲೀಯರ ಪೈಕಿ ಮಿಟ್ಕಿ ಕಾಕೆಂ ಅಲಿಯಾಸ್ ಸರಿತಾ (35), ಮುರಿ ಮುಹಂದ ಅಲಿಯಾಸ್ ಸುಖಮತಿ (32) ಕೂಡ ಸೇರಿದ್ದಾರೆ. ಇಬ್ಬರ ತಲೆಯ ಮೇಲೆ ತಲಾ 8 ಲಕ್ಷ ರೂಪಾಯಿ ಬಹುಮಾನವಿದೆ. ಇತರ ನಕ್ಸಲೀಯರಾದ ರಜಿತಾ ವೆಟ್ಟಿ (24), ಕೊವಾಸಿ (24), ಆಯ್ತಾ ಸೋಧಿ (22) ಮತ್ತು ಸೀನು ಪದಂ (27) ಅವರ ತಲೆಯ ಮೇಲೆ ತಲಾ 5 ಲಕ್ಷ ರೂಪಾಯಿ ಬಹುಮಾನವಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಗಂಡನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ