AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛತ್ತೀಸ್​ಗಢದಲ್ಲಿ ಮೊಬೈಲ್​ ಟವರ್​ ಸುಟ್ಟು ಹಾಕಿದ ನಕ್ಸಲರು

ಛತ್ತೀಸ್​ಗಢದಲ್ಲಿ ನಕ್ಸಲರು ಎರಡು ಮೊಬೈಲ್​ ಟವರ್​ಗಳನ್ನು ಸುಟ್ಟು ಭಸ್ಮ ಮಾಡಿದ್ದಾರೆ. ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಶನಿವಾರ ಮುಕ್ತಾಯಗೊಂಡಿದೆ. ಕಳೆದ ಒಂದು ವಾರದ ಹಿಂದಷ್ಟೇ ಇದೇ ಪ್ರದೇಶದಲ್ಲಿ 30 ಮಂದಿ ನಕ್ಸಲರು ಶರಣಾಗಿದ್ದರು.

ಛತ್ತೀಸ್​ಗಢದಲ್ಲಿ ಮೊಬೈಲ್​ ಟವರ್​ ಸುಟ್ಟು ಹಾಕಿದ ನಕ್ಸಲರು
ನಯನಾ ರಾಜೀವ್
|

Updated on: Jun 02, 2024 | 10:35 AM

Share

ಛತ್ತೀಸ್​ಗಢದಲ್ಲಿ ಮತ್ತೆ ನಕ್ಸಲರ ಹಾವಳಿ ಮುಂದುವರೆದಿದ್ದು, ಇಂದು ಮೊಬೈಲ್​ ಟವರ್​ ಸುಟ್ಟು ಭಸ್ಮ ಮಾಡಿದ್ದಾರೆ. ಬಿಜಾಪುರದ ಎರಡು ಗ್ರಾಮಗಳಲ್ಲಿ ಅಳವಡಿಸಿದ್ದ ಎರಡು ಮೊಬೈಲ್ ಟವರ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಧೌಡೈ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ, ನಾರಾಯಣಪುರ ಪೊಲೀಸ್​ ವರಿಷ್ಠಾಧಿಕಾರಿ ಪ್ರಭಾತ್ ಕುಮಾರ್ ಮಾತನಾಡಿ, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.

ಇದಕ್ಕೂ ಮುನ್ನ ಮೇ 27ರಂದು ನಾರಾಯಣಪುರದ ಛೋಟೆಡೊಂಗರ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಎರಡು ಮಬೈಲ್​ ಟವರ್​ಗಳಿಗೆ ಬೆಂಕಿ ಹಚ್ಚಿದ್ದರು. ಮೇ 25ರಂದು ಬಿಜಾಪುರದ ಜಪ್ಪೆಮಾರ್ಕ್​ ಮತ್ತು ಕಮ್ಕನಾರ್​ ಅರಣ್ಯದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್​ಕೌಂಟರ್​ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದರು.

ಛತ್ತೀಸ್​ಗಢ: ಭದ್ರತಾ ಪಡೆದ ಮುಂದೆ ಶರಣಾದ 30 ನಕ್ಸಲರು ಛತ್ತೀಸ್​ಗಢದ ಬಿಜಾಪುರದಲ್ಲಿ 30 ನಕ್ಸಲರು(Naxals) ಭದ್ರತಾಪಡೆಗಳ ಮುಂದೆ ಶರಣಾಗಿದ್ದಾರೆ. ಈ ಪೈಕಿ 9 ನಕ್ಸಲರ ತಲೆ ಮೇಲೆ 39 ಲಕ್ಷ ರೂ. ಇನಾಮು ಘೋಷಿಸಲಾಗಿತ್ತು. ಆದಿವಾಸಿಗಳ ಮೇಲಿನ ದೌರ್ಜನ್ಯಗಳು ಮತ್ತು ಮಾವೋವಾದದ ಪೊಳ್ಳು ಸಿದ್ದಾಂತದಿಂದ ನಿರಾಶಗೊಂಡಿದ್ದೇವೆ ಎಂದು ನಕ್ಸಲರು ಹೇಳಿದ್ದಾರೆ. ಛತ್ತೀಸ್​ಗಢ ಪೊಲೀಸ್​ ಹಾಗೂ ಸಿಆರ್​ಪಿಎಫ್​ನ ಹಿರಿಯ ಅಧಿಕಾರಿಗಳ ಮುಂದೆ ಶರಣಾದ ನಕ್ಸಲರಲ್ಲಿ ಆರು ಮಹಿಳೆಯರೂ ಇದ್ದಾರೆ.

ಮತ್ತಷ್ಟು ಓದಿ: ಚುನಾವಣೆ ಹೊತ್ತಲ್ಲಿ ಕರಾವಳಿಯಲ್ಲಿ ನಕ್ಸಲರ ಚಲನವಲನ: ಮನೆಗೆ ಬಂದು ಊಟ ಮಾಡಿದ ಶಂಕಿತರು

ಪ್ರಕರಣದ ಕುರಿತು ಮಾಹಿತಿ ನೀಡಿದ ಅಧಿಕಾರಿಗಳು, ಶರಣಾದ 30 ನಕ್ಸಲೀಯರ ಪೈಕಿ ಮಿಟ್ಕಿ ಕಾಕೆಂ ಅಲಿಯಾಸ್ ಸರಿತಾ (35), ಮುರಿ ಮುಹಂದ ಅಲಿಯಾಸ್ ಸುಖಮತಿ (32) ಕೂಡ ಸೇರಿದ್ದಾರೆ. ಇಬ್ಬರ ತಲೆಯ ಮೇಲೆ ತಲಾ 8 ಲಕ್ಷ ರೂಪಾಯಿ ಬಹುಮಾನವಿದೆ. ಇತರ ನಕ್ಸಲೀಯರಾದ ರಜಿತಾ ವೆಟ್ಟಿ (24), ಕೊವಾಸಿ (24), ಆಯ್ತಾ ಸೋಧಿ (22) ಮತ್ತು ಸೀನು ಪದಂ (27) ಅವರ ತಲೆಯ ಮೇಲೆ ತಲಾ 5 ಲಕ್ಷ ರೂಪಾಯಿ ಬಹುಮಾನವಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ