AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂವರು ಮಾವೋವಾದಿ ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಛತ್ತೀಸ್​ಗಢದ ದಾಂತೇವಾಡ, ಸುಕ್ಮಾ ಗಡಿ ಪ್ರದೇಶದಲ್ಲಿರುವ ತುಮಕ್​ಪಾಲ್ ಮತ್ತು ಡಬ್ಬಾ ಕುನ್ನಾ ಗ್ರಾಮಗಳಲ್ಲಿ ಮೂವರು ಮಾವೋವಾದಿ ನಕ್ಸಲರನ್ನು ಭದ್ರತಾ ಪಡೆ ಹೊಡೆದುರುಳಿಸಿರುವಂತಹ ಘಟನೆ ನಡೆದಿದೆ. ನಕ್ಸಲರ ಬಳಿಯಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದು ಗುಂಡು ವಶಕ್ಕೆ ಪಡೆಯಲಾಗಿದೆ. ನಕ್ಸಲರ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ದಾಳಿ ನಡೆಸಿದೆ. 

ಮೂವರು ಮಾವೋವಾದಿ ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Dec 24, 2023 | 10:10 PM

Share

ಛತ್ತೀಸ್‌ಗಢ, ಡಿಸೆಂಬರ್​ 24: ಮೂವರು ಮಾವೋವಾದಿ ನಕ್ಸಲ (Maoist Naxals) ರನ್ನು ಭದ್ರತಾ ಪಡೆ ಹೊಡೆದುರುಳಿಸಿರುವಂತಹ ಘಟನೆ ಛತ್ತೀಸ್​ಗಢದ ದಾಂತೇವಾಡ, ಸುಕ್ಮಾ ಗಡಿ ಪ್ರದೇಶದಲ್ಲಿರುವ ತುಮಕ್​ಪಾಲ್ ಮತ್ತು ಡಬ್ಬಾ ಕುನ್ನಾ ಗ್ರಾಮಗಳಲ್ಲಿ ನಡೆದಿದೆ. ನಕ್ಸಲರ ಬಳಿಯಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದು ಗುಂಡು ವಶಕ್ಕೆ ಪಡೆಯಲಾಗಿದೆ. ನಕ್ಸಲರ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ದಾಳಿ ನಡೆಸಿದೆ.

ಕಾಟೇಕಲ್ಯಾಣ ಪೊಲೀಸ್ ಠಾಣಾ ವ್ಯಾಪ್ತಿಯ ಡಬ್ಬಾ ಕುನ್ನಾ ಗ್ರಾಮದ ಬಳಿಯ ಗುಡ್ಡದ ಮೇಲೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಸಂಜೆ 5:30 ರ ಸುಮಾರಿಗೆ ಕಾರ್ಯಾಚರಣೆಯಲ್ಲಿ ತೊಡಗಿದ್ದು, ಈ ವೇಳೆ ಮಾವೋವಾದಿಗಳನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸ್ ಮಹಾನಿರೀಕ್ಷಕ ಸುಂದರರಾಜ್ ಪಿ ಪಿಟಿಐಗೆ ತಿಳಿಸಿರುವುದಾಗಿ ವರದಿ ಆಗಿದೆ.

ತುಮಕ್​ಪಾಲ್ ಮತ್ತು ಡಬ್ಬಾ ಕುನ್ನಾ ಗ್ರಾಮಗಳ ಮಧ್ಯದ ಅರಣ್ಯ ಬೆಟ್ಟದಲ್ಲಿ ಭದ್ರತಾ ಪಡೆ ಮತ್ತು ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ಉಂಟಾಗಿದೆ. ಗುಂಡಿನ ದಾಳಿ ಬಳಿಕ ಸಮವಸ್ತ್ರ ಧರಿಸಿದ್ದ ಮೂವರು ಪುರುಷ ಮಾವೋವಾದಿಗಳ ಶವಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಐಜಿ ತಿಳಿಸಿದ್ದಾರೆ.

ದಾಂತೇವಾಡ ಎಸ್ಪಿ ಗೌರವ್ ರೈ ಹೇಳಿಕೆ ನೀಡಿದ್ದು, ದಾಂತೇವಾಡ ಸುಕ್ಮಾ ಗಡಿ ಪ್ರದೇಶದ ತುಮಕ್​ಪಾಲ್ ಮತ್ತು ಡಬ್ಬಾ ಕುನ್ನಾ ಗ್ರಾಮದಲ್ಲಿ ನಕ್ಸಲರು ಇರುವ ಬಗ್ಗೆ ನಮಗೆ ಮಾಹಿತಿ ಇತ್ತು. ನಂತರ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದರು. ನಕ್ಸಲರು ಗುಂಡಿನ ದಾಳಿ ನಡೆಸಿದ್ದಾರೆ. ಮೂವರು ನಕ್ಸಲರು ಹತರಾಗಿದ್ದಾರೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಹೆಚ್ಚಿನ ವಿವರನ್ನು ಕಲೆಹಾಕಲಾಗುತ್ತಿದೆ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:22 pm, Sun, 24 December 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!