AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳ ಭಾಗ್ಯ ಕರುಣಿಸುವ ಈ ದತ್ತು ಕೇಂದ್ರದಲ್ಲಿ, ಮಕ್ಕಳನ್ನು ನಡೆಸಿಕೊಳ್ಳುವ ರೀತಿಗೆ ಬೆಚ್ಚಿ ಬಿದ್ದ ಜನ

ಸಂತಾನ ಭಾಗ್ಯವಿಲ್ಲದವರಿಗೆ ಮಕ್ಕಳನ್ನು ಕರುಣಿಸುವ ದತ್ತು ಕೇಂದ್ರ(ಅನಾಥ ಮಕ್ಕಳ ಆಶ್ರಯ ಧಾಮ)ದಲ್ಲಿ ಮಕ್ಕಳ ಜತೆ ಕ್ರೂರ ಪ್ರಾಣಿಯಂತೆ ವರ್ತಿಸಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. ಅಲ್ಲಿಯ ನಿರ್ವಾಹಕಿ ಸೀಮಾ ದ್ವಿವೇದಿ ಮಗುವೊಂದನ್ನು ಥಳಿಸುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದ್ದು, ಜನರು ಛೀಮಾರಿ ಹಾಕುತ್ತಿದ್ದಾರೆ

ಮಕ್ಕಳ ಭಾಗ್ಯ ಕರುಣಿಸುವ ಈ ದತ್ತು ಕೇಂದ್ರದಲ್ಲಿ, ಮಕ್ಕಳನ್ನು ನಡೆಸಿಕೊಳ್ಳುವ ರೀತಿಗೆ ಬೆಚ್ಚಿ ಬಿದ್ದ ಜನ
ಮಕ್ಕಳ ದತ್ತು ಕೇಂದ್ರ
ನಯನಾ ರಾಜೀವ್
|

Updated on:Jun 05, 2023 | 12:50 PM

Share

ಸಂತಾನ ಭಾಗ್ಯವಿಲ್ಲದವರಿಗೆ ಮಕ್ಕಳನ್ನು ಕರುಣಿಸುವ ದತ್ತು ಕೇಂದ್ರ(ಅನಾಥ ಮಕ್ಕಳ ಆಶ್ರಯ ಧಾಮ)ದಲ್ಲಿ ಮಕ್ಕಳ ಜತೆ ಕ್ರೂರ ಪ್ರಾಣಿಯಂತೆ ವರ್ತಿಸಿರುವ ಘಟನೆ ಛತ್ತೀಸ್​ಗಢದಲ್ಲಿ ನಡೆದಿದೆ. ಅಲ್ಲಿಯ ನಿರ್ವಾಹಕಿ ಸೀಮಾ ದ್ವಿವೇದಿ ಮಗುವೊಂದನ್ನು ಥಳಿಸುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದ್ದು, ಜನರು ಛೀಮಾರಿ ಹಾಕುತ್ತಿದ್ದಾರೆ. ಎಷ್ಟೋ ಮಂದಿ ಮಕ್ಕಳಿಲ್ಲದೆ ಪರಿತಪಿಸುತ್ತಿದ್ದಾರೆ, ಇದರ ನಡುವೆ ಏನೂ ಅರಿಯದ ಮುಗ್ಧ ಜೀವಕ್ಕೆ ಥಳಿಸಿ ಚಿತ್ರಹಿಂಸೆ ನೀಡುವುದು ವಿಡಿಯೋದಲ್ಲಿ ನೋಡಬಹುದು. ಆಕೆ ಮಗುವಿನ ಕೂದಲನ್ನು ಹಿಡಿದು ಎತ್ತಿ ನೆಲದ ಮೇಲೆ ಎಸೆಯುತ್ತಾಳೆ. ಇದೀಗ ಸೀಮಾ ವಿರುದ್ಧ ಪ್ರಕರಣ ದಾಖಲಾಗಿದೆ.

ಮಗುವನ್ನು ನೆಲಕ್ಕೆ ಎಸೆದು ಬಳಿಕ ಕೈ ಹಿಡಿದು ಮೇಲಕ್ಕೆತ್ತಿ ಹಾಸಿಗೆಯ ಮೇಲೆ ಎಸೆದಿದ್ದಾಳೆ, ಎರಡು ಆಯಾಗಳು ಅಲ್ಲಿ ಇದ್ದರೂ ಕೂಡ ತಡೆಯುವ ಧೈರ್ಯವನ್ನು ಯಾರೂ ಮಾಡಿಲ್ಲ. ಈ ರೀತಿಯ ದತ್ತು ಕೇಂದ್ರಗಳಲ್ಲಿ ಮಕ್ಕಳು ಜೀವವನ್ನು ಬಿಗಿ ಹಿಡಿದುಕೊಂಡು ಬದುಕಬೇಕಾಗುತ್ತದೆ. 6 ವರ್ಷದೊಳಗಿನ ಮಕ್ಕಳನ್ನು ಈ ದತ್ತು ಕೇಂದ್ರದಲ್ಲಿ ಇರಿಸಲಾಗಿದೆ. ಆ ಮ್ಯಾನೇಜರ್​ಗೆ ಓರ್ವ ಗೆಳಯನಿದ್ದು ನಿತ್ಯವೂ ಆತನ ಅಲಲ್ಇಗೆ ಬರುತ್ತಾನೆ, ಆತನ ಜತೆಗೆ ಜಗಳವಾಡಿದಾಗಲೆಲ್ಲಾ ಆಕೆ ಕೋಪವನ್ನು ಮಕ್ಕಳ ಮೇಲೆ ತೀರಿಸಿಕೊಳ್ಳುತ್ತಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಈ ಮಕ್ಕಳಿಗೆ ಸಿಹಿತಿಂಡಿ, ಆಹಾರ, ಹಣ್ಣು, ಒಣ ಹಣ್ಣು, ನಗದು ನೀಡಿ ಹಲವು ಸಾಮಾಜಿಕ ಸಂಘಟನೆಗಳು ದತ್ತು ಸ್ವೀಕಾರ ಕೇಂದ್ರಕ್ಕೆ ತೆರಳುತ್ತವೆ. ಇದರಲ್ಲಿ ಶೇ.50ರಷ್ಟನ್ನು ಅವರೇ ಇಟ್ಟುಕೊಳ್ಳುತ್ತಾರೆ, ಮಕ್ಕಳ ವರೆಗೆ ತಲುಪುವುದೇ ಇಲ್ಲ. ಭಾವೀ ದತ್ತು ತಂದೆ-ತಾಯಂದಿರು ಕಾನೂನುಬದ್ಧವಾಗಿ ಒಂದು ಮಗುವಿನ ಜವಾಬ್ದಾರಿ, ಆ ಮಗುವಿನ ಹಕ್ಕುಗಳು, ಸವಲತ್ತುಗಳು, ಮತ್ತು ಜವಾಬ್ದಾರಿಗಳ ಸಹಿತ ತೆಗೆದುಕೊಳ್ಳುವ ಪ್ರಕ್ರಿಯೆಯನ್ನು ದತ್ತು ಸ್ವೀಕಾರ ಎನ್ನುತ್ತಾರೆ. ಕಾನೂನಿನ ಔಪಚಾರಿಕತೆಗಳು ಮುಗಿದ ಮೇಲೆ ಆ ಮಗು ಶಾಶ್ವತವಾಗಿ ತನ್ನ ಜೈವಿಕ ತಂದೆ-ತಾಯಂದಿರಿಂದ ಬೇರೆಗೊಂಡು, ತನ್ನ ದತ್ತು ತಂದೆ-ತಾಯಂದಿರ ಮಗು ಎಂದು ಕರೆಯಲ್ಪಡುತ್ತದೆ.

ನೀವು ಹಿಂದೂ, ಬೌದ್ಧ, ಜೈನ, ಅಥವಾ ಸಿಖ್ ಆಗಿದ್ದಲ್ಲಿ (ಸಾಮೂಹಿಕವಾಗಿ ಈ ಸಮುದಾಯಗಳನ್ನು ಕಾನೂನು “ಹಿಂದೂ” ಎಂದು ಪರಿಗಣಿಸುತ್ತದೆ), ಹಿಂದೂ ದತ್ತು ಸ್ವೀಕಾರ ಕಾನೂನು ಎಂದು ಕರೆಯಲ್ಪಡುವ “ಹಿಂದೂ ದತ್ತು ಸ್ವೀಕಾರ ಮತ್ತು ಜೀವನಾಂಶ ಕಾಯಿದೆ, 1956 ನಿಮಗೆ ಅನ್ವಯಿಸುತ್ತದೆ. ಈ ಕಾಯಿದೆ, ಹಿಂದೂ ಮಕ್ಕಳ ದತ್ತು ಸ್ವೀಕಾರವನ್ನು ನಿರ್ವಹಿಸುತ್ತದೆ. ನೀವು ಮುಸ್ಲಿಂ, ಕ್ರಿಶ್ಚಿಯನ್, ಪಾರ್ಸಿ, ಯಹೂದಿ, ಅಥವಾ ಪರಿಶಿಷ್ಟ ಪಂಗಡಗಳಿಗೆ ಸೇರಿದ್ದಲ್ಲಿ, ಈ ಕಾನೂನಿನಡಿ ದತ್ತು ಸ್ವೀಕಾರ ಮಾಡುವಂತಿಲ್ಲ.

ನೀವು ಧಾರ್ಮಿಕ ಕಾನೂನಿನಡಿ ದತ್ತು ಸ್ವೀಕಾರ ಮಾಡಲು ಇಚ್ಛಿಸದಿದ್ದಲ್ಲಿ/ಆಗದಿದ್ದಲ್ಲಿ, ಸಾರ್ವತ್ರಿಕ ದತ್ತು ಸ್ವೀಕಾರ ಕಾನೂನಾದ “ಬಾಲಾಪರಾಧಿ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆ, ೨೦೧೫” ರ ಅಡಿಯಲ್ಲಿ ದತ್ತು ಸ್ವೀಕಾರ ಮಾಡಬಹುದು. ಈ ಕಾನೂನಿನಡಿ ಯಾವುದೇ ಧರ್ಮಕ್ಕೆ ಸೇರಿದ ವ್ಯಕ್ತಿ (ಹಿಂದೂ, ಪರಿಶಿಷ್ಟ ಪಂಗಡಗಳು, ಇತ್ಯಾದಿ ಸೇರಿದಂತೆ) ದತ್ತು ಸ್ವೀಕಾರ ಮಾಡಬಹುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:23 pm, Mon, 5 June 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ