AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮ್ಮಂತೆಯೇ ಬಟ್ಟೆ ತೊಟ್ಟು ಮದುವೆ ಮನೆಯಲ್ಲಿ ಭಾರಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಪುರುಷರ ವೇಷ ಕಳಚಿದ ಮಂಗಳಮುಖಿಯರು

ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ಮದುವೆ ಮನೆಯಲ್ಲಿ ಮಂಗಳಮುಖಿಯರಂತೆ ವೇಷ ಧರಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಪುರುಷರ ಗ್ಯಾಂಗ್ ಗ್ರಾಮಸ್ಥರಿಂದ ಸಿಕ್ಕಿಬಿದ್ದಿದೆ. ಅತಿಯಾದ ಹಣ ಕೇಳಿದಾಗ ಸಂಶಯಗೊಂಡ ಗ್ರಾಮಸ್ಥರು ನಿಜವಾದ ಮಂಗಳಮುಖಿಯರನ್ನು ಕರೆಸಿ ಪರಿಶೀಲಿಸಿದಾಗ ಅವರ ವಂಚನೆ ಬಯಲಾಯಿತು. ಇದರಿಂದ ಆಕ್ರೋಶಗೊಂಡ ಮಹಿಳೆಯರು ಮತ್ತು ಗ್ರಾಮಸ್ಥರು ಅವರನ್ನು ಥಳಿಸಿ, ಮುಖವಾಡ ಕಳಚಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಇಂತಹ ವಂಚಕರ ಬಗ್ಗೆ ಜಾಗೃತಿ ಮೂಡಿಸಿದೆ.

ತಮ್ಮಂತೆಯೇ ಬಟ್ಟೆ ತೊಟ್ಟು ಮದುವೆ ಮನೆಯಲ್ಲಿ ಭಾರಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಪುರುಷರ ವೇಷ ಕಳಚಿದ ಮಂಗಳಮುಖಿಯರು
ಯುವಕರುImage Credit source: Free Press Journal
ನಯನಾ ರಾಜೀವ್
|

Updated on: Jun 09, 2026 | 7:54 AM

Share

ಛಿಂದ್ವಾರಾ, ಜೂನ್ 09: ಮದುವೆ ಸಮಾರಂಭಗಳಲ್ಲಿ ನವ ಜೋಡಿ ಹರಸಿ ಅವರು ಕೊಟ್ಟಷ್ಟು ಹಣವನ್ನು ಪಡೆದು ಹೋಗುವ ಮಂಗಳಮುಖಿ(Transgenders)ಯರು ಒಂದು ಕಡೆಯಾದರೆ, ಇತ್ತ ಪುರುಷರು ಮಂಗಳಮುಖಿಯರಂತೆ ವೇಷ ತೊಟ್ಟು ಮದುವೆ ಮನೆಯಲ್ಲಿ ಭಾರಿ ಹಣಕ್ಕೆ ಬೇಡಿಕೆ ಇಡುತ್ತಿದ್ದ ಗುಂಪು ಇನ್ನೊಂದು ಕಡೆ. ಈ ಗುಂಪನ್ನು ಜನರು ಹಿಗ್ಗಾಮುಗ್ಗ ಥಳಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮದುವೆ ಹಾಗೂ ಇತರ ಮಂಗಳಕರ ಸಮಾರಂಭಗಳ ಸಂದರ್ಭದಲ್ಲಿ ಹಣದ ಹೆಸರಿನಲ್ಲಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ನಕಲಿ ಗ್ಯಾಂಗ್ ಒಂದನ್ನು ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯ ನಾಗರಿಕರು ಅತ್ಯಂತ ಜಾಣಾಕ್ಷತನದಿಂದ ಪತ್ತೆಹಚ್ಚಿದ್ದಾರೆ. ಜಿಲ್ಲೆಯ ಪರಸಿಯಾ ಪ್ರದೇಶದ ದರ್ಬಾಯ್ ಗ್ರಾಮದಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಮಂಗಳಮುಖಿಯರಂತೆ ವೇಷ ಧರಿಸಿ ಭಾರಿ ಮೊತ್ತದ ಹಣಕ್ಕೆ ಬೇಡಿಕೆ ಇಡುತ್ತಿದ್ದ ಯುವಕರ ಅಸಲಿ ಮುಖವಾಡವನ್ನು ಸ್ಥಳೀಯರು ಬಯಲಿಗೆಳೆದಿದ್ದಾರೆ.

ಈ ಘಟನೆಯ ವಿಡಿಯೋ ಪ್ರಸ್ತುತ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಇಂತಹ ವಂಚಕರ ಬಗ್ಗೆ ಜಾಗೃತಿ ಮೂಡಿಸುತ್ತಿದೆ.

ಅನುಮಾನ ಮೂಡಿಸಿದ ಅತಿಯಾದ ಬೇಡಿಕೆ, ಬಯಲಾಯ್ತು ವಂಚನೆ ದರ್ಬಾಯ್ ಗ್ರಾಮದಲ್ಲಿ ವೈಭವದ ಮದುವೆ ಸಮಾರಂಭ ನಡೆಯುತ್ತಿದ್ದಾಗ, ಮಂಗಳಮುಖಿಯರಂತೆ ಉಡುಪು, ಮೇಕಪ್ ಮಾಡಿಕೊಂಡ ಪುರುಷರು ವಧು-ವರರ ಕುಟುಂಬಸ್ಥರ ಬಳಿ ದೊಡ್ಡ ಮೊತ್ತದ ಹಣವನ್ನು ನೀಡುವಂತೆ ಪಟ್ಟು ಹಿಡಿದರು. ಆದರೆ, ಅವರ ವರ್ತನೆ ಮತ್ತು ಅತಿಯಾದ ಒತ್ತಾಯವು ಅಲ್ಲಿದ್ದ ಗ್ರಾಮಸ್ಥರಲ್ಲಿ ತೀವ್ರ ಅನುಮಾನವನ್ನು ಹುಟ್ಟುಹಾಕಿತು.

ಮತ್ತಷ್ಟು ಓದಿ: ಅವನ ಸಹವಾಸ ಬೇಡ ಅಂದ್ರೂ ಕೇಳಿಲ್ಲ: ಪ್ರಿಯಕರನ ಅಸಲಿಮುಖ ಬಿಚ್ಚಿಟ್ಟ ಮಂಗಳಮುಖಿ

ಗ್ರಾಮಸ್ಥರು ತಕ್ಷಣವೇ ಸ್ಥಳೀಯ ಮಂಗಳಮುಖಿಯರ ಸಮುದಾಯದ ಮುಖಂಡರಿಗೆ ಫೋನ್ ಮೂಲಕ ಮಾಹಿತಿ ನೀಡಿ ಸ್ಥಳಕ್ಕೆ ಕರೆಸಿಕೊಂಡರು. ಸ್ಥಳಕ್ಕೆ ಬಂದ ತೃತೀಯ ಲಿಂಗಿ ಸಮುದಾಯದ ಸದಸ್ಯರು ಈ ಅಪರಿಚಿತರ ಗುರುತನ್ನು ಪರಿಶೀಲಿಸಿದಾಗ, ಅವರು ಮಂಗಳಮುಖಿಯರಲ್ಲ ಬದಲಿಗೆ ಹಣದ ಆಸೆಗೆ ಸೀರೆ ಉಟ್ಟು ವೇಷ ಧರಿಸಿದ್ದ ಯುವಕರು ಎಂಬ ಆಘಾತಕಾರಿ ಸತ್ಯ ಬಹಿರಂಗವಾಯಿತು.

ವಿಡಿಯೋ

ಸ್ಥಳದಲ್ಲೇ ತರಾಟೆಗೆ ತಗೆದುಕೊಂಡ ಮಹಿಳೆಯರು ವಂಚನೆ ಸಂಪೂರ್ಣವಾಗಿ ಜಗಜ್ಜಾಹೀರಾಗುತ್ತಿದ್ದಂತೆ ಮದುವೆ ಮನೆಯಲ್ಲಿದ್ದ ಮಹಿಳೆಯರು ಮತ್ತು ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಧಾರ್ಮಿಕ ನಂಬಿಕೆ ಹಾಗೂ ಸಾಂಪ್ರದಾಯಿಕ ಭಾವನೆಗಳನ್ನು ದುರುಪಯೋಗಪಡಿಸಿಕೊಂಡಿದ್ದಕ್ಕಾಗಿ ಮಹಿಳೆಯರು ಆ ನಕಲಿ ವ್ಯಕ್ತಿಗಳಿಗೆ ಕಪಾಳಮೋಕ್ಷ ಮಾಡಿ, ಅವರ ಮುಖವಾಡ ಮತ್ತು ವೇಷಭೂಷಣಗಳನ್ನು ಕಳಚಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಪಕ್ಕದಲ್ಲಿದ್ದವರು ಇಡೀ ಘಟನೆಯನ್ನು ತಮ್ಮ ಮೊಬೈಲ್‌ಗಳಲ್ಲಿ ಸೆರೆಹಿಡಿದಿದ್ದು, ಸಮಾಜಕ್ಕೆ ವಂಚಿಸುವ ಇಂತಹ ಗ್ಯಾಂಗ್‌ಗಳ ವಿರುದ್ಧ ಜಾಗರೂಕರಾಗಿರಲು ಈ ವಿಡಿಯೋ ನೆರವಾಗುತ್ತಿದೆ.

ಸ್ಥಳೀಯ ನಿವಾಸಿಗಳ ಪ್ರಕಾರ, ಈ ನಕಲಿ ಗ್ಯಾಂಗ್ ಈ ಹಿಂದೆಯೂ ಜಿಲ್ಲೆಯ ಹಲವಾರು ಮದುವೆಗಳು, ಮಗುವಿನ ಜನನ ಹಾಗೂ ಗೃಹಪ್ರವೇಶದಂತಹ ಆಚರಣೆಗಳಿಗೆ ಮಂಗಳಮುಖಿಯರಂತೆ ನಟಿಸುತ್ತಾ ನುಗ್ಗಿ, ಅಮಾಯಕ ಕುಟುಂಬಗಳಿಂದ ಸಾವಿರಾರು ರೂಪಾಯಿಗಳನ್ನು ದೋಚುತ್ತಿತ್ತು ಎನ್ನುವ ಮಾಹಿತಿ ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು
ದಿಲೀಪ್ ರಾಜ್​ ನಿಧನ ಹೊಂದಿ ತಿಂಗಳು ಕಳೆದರೂ ಕಡಿಮೆ ಆಗಿಲ್ಲ ಕಣ್ಣೀರು