Sign In

By signing in or creating an account, you agree with Associated Broadcasting Company's Terms & Conditions and Privacy Policy.

Chhota Rajan: ನೆಟ್‌ಫ್ಲಿಕ್ಸ್ ವೆಬ್ ಸೀರೀಸ್ ‘ಸ್ಕೂಪ್’ ತಡೆಗೆ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಛೋಟಾ ರಾಜನ್

ಗ್ಯಾಂಗ್​​​​ಸ್ಟರ್​ ರಾಜೇಂದ್ರ ನಿಕಾಲ್ಜೆ ಅಲಿಯಾಸ್ ಛೋಟಾ ರಾಜನ್ ಅವರ ವ್ಯಕ್ತಿ ಚರಿತ್ರೆಗೆ ಸಂಬಂಧಿಸಿದಂತೆ ಜೂನ್ 2 ರಂದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿರುವ ವೆಬ್ ಸರಣಿ "ಸ್ಕೂಪ್" ಬಿಡುಗಡೆಗೆ ತಡೆಯಾಜ್ಞೆ ಕೋರಿ ಗುರುವಾರ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

Chhota Rajan: ನೆಟ್‌ಫ್ಲಿಕ್ಸ್ ವೆಬ್ ಸೀರೀಸ್ 'ಸ್ಕೂಪ್' ತಡೆಗೆ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಛೋಟಾ ರಾಜನ್
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jun 02, 2023 | 11:20 AM

ದೆಹಲಿ: ಜೈಲಿನಲ್ಲಿರುವ ಗ್ಯಾಂಗ್​​​​ಸ್ಟರ್​ ರಾಜೇಂದ್ರ ನಿಕಾಲ್ಜೆ ಅಲಿಯಾಸ್ ಛೋಟಾ ರಾಜನ್ (Chhota Rajan) ಅವರ ವ್ಯಕ್ತಿ ಚರಿತ್ರೆಗೆ ಸಂಬಂಧಿಸಿದಂತೆ ಜೂನ್ 2 ರಂದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿರುವ ವೆಬ್ ಸರಣಿ “ಸ್ಕೂಪ್” ಬಿಡುಗಡೆಗೆ ತಡೆಯಾಜ್ಞೆ ಕೋರಿ ಗುರುವಾರ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಜೊತೆಗೆ ಟ್ರೇಲರ್​​​ನ್ನು ತೆಗೆದುಹಾಕಲು ನ್ಯಾಯಾಲಯ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದ್ದಾರೆ. ಪ್ರಸ್ತುತ ರಾಷ್ಟ್ರ ರಾಜಧಾನಿಯ ತಿಹಾರ್ ಜೈಲಿನಲ್ಲಿರುವ ಛೋಟಾ ರಾಜನ್, ತನ್ನ ಪೂರ್ವಾನುಮತಿ ಪಡೆಯದೆ ತನ್ನ ವ್ಯಕ್ತಿತ್ವದ ಬಗ್ಗೆ ಬರೆಯುವುದು ಅಥವಾ ಚಲನಚಿತ್ರ ಮಾಡುವುದು ಅಥವಾ ದುರ್ಬಳಕೆ ಮಾಡುವುದು ತನ್ನ ವ್ಯಕ್ತಿತ್ವದ ಹಕ್ಕುಗಳ ಉಲ್ಲಂಘನೆ ಮತ್ತು ಮಾನನಷ್ಟವಾಗಿದೆ ಎಂದು ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿ ಮಾಡಲಾಗಿದೆ.

ಭಾರತಕ್ಕೆ ಹಸ್ತಾಂತರಿಸಲ್ಪಟ್ಟಿರುವ, ಈಗಾಗಲೇ ಜೈಲಿನಲ್ಲಿರುವ ಗ್ಯಾಂಗ್​​​​ಸ್ಟರ್ ಛೋಟಾ ರಾಜನ್, ತನ್ನ ವ್ಯಕ್ತಿತ್ವಕ್ಕೆ ಧಕ್ಕೆ ತರುವ ವೆಬ್ ಸರಣಿಯ ತಯಾರಕರನ್ನು ನಿರ್ಬಂಧಿಸುವಂತೆ ತಡೆಯಾಜ್ಞೆಯನ್ನು ಕೋರಿದ್ದಾನೆ. ಈಗಾಗಲೇ ಟ್ರೇಲರ್​​ನ್ನು ಪ್ರಸಾರ ಮಾಡುವ ಮೂಲಕ ವೆಬ್ ಸರಣಿಯ ತಯಾರಕರು ಗಳಿಸಿದ ಹಣವನ್ನು ವೆಬ್ ಸರಣಿಯ ತಯಾರಕರು 1 ಕೋಟಿ ರೂ, ನಂತೆ ನೀಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: Chhota Rajan: ಭೂಗತ ಪಾತಕಿ ಛೋಟಾ ರಾಜನ್​ ಏಮ್ಸ್​​ಗೆ ದಾಖಲು; ಜಾಮೀನು ನೀಡಬೇಡಿ ಎಂದು ಸಿಬಿಐನಿಂದ ಅರ್ಜಿ

ಛೋಟಾ ರಾಜನ್ ಅವರು ಹೈಕೋರ್ಟ್‌ನಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ, ಅವರ ಹೆಸರು, ವ್ಯಂಗ್ಯಚಿತ್ರ, ಚಿತ್ರ ಮತ್ತು ಯಾವುದೇ ಇತರ ನೇರ/ಪರೋಕ್ಷ ಉಲ್ಲೇಖಗಳನ್ನು ಒಳಗೊಂಡಂತೆ ಅವರ ವ್ಯಕ್ತಿತ್ವದ ಬಳಕೆಗೆ ಅವರ ಒಪ್ಪಿಗೆಯಿಲ್ಲದೆ ಮಾಡಿರುವುದು ಅವರ ವ್ಯಕ್ತಿತ್ವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಹೇಳಿದೆ. ಇದು ಮಾನಹಾನಿ ಎಂದು ಹೇಳಲಾಗಿದೆ.

ಆರು ಸಂಚಿಕೆಗಳ ನೆಟ್‌ಫ್ಲಿಕ್ಸ್ ವೆಬ್ ಸರಣಿ ಸ್ಕೂಪ್ 2019ರಲ್ಲಿ ಬಿಡುಗಡೆಯಾದ ಪತ್ರಕರ್ತೆ ಜಿಗ್ನಾ ವೋರಾ ಅವರ ಜೈಲು ಆತ್ಮಚರಿತ್ರೆ ಬಿಹೈಂಡ್ ಬಾರ್ಸ್ ಇನ್ ಬೈಕುಲ್ಲಾ, ಮೈ ಡೇಸ್ ಇನ್ ಪ್ರಿಸನ್​​​ನಿಂದ ಈ ಚಿತ್ರವು ಪ್ರೇರಿತವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ