20 ವರ್ಷಗಳ ಬಳಿಕ ಛೋಟಾ ರಾಜನ್​ ಗ್ಯಾಂಗ್​ನ ಪ್ರಸಾದ್ ಪೂಜಾರಿಯನ್ನು ಗಡಿಪಾರು ಮಾಡಿದ ಚೀನಾ

ಒಂದು ಕಾಲದಲ್ಲಿ ಛೋಟಾ ರಾಜನ್ ಗ್ಯಾಂಗ್‌ಗೆ ಸಹಾಯಕನಾಗಿ ಕೆಲಸ ಮಾಡಿದ್ದ ಗ್ಯಾಂಗ್‌ಸ್ಟರ್ ಪ್ರಸಾದ್ ಪೂಜಾರಿಯನ್ನು 20 ವರ್ಷಗಳ ನಂತರ ಚೀನಾದಿಂದ ಮುಂಬೈಗೆ ಗಡೀಪಾರು ಮಾಡಲಾಯಿತು. ಮುಂಬೈ ಪೊಲೀಸರು ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆತನನ್ನು ವಿಚಾರಣೆ ನಡೆಸಲಿದ್ದಾರೆ.

20 ವರ್ಷಗಳ ಬಳಿಕ ಛೋಟಾ ರಾಜನ್​ ಗ್ಯಾಂಗ್​ನ ಪ್ರಸಾದ್ ಪೂಜಾರಿಯನ್ನು ಗಡಿಪಾರು ಮಾಡಿದ ಚೀನಾ
ಪ್ರಸಾದ್ ಪೂಜಾರಿ
Follow us
|

Updated on: Mar 24, 2024 | 8:20 AM

ಭೂಗತ ಪಾತಕಿ ಛೋಟಾ ರಾಜನ್(Chhota Rajan) ಆಪ್ತ ಪ್ರಸಾದ್​ ಪೂಜಾರಿಯನ್ನು 20 ವರ್ಷಗಳ ಬಳಿಕ ಚೀನಾವು ಮುಂಬೈಗೆ ಗಡಿಪಾರು ಮಾಡಿದೆ. ಪ್ರಸಾದ್ ಪೂಜಾರಿ ಅಲಿಯಾಸ್ ಸುಭಾಷ್ ವಿಠ್ಠಲ್ ನನ್ನು ಚೀನಾದಿಂದ ಮುಂಬೈಗೆ ಗಡಿಪಾರು ಮಾಡುವುದನ್ನು ಮುಂಬೈ ಪೊಲೀಸ್ ತಂಡ ಶನಿವಾರ ಖಚಿತಪಡಿಸಿದ್ದು, ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆತನನ್ನು ವಿಚಾರಣೆ ನಡೆಸಲಿದೆ. ಈತ ಛೋಟಾ ರಾಜನ್ ಗ್ಯಾಂಗ್‌ನೊಂದಿಗೆ ಸಂಪರ್ಕ ಹೊಂದಿದ್ದು, ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಪೂಜಾರಿ (44) ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಪತ್ನಿಯೊಂದಿಗೆ ಚೀನಾದಲ್ಲಿ ನೆಲೆಸಿದ್ದ. ಕ್ರೈಂ ಬ್ರಾಂಚ್ ಮತ್ತು ಆಂಟಿ-ಎಕ್ಸ್‌ಟಾರ್ಶನ್ ಸೆಲ್ (ಎಇಸಿ) ಕೆಲವು ವರ್ಷಗಳಿಂದ ಆತನ ಜಾಡು ಹಿಡಿದಿತ್ತು. ಮೂಲತಃ ಕರ್ನಾಟಕದ ಉಡುಪಿಯವನಾದ ಪೂಜಾರಿ ನವಿ ಮುಂಬೈನ ವಾಶಿ ಮತ್ತು ಮುಂಬೈನ ವಿಕ್ರೋಲಿಯಲ್ಲಿ ಆತನ ಪೋಷಕರು ಮತ್ತು ಇತರ ಕುಟುಂಬ ಸದಸ್ಯರೊಂದಿಗೆ ವಾಸಿಸುತ್ತಿದ್ದರು.

ಪೂಜಾರಿಯು ಆರಂಭದಲ್ಲಿ ಕುಮಾರ್ ಪಿಳ್ಳೈ ಗ್ಯಾಂಗ್‌ನೊಂದಿಗೆ ಕೆಲಸ ಮಾಡಲು ಪ್ರಾರಂಭಿಸಿದ್ದ, ನಂತರ ತನ್ನ ಸ್ವಂತ ಗ್ಯಾಂಗ್ ಅನ್ನು ಪ್ರಾರಂಭಿಸುವ ಮೊದಲು ಛೋಟಾ ರಾಜನ್‌ನ ಗ್ಯಾಂಗ್‌ಗೆ ಸೇರಿಕೊಂಡಿದ್ದ.

ಮತ್ತಷ್ಟು ಓದಿ: Chhota Rajan: ಭೂಗತ ಪಾತಕಿ ಛೋಟಾ ರಾಜನ್​ ಏಮ್ಸ್​​ಗೆ ದಾಖಲು; ಜಾಮೀನು ನೀಡಬೇಡಿ ಎಂದು ಸಿಬಿಐನಿಂದ ಅರ್ಜಿ

ಪೂಜಾರಿ ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದಾನೆ, ನಮ್ಮ ತಂಡವು ಅವನನ್ನು ಬಂಧಿಸಿ ಗಡೀಪಾರು ಮಾಡುವ ಮೂಲಕ ಬೆಳಗ್ಗೆ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತಂದರು ಎಂದು ಪೊಲೀಸರು ತಿಳಿಸಿದ್ದಾರೆ. ಆತ 2005ರಲ್ಲಿ ಭಾರತವನ್ನು ತೊರೆದಿದ್ದ, ಆತನ ವಿರುದ್ಧ ರೆಡ್ ಕಾರ್ನರ್ ನೋಟಿಸ್ ನೀಡಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು