AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

20 ವರ್ಷಗಳ ಬಳಿಕ ಛೋಟಾ ರಾಜನ್​ ಗ್ಯಾಂಗ್​ನ ಪ್ರಸಾದ್ ಪೂಜಾರಿಯನ್ನು ಗಡಿಪಾರು ಮಾಡಿದ ಚೀನಾ

ಒಂದು ಕಾಲದಲ್ಲಿ ಛೋಟಾ ರಾಜನ್ ಗ್ಯಾಂಗ್‌ಗೆ ಸಹಾಯಕನಾಗಿ ಕೆಲಸ ಮಾಡಿದ್ದ ಗ್ಯಾಂಗ್‌ಸ್ಟರ್ ಪ್ರಸಾದ್ ಪೂಜಾರಿಯನ್ನು 20 ವರ್ಷಗಳ ನಂತರ ಚೀನಾದಿಂದ ಮುಂಬೈಗೆ ಗಡೀಪಾರು ಮಾಡಲಾಯಿತು. ಮುಂಬೈ ಪೊಲೀಸರು ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆತನನ್ನು ವಿಚಾರಣೆ ನಡೆಸಲಿದ್ದಾರೆ.

20 ವರ್ಷಗಳ ಬಳಿಕ ಛೋಟಾ ರಾಜನ್​ ಗ್ಯಾಂಗ್​ನ ಪ್ರಸಾದ್ ಪೂಜಾರಿಯನ್ನು ಗಡಿಪಾರು ಮಾಡಿದ ಚೀನಾ
ಪ್ರಸಾದ್ ಪೂಜಾರಿ
ನಯನಾ ರಾಜೀವ್
|

Updated on: Mar 24, 2024 | 8:20 AM

Share

ಭೂಗತ ಪಾತಕಿ ಛೋಟಾ ರಾಜನ್(Chhota Rajan) ಆಪ್ತ ಪ್ರಸಾದ್​ ಪೂಜಾರಿಯನ್ನು 20 ವರ್ಷಗಳ ಬಳಿಕ ಚೀನಾವು ಮುಂಬೈಗೆ ಗಡಿಪಾರು ಮಾಡಿದೆ. ಪ್ರಸಾದ್ ಪೂಜಾರಿ ಅಲಿಯಾಸ್ ಸುಭಾಷ್ ವಿಠ್ಠಲ್ ನನ್ನು ಚೀನಾದಿಂದ ಮುಂಬೈಗೆ ಗಡಿಪಾರು ಮಾಡುವುದನ್ನು ಮುಂಬೈ ಪೊಲೀಸ್ ತಂಡ ಶನಿವಾರ ಖಚಿತಪಡಿಸಿದ್ದು, ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆತನನ್ನು ವಿಚಾರಣೆ ನಡೆಸಲಿದೆ. ಈತ ಛೋಟಾ ರಾಜನ್ ಗ್ಯಾಂಗ್‌ನೊಂದಿಗೆ ಸಂಪರ್ಕ ಹೊಂದಿದ್ದು, ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಪೂಜಾರಿ (44) ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಪತ್ನಿಯೊಂದಿಗೆ ಚೀನಾದಲ್ಲಿ ನೆಲೆಸಿದ್ದ. ಕ್ರೈಂ ಬ್ರಾಂಚ್ ಮತ್ತು ಆಂಟಿ-ಎಕ್ಸ್‌ಟಾರ್ಶನ್ ಸೆಲ್ (ಎಇಸಿ) ಕೆಲವು ವರ್ಷಗಳಿಂದ ಆತನ ಜಾಡು ಹಿಡಿದಿತ್ತು. ಮೂಲತಃ ಕರ್ನಾಟಕದ ಉಡುಪಿಯವನಾದ ಪೂಜಾರಿ ನವಿ ಮುಂಬೈನ ವಾಶಿ ಮತ್ತು ಮುಂಬೈನ ವಿಕ್ರೋಲಿಯಲ್ಲಿ ಆತನ ಪೋಷಕರು ಮತ್ತು ಇತರ ಕುಟುಂಬ ಸದಸ್ಯರೊಂದಿಗೆ ವಾಸಿಸುತ್ತಿದ್ದರು.

ಪೂಜಾರಿಯು ಆರಂಭದಲ್ಲಿ ಕುಮಾರ್ ಪಿಳ್ಳೈ ಗ್ಯಾಂಗ್‌ನೊಂದಿಗೆ ಕೆಲಸ ಮಾಡಲು ಪ್ರಾರಂಭಿಸಿದ್ದ, ನಂತರ ತನ್ನ ಸ್ವಂತ ಗ್ಯಾಂಗ್ ಅನ್ನು ಪ್ರಾರಂಭಿಸುವ ಮೊದಲು ಛೋಟಾ ರಾಜನ್‌ನ ಗ್ಯಾಂಗ್‌ಗೆ ಸೇರಿಕೊಂಡಿದ್ದ.

ಮತ್ತಷ್ಟು ಓದಿ: Chhota Rajan: ಭೂಗತ ಪಾತಕಿ ಛೋಟಾ ರಾಜನ್​ ಏಮ್ಸ್​​ಗೆ ದಾಖಲು; ಜಾಮೀನು ನೀಡಬೇಡಿ ಎಂದು ಸಿಬಿಐನಿಂದ ಅರ್ಜಿ

ಪೂಜಾರಿ ವಿವಿಧ ಕ್ರಿಮಿನಲ್ ಪ್ರಕರಣಗಳಲ್ಲಿ ಬೇಕಾಗಿದ್ದಾನೆ, ನಮ್ಮ ತಂಡವು ಅವನನ್ನು ಬಂಧಿಸಿ ಗಡೀಪಾರು ಮಾಡುವ ಮೂಲಕ ಬೆಳಗ್ಗೆ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕರೆತಂದರು ಎಂದು ಪೊಲೀಸರು ತಿಳಿಸಿದ್ದಾರೆ. ಆತ 2005ರಲ್ಲಿ ಭಾರತವನ್ನು ತೊರೆದಿದ್ದ, ಆತನ ವಿರುದ್ಧ ರೆಡ್ ಕಾರ್ನರ್ ನೋಟಿಸ್ ನೀಡಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?